Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಬಾರಿ ಸಿದ್ದರಾಮಯ್ಯ ಎಲ್ಲೇ ಸ್ಪರ್ಧೆ ಮಾಡಿದ್ರೂ ಸೋಲು ಮಾತ್ರ ಖಚಿತ  : ಸಚಿವ ಶ್ರೀರಾಮುಲು

Facebook
Twitter
Telegram
WhatsApp

 

ಕುರುಗೋಡು. (ಜ.31) : ರಾಜ್ಯದ ಜನರಿಗೆ ಮಂಕು ಬೂದಿ ಹಚ್ಚುತ್ತಾ ಸುಳ್ಳು ಮತ್ತು ಜೊಳ್ಳು ಯಾತ್ರೆಗಳನ್ನು ಎರಡು ಪಕ್ಷಗಳು ಮಾಡಿಕೊಂಡು ಹೋಗುತ್ತಿವೆ ಇವು ಯಾವು ಕಾರ್ಯ ರೂಪಕ್ಕೆ ಬರಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು.

ಸಮೀಪದ ಎಮ್ಮಿಗನೂರು ಗ್ರಾಮದ ಛಲವಾದಿ ಕಾಲೋನಿಯಲ್ಲಿ ನೆರೆವೆರಿದ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಯಾತ್ರೆಗಳು ಮಾಡಿದರು ಮುಂದೆ ಅಧಿಕಾರಕ್ಕೆ ಬರಲ್ಲ ಮತ್ತೆ ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯಲ್ಲಿದೆ ಎಂದರು.

ಸಿದ್ದರಾಮಯ್ಯ ನವರು ಮೊದಲು ಬಾದಾಮಿ, ಈಗ ಕೋಲಾರ, ವರುಣಾ ದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ ಅವ್ರು ಎಲ್ಲೇ ಸ್ಪರ್ಧೆ ಮಾಡಿದ್ರೂ ಈ ಬಾರಿ ಅವರ ಸೋಲುವುದು ಮಾತ್ರ ನಿಚ್ಚಿತ ಎಂದರು.

ಈ ಬಾರಿ ಬಳ್ಳಾರಿ ಯಿಂದಲೇ ಅಂದ್ರೆ ಗ್ರಾಮೀಣ ಅಥವಾ ಸಂಡೂರು ಕ್ಷೇತ್ರಗಳಿಂದ ನಾನು ಸ್ಪರ್ಧೆ ಮಾಡುತ್ತೇನೆ ಎಂದು ತಿಳಿಸಿದರು.

ಮಾಜಿ ಸಚಿವ ಜನಾರ್ದನ ರೆಡ್ಡಿ ಯನ್ನು ಬಿಜೆಪಿ ಪಕ್ಷಕ್ಕೆ ವರಿಷ್ಟರು ಕರೆತರುವ ವಿಷಯದ ಬಗ್ಗೆ ನನಗೆ ಗೊತ್ತಿಲ್ಲ ಇದರ ಬಗ್ಗೆ ಈಗಾಲೆ ಏನು ಅಂತ ಹೇಳಕಾಗಲ್ಲ ಎಂದು ಹೇಳಿದರು.

ಮುಂದೆ ನಡೆಯುವ ವಿಧಾನಸಭಾ ಚುನಾವಣೆ ಯಲ್ಲಿ ಸುಮಾರು 130 ರಿಂದ 140 ಸ್ಥಾನಗಳನ್ನು ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿವೆ ಎಂದರು.

ಕಂಪ್ಲಿ ಕ್ಷೇತ್ರದಲ್ಲಿ ಶಾಸಕ ಗಣೇಶ್ ಅವ್ರು ಸಂವಿಧಾನ ಬದ್ದವಾಗಿ ರಾಜಕೀಯ ಮಾಡಬೇಕು, ಕಳೆದ ಕಾರ್ಯಕ್ರಮಗಳು ಮಾಡಿರೋದು ಅವರ ಸ್ಥಾನಕ್ಕೆ ಶೋಭೆಯಲ್ಲ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸುರೇಶ್ ಬಾಬು, ಮಾಜಿ ಲೋಕಸಭಾ ಸದಸ್ಯೆ ಜೆ. ಶಾಂತ, ಕಂಪ್ಲಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸಿ. ಆರ್. ಹನುಮಂತ, ಎಸ್ಟಿ ಸಮುದಾಯದ ಮುಖಂಡ ವಿ. ಕೆ. ಬಸಪ್ಪ, ಗ್ರಾಪಂ ಅಧ್ಯಕ್ಷೆ ಚನ್ನದಾಸರ ಅಂಜಿನಮ್ಮ ನಾರಾಯಣಪ್ಪ ಸೇರಿದಂತೆ ಗ್ರಾಮದ ಮುಖಂಡರು ಮತ್ತು ಕಾರ್ಯಕರ್ತರು ಇತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!