Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾವೂ ಕೇಳಿದಾಗ ಅಕ್ಕಿ ಇಲ್ಲ ಅಂದ್ರು… ಚುನಾವಣೆಗಾಗಿ ಅಕ್ಕಿ‌ ಕೊಟ್ಟು.. ಈಗ ನಿಲ್ಲಿಸಿದರು : ಕೇಂದ್ರ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಕಿಡಿ

---Advertisement---

ಬೆಂಗಳೂರು: ಕೇಂದ್ರ ಸರ್ಕಾರ ಇತ್ತಿಚೆಗಷ್ಟೇ ಭಾರತ್ ಎಂಬ ಹೆಸರಿನಲ್ಲಿ ಕಡಿಮೆ ಬೆಲೆಯಲ್ಲಿ ಅಕ್ಕಿಯನ್ನು ದೇಶದಾದ್ಯಂತ ವಿತರಣೆ ಮಾಡಿತ್ತು. ಈಗ ಅಕ್ಕಿಯನ್ನು ನಿಲ್ಲಿಸಿದೆ. ಇದು ಚುನಾವಣೆಗಾಗಿ ಮಾಡಿದ ಕಾರ್ಯ ಎಂದು ಕೇಂದ್ರ ಸರ್ಕಾರದ ಮೇಲೆ ಸಿಎಂ ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ ರಾಂ ಅವರ ಪುಣ್ಯತಿಥಿ. ವಿಧನಾಸೌಧದ ದ್ವಾರದ ಬಳಿ ಇರುವ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಅವರನ್ನು ನೆನೆದು ಗೌರವ ಸಲ್ಲಿಕೆ ಮಾಡಲಾಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಅಕ್ಕಿಯ ವಿಚಾರಕ್ಕೆ ಕೇಂದ್ರ ಸರ್ಕಾರ ಮಾಡಿದ್ದನ್ನು ಪ್ರಸ್ತಾಪಿಸಿದ್ದಾರೆ. ಕೇಂದ್ರ ಸರ್ಕಾರ ಆರಂಭಿಸಿದ್ದ ಭಾರಯ್ ಅಕ್ಕಿ ಯೋಜನೆಯನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದಾನೇ ಇದು ಚುನಾವಣೆಗೋಸ್ಕರ ಆರಂಭಿಸಿದ್ದ ಯೋಜನೆ ಎಂಬುದು ಸ್ಪಷ್ಟವಾಗುತ್ತದೆ.

 

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಅನ್ನ ಭಾಗ್ಯ ಯೋಜನೆಗಾಗಿ ಅಕ್ಕಿಯನ್ನು ಕೇಳಿದಾಗ, ಭಾರತೀಯ ಆಹಾರ ನಿಗಮದಲ್ಲಿ ದಾಸ್ತಾನು ಶೇಖರಣೆ ಇದ್ದರು ನೀಡಲಿಲ್ಲ. ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿಯೇ ಅಕ್ಕಿಯನ್ನು ನೀಡಲಿಲ್ಲ. ಹೀಗಾಗೊ ಜನರಿಗೆ ನಾವೂ ಹೆಚ್ಚುವರಿಯಾಗಿ ಹಣ ನೀಡಬೇಕಾಯಿತು ಎಂದಿದ್ದಾರೆ.

ಇದೇ ವೇಳೆ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರನ್ನು ನೆನೆದು, ಅವರು ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್ ವ್ಯಕ್ತಿ. ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ದೇಶದಲ್ಲಿ ತೀವ್ರ ಆಹಾರದ ಕೊರತೆಯುಂಟಾಗಿ, ಬೇರೆ ದೇಶಗಳ ಮುಂದೆ ಬೇಡಬೇಕಾದ ಪರಿಸ್ಥಿತಿ ಇತ್ತು. ಆದರೆ ಜಗಜೀವನರಾಂ ಅವರು ಹೊಸ ತಳಿಗಳ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳ ಮೂಲಕ ಆಹಾರ ಭದ್ರತೆಯನ್ನು ಒದವಿಸಿದರು ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಆಗಸ್ಟ್ 17ರ ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಶುಭಫಲ, ಹಣಕಾಸಿನಲ್ಲಿ ಲಾಭದ ಯೋಗ!

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

Leave a Comment