Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯಗೆ ಯಾವ ಕ್ಷೇತ್ರ ಬೆಸ್ಟ್..? ಕೆಎನ್ ರಾಜಣ್ಣ ಹೇಳಿದ್ದೇನು..?

Facebook
Twitter
Telegram
WhatsApp

ತುಮಕೂರು: 2023ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಆದರೆ ಚುನಾವಣಾ ಪ್ರಚಾರದ ಅಬ್ಬರ ಮಾತ್ರ ಜೋರಾಗಿದೆ. ಈ ನಡುವೆ ಸಿದ್ದರಾಮಯ್ಯ ಅವರ ರಾಜಕೀಯದ ಭವಿಷ್ಯದ ಬಗ್ಗೆ ಹೆಚ್ಚು ಚರ್ಚೆಯಾಗುತ್ತಲೇ ಇರುತ್ತದೆ. ಅದುವೆ ಸಿದ್ದರಾಮಯ್ಯ ಕೋಲಾರದಲ್ಲಿ ನಿಲ್ಲಬೇಕಾ..? ವರುಣಾ ಕ್ಷೇತ್ರ ಬೆಸ್ಟ್ ಹಾ ಎಂಬ ಪ್ರಶ್ನೆಗಳು ಓಡಾಡುತ್ತಿವೆ.

ಈ ಮಧ್ಯೆ ಕಾಂಗ್ರೆಸ್ ಮಾಜಿ ಶಾಸಕ ಕೆ ಎನ್ ರಾಜಣ್ಣ ಈ ಬಗ್ಗೆ ಸಲಹೆ ಸೂಚನೆ ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೋಲಾರಕ್ಕಿಂತ ವರುಣಾನೇ ಸೇಫೇಸ್ಟ್ ಪ್ಲೇಸ್. ವರುಣಾದಲ್ಲಿ ಯಾವುದೆ ರಿಸ್ಕ್ ಇಲ್ಲದೆಯೂ ಗೆಲ್ಲಬಹುದು. ಯಾಕಂದ್ರೆ ಕೋಲಾರದಲ್ಲಿ ಈಗಾಗಲೇ ಸಿದ್ದರಾಮಯ್ಯ ಅವರ ವಿರುದ್ಧ ಕರಪತ್ರ ಹಂಚುತ್ತಿದ್ದಾರೆ. ಪರಮೇಶ್ವರ ಅವರನ್ನು ಸಿದ್ದರಾಮಯ್ಯ ಅವರು ಸೋಲಿಸಿದ್ರು ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆ ನೋಡಿದರೆ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರ ಉತ್ತಮ ಎಂದಿದ್ದಾರೆ.

ಇನ್ನು ಈ ಬಾರಿ ವರುಣಾ ಕ್ಷೇತ್ರವನ್ನು ಮಗ ಯತೀಂದ್ರ ಅವರಿಗೆ ಸಿದ್ದರಾಮಯ್ಯ ಬಿಟ್ಟುಕೊಟ್ಟಿದ್ದು ಆ ಬಗ್ಗೆಯೂ ಮಾತನಾಡಿರುವ ರಾಜಣ್ಣ, ಯತೀಂದ್ರ ಅವರಿಗೆ ಯಾವುದಾದರೂ ಬೇರೆ ಅವಕಾಶ ಕೊಡಬಹುದು. ಸಿದ್ದರಾಮಯ್ಯ ಅವರು ವರುಣಾದಿಂದ ಸ್ಪರ್ಧೆ ಮಾಡಿದರೆ ಅವರಿಗೆ ಸಮಯದ ಉಳಿತಾಯವೂ ಆಗುತ್ತದೆ. ಈ ಕ್ಷೇತ್ರದಲ್ಲಿ ನಿಂತು ಬೇರೆ ಕ್ಷೇತ್ರವನ್ನು ನೋಡಿಕೊಳ್ಳಬಹುದು ಎಂದು ಕೆ ಎನ್ ರಾಜಣ್ಣ ಸಲಹೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಜ್ಞಾನಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಗಾಳಿಪಟ ಹಬ್ಬ : ಕಣ್ಮನ ಸೆಳೆದ ವಿವಿಧ ಬಗೆಯ ಗಾಳಿಪಟಗಳು

  ಸುದ್ದಿಒನ್, ಚಿತ್ರದುರ್ಗ, ಜುಲೈ.27 : ಗಾಳಿಪಟಹಬ್ಬ ನಮ್ಮ ಶಾಲೆಯ ವಿಶೇಷ ಹಬ್ಬಗಳಲ್ಲಿ ಒಂದಾಗಿದೆ. ಆಷಾಢ ಶುದ್ಧ ಏಕಾದಶಿಯ ದಿನದಂದು  ದೇಶದ ಅನೇಕ ಭಾಗಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಕಾರ್ಯದರ್ಶಿ ಡಾ.ಕೆ ರಾಜೀವಲೋಚನ್

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!