Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನಾರ್ದನ ರೆಡ್ಡಿ ಯಾವ ಪಕ್ಷಕ್ಕೆ ಸೇರುತ್ತಾರೆ..? : ಹೊಸ ಸುಳಿವು ನೀಡಿದ ಬಿಎಸ್ವೈ

Facebook
Twitter
Telegram
WhatsApp

ಬೆಂಗಳೂರು: ಹಲವು ಕೇಸ್ ಗಳಲ್ಲಿ ಸಿಲುಕಿರುವ ಜನಾರ್ದನ ರೆಡ್ಡಿ 14 ವರ್ಷಗಳ ಕಾಲ ವನವಾಸವನ್ನೇ ಅನುಭವಿಸಿದರು. ಆದರೆ ಈಗ ರಾಜಕೀಯದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದು, ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿಯೇ ಮಾಡುತ್ತೀನಿ ಎಂಬ ಪಣ ತೊಟ್ಟಿದ್ದಾರೆ. ಬಿಜೆಪಿಯಿಂದ ಟಿಕೆಟ್ ಗಾಗಿ ತಾಳ್ಮೆಯಿಂದ ಕಾದಿದ್ದಾರೆ. ಆದ್ರೆ ಟಿಕೆಟ್ ಸಿಗದೆ ಇದ್ದಾಗ ರೊಚ್ಚಿಗೆದ್ದ ಜನಾರ್ದನ ರೆಡ್ಡಿ, ಒಂಟಿಯಾಗಿಯೇ ಹೋರಾಟ ಮಾಡಲು ಸಜ್ಜಾಗಿದ್ದರು. ಆಪ್ತ ಮೂಲಗಳ ಪ್ರಕಾರ, ರೆಡ್ಡಿ ಅವರು ಸ್ವತಂತ್ರವಾಗಿಯೇ ಪಕ್ಷ ಕಟ್ಟಿ ನಿಲ್ಲುತ್ತಾರೆ ಎಂಬ ಮಾತು ಇತ್ತು. ಆದ್ರೆ ಇದೀಗ ಮಾಜಿ ಸಿಎಂ ಯಡಿಯೂರಪ್ಪ ಬೇರೆಯದ್ದೆ ವಿಚಾರ ಹೇಳುತ್ತಿದ್ದಾರೆ.

ಜನಾರ್ದನ ರೆಡ್ಡಿ ಅವರ ಬಗ್ಗೆ ಮಾತನಾಡಿದ ಬಿಎಸ್ವೈ, ಜನಾರ್ದನ ರೆಡ್ಡಿ ಅವರು ಎಲ್ಲಿಯೂ ಹೋಗುವುದಿಲ್ಲ. ಅವರು ಬಿಜೆಪಿಯಲ್ಲಿಯೇ ಇರುತ್ತಾರೆ. ಅವರನ್ನು ನೆಗ್ಲೆಕ್ಟ್ ಮಾಡುವ ಪ್ರಶ್ನೆಯೇ ಇಲ್ಲ. ಅವರ ಮೇಲೆ ಕೆಲವು ಪ್ರಕರಣಗಳು ಇದ್ದಾವೆ. ಅದೆಲ್ಲ ಕ್ಲಿಯರ್ ಆಗಬೇಕು. ಆಮೇಲೆ ಅವರನ್ನು ಪಕ್ಷಕ್ಕೆ ಕರೆದುಕೊಳ್ಳುತ್ತೇವೆ ಎಂದಿದ್ದಾರೆ.

ಇನ್ನು ಬಳ್ಳಾರಿಗೆ ಹೋಗುವುದಕ್ಕೆ ಜನಾರ್ದನ ರೆಡ್ಡಿಗೆ ಇನ್ನು ಅನುಮತಿ ಸಿಕ್ಕಿಲ್ಲ. ಈ ಕಾರಣದಿಂದ ರೆಡ್ಡಿ ಅವರು ಗಂಗಾವತಿಯಲ್ಲಿ ಮನೆ ಮಾಡಿದ್ದು, ಅಲ್ಲಿಂದಾನೇ ರಾಜಕೀಯ ವೃತ್ತಿ ಆರಂಭಿಸಲು ಯೋಜನೆ ರೂಪಿಸಿದ್ದಾರೆ. ಈ ಬಗ್ಗೆ ಮಾತನಾಡಿದ್ದ ಬಿಎಸ್ವೈ, ಅವರು ಗಂಗಾವತಿಯಲ್ಲಿ ಮನೆ ಮಾಡಿರುವುದರಿಂದ ಈ ಗೊಂದಲ ಶುರುವಾಗಿದೆ. ಆದರೆ ಅವರು ಎಲ್ಲೂ ಹೋಗುವುದಿಲ್ಲ ನಮ್ಮ ಜೊತೆಗೆ ಇರಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20  : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರುಗಳಾದ ಎಸ್.ಬಸವರಾಜು, ಕೆ.ಚಂದ್ರಣ್ಣ,

ಬಿ.ಎನ್.ಚಂದ್ರಪ್ಪನವರ ಗೆಲುವು ಖಚಿತ : ನಗುತಾ ರಂಗನಾಥ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರ ಎಲ್ಲೆಡೆ ಮತದಾರರ ಉತ್ತಮ ಒಲವು

ಮಂದಕೃಷ್ಣ ಮಾದಿಗ ದಲಿತರನ್ನು ದಿಕ್ಕು ತಪ್ಪಿಸುವ ಕುತಂತ್ರ ಮಾಡುತ್ತಿದ್ದಾರೆ : ಕೆ.ಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ನರೇಂದ್ರಮೋದಿ ಮೂರನೆ ಬಾರಿಗೆ ದೇಶದ ಪ್ರಧಾನಿಯಾದಾಗ ಮಾತ್ರ ಮಾದಿಗರ ಮೀಸಲಾತಿ ವರ್ಗಿಕರಣ ಸಾಧ್ಯ ಎಂದು

error: Content is protected !!