ಬೆಂಗಳೂರು: ಓಂ ಶಕ್ತಿ ಮಾಲಾಧಾರಿಗಳಿಗೆ ಚಿತ್ರದುರ್ಗ ಶಾಸಕ ವಿರೇಂದ್ರ ಪಪ್ಪಿ ಅವರ ಕಾರು ಗುದ್ದಿರುವ ಘಟನೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ಈ ಕಾರು ಅಪಘಾತದಲ್ಲಿ ಓಂ ಶಕ್ತಿ ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿವೆ.
ಶಾಸಕ ವೀರೇಂದ್ರ ಪಪ್ಪಿ ಅವರು ಚಿತ್ರದುರ್ಗದಿಂದ ಬೆಂಗಳೂರಿನ ಕಡೆಗೆ ಪಯಣ ಬೆಳೆಸಿದ್ದರು. ಈ ವೇಳೆ ಕಾರು ಅಪಘಾತ ಸಂಭವಿಸಿದರ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ವಿರೇಂದ್ರ ಪಪ್ಪಿ ಅವರ ಕಾರಿನಲ್ಲಿ ವಿರೇಂದ್ರ ಪಪ್ಪಿ ಹಾಗೂ ಕಾರು ಚಾಲಕ ಸೇರಿ ಮೂವರು ಇದ್ದರು. ಅಪಘಾತ ಹೇಗಾಯ್ತು ಎಂಬ ಬಗ್ಗೆ ಪೊಲೀಸರು ಇನ್ನಷ್ಟೇ ತನಿಖೆ ನಡೆಸಲಿದ್ದಾರೆ. ಆದರೆ ಈ ಘಟನೆಯಲ್ಲಿ ಓಮ ಶಕ್ತಿ ಮಾಲೆ ಹಾಕಿದ್ದ ಮೂವರಿಗೆ ಗಾಯವಾಗಿದೆ. ಬೇಗೂರು ಗ್ರಾಮದವರೇ ಆದ ಬಿಂದು, ರಂಗಮ್ಮ ಅವರಿಗೆ ಹೆಚ್ಚಿನ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೇ ಜಾಗದಲ್ಲಿ ಕಳೆದ ಕೆಲವು ದಿನಗಳ ಹಿಂದಷ್ಟೇ ಅಪಘಾತ ಸಂಭವಿಸಿತ್ತು. ಬೆಂಗಳೂರಿಗೆ ಬರುತ್ತಿದ್ದ ಕುಟುಂಬದ ಕಾರಿನ ಮೇಲೆ ಟ್ರಕ್ ಬಿದ್ದು ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ್ದರು. ಅದರಲ್ಲಿ ಮೂವರು ಮಕ್ಕಳು ಮೃತ ಪಟ್ಟಿದ್ದರು. ಈ ಘಟನೆ ಇಡೀ ರಾಜ್ಯದ ಮನಸ್ಸನ್ನ ಕದಲಿಸಿತ್ತು. ಅದು ಕೂಡ ಬೇಗೂರು ಭಾಗದಲ್ಲಿಯೇ. ಇದೀಗ ವಿರೇಂದ್ರ ಪಪ್ಪಿ ಅವರ ಕಾರು ಅಲ್ಲಿಯೇ ಅಪಘಾತವಾಗಿದೆ. ಸದ್ಯ ಸಾವು ನೋವಿನಂತ ಘಟನೆಗಳು ಸಂಭವಿಸಿಲ್ಲ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















