ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕಲಬುರಗಿ: ಸಂಸತ್ ಒಳಗೆ ಗೊಂದಲದ ವಾತಾವರಣ ಸರತಷ್ಟೀ ಮಾಡಿ, ದಾಳಿ ಮಾಡಿದ್ದಕ್ಕೆ ಸಂಸದ ಪ್ರತಾಪ್ ಸಿಂಹ ನೀಡಿದ ಪಾಸ್ ಗಳೇ ಕಾರಣ. ಹೀಗಾಗಿ ಸಚಿವ ಪ್ರಿಯಾಂಕ್ ಖರ್ಗೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಸಂಸತ್ ಮೇಲೆ ದಾಳಿ ಮಾಡಿದ ಬಳಿಕ ಸಂಸದ ಪ್ರತಾಪ್ ಸಿಂಹ ಎಲ್ಲಿದ್ದಾರೆ..? ಅವರಿಂದಾಗಿ ಇಡೀ ರಾಜ್ಯವೇ ತಲೆ ತಗ್ಗಿಸುವಂತೆ ಆಗಿದೆ. ಎಲ್ಲಾ ವಿಚಾರಕ್ಕೂ ಮಾಧ್ಯಮದ ಮುಂದೆ ಬರುವ ಪ್ರತಾಪ್ ಸಿಂಹ ಈಗ ಎಲ್ಲೂ ಕಾಣಿಸುತ್ತಿಲ್ಲ. ಈ ಘಟನೆ ಬಗ್ಗೆ ಕಾಂಗ್ರೆಸ್ ನವರು ಮಾತನಾಡಬಾರದಂತೆ. ಘಟನೆ ಬಗ್ಗೆ ಅಮಿತ್ ಶಾ ಇಲ್ಲಿಯವರೆಗೂ ಒಂದೇ ಒಂದು ಹೇಳಿಕೆ ನೀಡಿಲ್ಲ. ಯಾಕೆ..?

ದೇಶದಲ್ಲಿರುವ ನಿರುದ್ಯೋಗ ಸಮಸ್ಯೆಯೇ ಸಂಸತ್ ದಾಳಿಗೆ ಕಾರಣ. ಈ ಬಗ್ಗೆ ನಮ್ಮ ನಾಯಕ ರಾಹುಲ್ ಗಾಂಧಿ ಹೇಳಿರುವುದರಲ್ಲಿ ಯಾವುದೇ ತಪ್ಪಿಲ್ಲ. ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ನಮ್ಮ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಎಷ್ಟಿದೆ ಗೊತ್ತಾ..? ಇಂಥಹ ಗಂಭೀರ ವಿಚಾರಕ್ಕೆ ರಾಜಕೀಯ ಲೇಪ ಮಾಡುವುದು ಸರಿಯಲ್ಲ ಎಂದಿದ್ದಾರೆ. ಇದೆ ವೇಳೆ ಸಿಟಿ ರವಿ ಅವರ ಬಗ್ಗೆಯೂ ಗರಂ ಆಗಿದ್ದು, ಮೊದಲು ತಮ್ಮ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಪಡೆದು, ಬಳಿಕ ಮಾತನಾಡಲಿ ಎಂದಿದ್ದಾರೆ.
ಸಂಸತ್ ಮೇಲೆ ದಾಳಿ ಮಾಡಿದವರ ಇಂಚಿಂಚು ವಿಚಾರಣೆಯನ್ನು ಪೊಲೀಸಿನವರು ಮಾಡುತ್ತಿದ್ದಾರೆ. ಪ್ರತಾಪ್ ಸಿಂಹ ಅವರು ನೀಡಿದ ಪಾಸ್ ನಿಂದಾಗಿಯೇ ಅವರಿಗೆ ಸುಲಭ ಮಾರ್ಗ ಸಿಕ್ಕಿತು ಎಂಬ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್