Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದ ಯಾವ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಿದೆ ?

---Advertisement---

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮಳೆಯಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾದ ವರದಿಯಾಗಿದೆ. ಕರ್ನಾಟಕ ರಾಜ್ಯ ವಿಕೋಪ ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಪ್ರಕಟಿಸಿದ ಮಾಹಿತಿಯಂತೆ, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ದಾಖಲಾಗಿದ್ದರೂ ಬಹುತೇಕ ಕಡೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಕಾಯ್ಕಿಣಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 135 ಮಿ.ಮೀ ಮಳೆಯಾಗಿದೆ. ಬೀದರ್ ಜಿಲ್ಲೆಯ ಕಮಲಾಪುರ ತಾಲೂಕಿನ ಬೋಂತಿಯಲ್ಲಿ 111 ಮಿ.ಮೀ ಮಳೆ ಸುರಿದಿದೆ. ಉಡುಪಿ ಜಿಲ್ಲೆಯ ಬೈಂದೂರು 73 ಮಿ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು 61.5 ಮಿ.ಮೀ ಮಳೆಯೊಂದಿಗೆ ಮುಂದಿನ ಸ್ಥಾನದಲ್ಲಿವೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಸೀಬಿ ಅಗ್ರಹಾರದಲ್ಲಿ 56 ಮಿ.ಮೀ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗಂಗನಹಳ್ಳಿಯಲ್ಲಿ 54.5 ಮಿ.ಮೀ, ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಸಿಂದಘಟ್ಟ ಹಾಗೂ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬೆಳಗೂರಿನಲ್ಲಿ ತಲಾ 53.5 ಮಿ.ಮೀ ಮಳೆಯಾಗಿದೆ. ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಬಿರುನಾಣಿಯಲ್ಲಿ 52 ಮಿ.ಮೀ ಮಳೆ ದಾಖಲಾಗಿದೆ.ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪರವಾಡದಲ್ಲಿ 49 ಮಿ.ಮೀ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೊರ್ಲಪರ್ತಿಯಲ್ಲಿ 47 ಮಿ.ಮೀ, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಆಲಂಗೂರಿನಲ್ಲಿ 44.5 ಮಿ.ಮೀ ಹಾಗೂ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ತೆಂಗಲಿಯಲ್ಲಿ 38.5 ಮಿ.ಮೀ ಮಳೆಯಾಗಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ 32 ಮಿ.ಮೀ, ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ 30 ಮಿ.ಮೀ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿಯಲ್ಲಿ 29 ಮಿ.ಮೀ ಮಳೆ ದಾಖಲಾಗಿದೆ.
ಇನ್ನು ಬಳ್ಳಾರಿ, ಧಾರವಾಡ, ಮೈಸೂರು, ಹಾಸನ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಹಾವೇರಿ, ಚಾಮರಾಜನಗರ, ದಾವಣಗೆರೆ, ವಿಜಯನಗರ, ಯಾದಗಿರಿ, ವಿಜಯಪುರ ಹಾಗೂ ಗದಗ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now