Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಳ್ಳಕೆರೆಯಲ್ಲಿ ಬಸ್ ಹತ್ತುವ ವೇಳೆ ಬ್ಯಾಗ್ ನಲ್ಲಿದ್ದ ಆಭರಣವನ್ನೆ ಕದ್ದ ಖದೀಮರು..!

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 30 : ಬಸ್ ನಲ್ಲಿ ಪ್ರಯಾಣಿಸುವಾಗ, ಒಬ್ಬೊಬ್ಬರೆ ಓಡಾಡುವಾಗ ಚಿನ್ನಾಭರಣಗಳ ಬಗ್ಗೆ ಎಚ್ಚರವಿರಲಿ ಎಂದು ಪೊಲೀಸರು ಕೂಡ ಎಚ್ಚರಿಸುತ್ತಲೇ ಇರುತ್ತಾರೆ. ಅದರಲ್ಲೂ ಬಸ್ ನಲ್ಲಿ ಓಡಾಡುವವರು ಚಿನ್ನಾಭರಣಗಳ ಮೇಲೆ ಗಮನ ಹರಿಸಬೇಕು. ಇವತ್ತು ಬಸ್ ಹತ್ತುವ ವೇಳೆ, ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣವನ್ನೇ ಕಳ್ಳ ಕದ್ದಿದ್ದಾನೆ. ಚಳ್ಳಕೆರೆ ಕೆಎಸ್ಆರ್ಟಿಸಿ ಬಸ್ ಹತ್ತುವ ವೇಳೆ ಈ ಘಟನೆ ನಡೆದಿದೆ.

ರಾಯದುರ್ಗದ 49 ವರ್ಷದ ಟಿ.ಚೂಡಾಮಣಿ ಎಂಬ ಮಹಿಳೆಯ ಒಡವೆ ಕಳ್ಳತನವಾಗಿರುವುದು. ಚೂಡಾಮಣಿ ಅವರು ಚಳ್ಳಕೆರೆಯಿಂದ ರಾಯದುರ್ಗಕ್ಕೆ ಪ್ರಯಾಣಿಸಲು ಮಧ್ಯಾಹ್ನ 2.30 ಕ್ಕೆ ಬಸ್ ನಿಲ್ದಾಣಕ್ಕೆ ಬಂದಿದ್ದರು. ಮಹಿಳೆ ಬಂದ ಕೆಲವೇ ಹೊತ್ತಲ್ಲಿ ಬಸ್ ಆಗಮಿಸಿದೆ. ಜನಜಂಗುಳಿಯ ಬೇರೆ ಇತ್ತು. ಆದರೂ ಅದರ ಮಧ್ಯದಲ್ಲೇ ಮಹಿಳೆ ಬಸ್ ಹತ್ತಿದ್ದಾರೆ. ಜನಜಂಗುಳಿ ಇದ್ದ ಕಾರಣ ಬ್ಯಾಗ್ ನ ಜಿಪ್ ಓಪನ್ ಆಗಿರುವುದು ಗಮನಕ್ಕೆ ಬಂದಿಲ್ಲ. ಬಸ್ ಹತ್ತಿದ ಮೇಲೆ ಬ್ಯಾಗ್ ನೋಡಿಕೊಂಡಿದ್ದಾರೆ. ಜೀಪ್ ಓಪನ್ ಆಗಿದ್ದನ್ನು ಕಂಡು ಗಾಬರಿಯಾಗಿದ್ಧಾರೆ. ಕೂಡಲೇ ಕೂಗಿಕೊಂಡಾಗ ಸಾರ್ವಜನಿಕರು ಆಕೆಯ ನೆರವಿಗೆ ದಾವಿಸಿದ್ಧಾರೆ.

ಕೂಡಲೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಲಾಗಿದೆ. ದೂರಿನಲ್ಲಿ ಮಹಿಳೆ ತನ್ನ ವ್ಯಾನಿಟಿಬ್ಯಾಗ್‌ ನಲ್ಲಿ ಏನೆಲ್ಲ ವಸ್ತುಗಳು ಇದ್ದವು ಎಂಬುದನ್ನು ತಿಳಿಸಿದ್ದಾರೆ. ಮಹಿಳೆ ಹೇಳಿದ ಪ್ರಕಾರ, ವ್ಯಾನಿಟಿಬ್ಯಾಗ್‌ನಲ್ಲಿ 90 ಸಾವಿರ ಮೌಲ್ಯದ ಬಂಗಾರದ ಬಳೆ, 60 ಸಾವಿರ ಹರಳಿನ ಬಳೆ, 25 ಸಾವಿರ ಮೌಲ್ಯದ ಉಂಗುರ, 15 ಸಾವಿರ ಮೌಲ್ಯದ ಕಿವಿ ಓಲೆ, 5 ಸಾವಿರ ಮೌಲ್ಯದ ರಿಂಗ್, 15 ಸಾವಿರ ಮೌಲ್ಯದ ಬಂಗಾರದ ಜುಮುಕಿ, 20 ಸಾವಿರ ಮೌಲ್ಯ ಗುಂಡಿನ ಸರ, 40 ಸಾವಿರ ಬ್ರಾಸ್‌ಲೇಟ್ ಸೇರಿದಂತೆ ಒಟ್ಟು 27 ಲಕ್ಷದ 87 ಗ್ರಾಂ ಬಂಗಾರದ ಆಭರಣ ಕಳ್ಳತನವಾಗಿದೆ. ಠಾಣಾಧಿಕಾರಿ ಶ್ರೀನಿವಾಸ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!