Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚುನಾವಣೆ ವೇಳೆ ಬರ್ತಿದ್ದ ಮೋದಿ, ಅಮಿತ್ ಶಾ ಈಗ ಎಲ್ಲಿ : ರಾಮಲಿಂಗಾ ರೆಡ್ಡಿ ಆಕ್ರೋಶ

---Advertisement---

ಬೆಂಗಳೂರು: ಕಾವೇರಿಗಾಗಿ ಬೆಂಗಳೂರು ಬಂದ್ ಬಳಿಕ ಕರ್ನಾಟಕ ಬಂದ್ ಮಾಡಲಾಗುತ್ತಿದೆ. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೇಂದ್ರ ಸಚಿವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣಾ ಸಮಯದಲ್ಲಿ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದವರು, ಈಗ ಎಲ್ಲಿ ಎಂದೇ ಪ್ರಶ್ನಿಸಿದ್ದಾರೆ.

ರಾಜ್ಯದ ಜನರ ವೋಟ್ ಮಾತ್ರ ಅವರಿಗೆ ಬೇಕು. ಕಾವೇರಿ ಸಮಸ್ಯೆಯನ್ನು ಇತ್ಯರ್ಥಗೊಳಿಸುವುದು ಬೇಡವಾ..? ನೀರಿನ ವಿಚಾರದಲ್ಲಿ ಇಷ್ಟೆಲ್ಲಾ ಸಮಸ್ಯೆಗಳು ಆಗುತ್ತಿದ್ದರು ಪ್ರಧಾನಿ ಮೋದಿ ಮೌನವಹಿಸಿದ್ದಾರೆ. ಚುನಾವಣಾ ಸಮಯದಲ್ಲಿ ಮಾತ್ರ ಎಷ್ಟು ಬಾರಿ ರಾಜ್ಯಕ್ಕೆ ಬಂದರೂ. ಚುನಾವಣಾ ಪ್ರಚಾರದಲ್ಲಿ ನಿರಂತರವಾಗಿ ಪಾಲ್ಗೊಂಡಿದ್ದರು. ಈಗ ಎಲ್ಲಿ ಹೋಗಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯ ಆಡಳಿತದ ಅವಧಿಯಲ್ಲಿಯೇ ಪ್ರಾಧಿಕಾರದ ರಚನೆಯಾಗಿತ್ತು. ಅವರು ಅಧಿಕಾರಕ್ಕೆ ಬಂದು 9 ವರ್ಷಗಳು ಆದರೂ ಯಾಕೆ ಇನ್ನು ಪರಿಹಾರ ಕಂಡು ಹಿಡಿಯಲಿಲ್ಲ. ತಮ್ಮ ಬೇಳೆ ಬೇಯಿಸಿಕೊಳ್ಳಲು ಮಾತ್ರ ರಾಜಕೀಯ ಮಾಡುತ್ತಾರೆ. ಕಾಂಗ್ರೆಸ್ ಈ ರೀತಿ ಯಾವತ್ತು ನಾಡಿನ ವಿಚಾರವಾಗಿ ದ್ರೋಹ ಮಾಡಿಲ್ಲ. ಆದರೆ ಬಿಜೆಪಿಯೇ ನಾಡದ್ರೋಹಿ ಪಕ್ಷ. ಯಾರೂ ಕೂಡ ಕಲ್ಲು ತೂರಾಟ ಮಾಡಬಾರದು ಎಂದು ಹೋರಾಟಗಾರರಿಗೂ ಇದೇ ವೇಳೆ ಮನವಿ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...