Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಮೊಗ್ಗದಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ ..?: ರಾಜನಂದಿನಿ ಮಾತಿಂದ ಏನಾಗುತ್ತೆ..?

Facebook
Twitter
Telegram
WhatsApp

ಶಿವಮೊಗ್ಗ: ವಿಧಾನಸಭೆ ಚುನಾವಣೆಗೆ ಇನ್ನು ಕೆಲವು ತಿಂಗಳುಗಳು ಇರುವಾಗಲೇ ಟಿಕೆಟ್ ಅಕಾಂಕ್ಷಿಗಳ ಪಟ್ಟಿ ಜೋರಾಗಿದೆ. ಅದರಲ್ಲೂ ಶಿವಮೊಗ್ಗದಲ್ಲಿ ಇದೀಗ ಕಾಂಗ್ರೆಸ್ ಟಿಕೆಟ್ ಯಾರಿಗೆ ಕೊಡಬಹುದು ಎಂಬ ಚರ್ಚೆ ಶುರುವಾಗಿದೆ. ಅದಕ್ಕೆಲ್ಲಾ ಕಾರಣ ಕಾಗೋಡು ತಿಮ್ಮಪ್ಪ ಅವರ ಪುತ್ರಿ ನೀಡಿದ ಹೇಳಿಕೆ.

ಶಿವಮೊಗ್ಗದಲ್ಲಿ ಕಾಗೋಡು ತಿಮ್ಮಪ್ಪ ಪುತ್ರಿ ಹೇಳಿಕೆ ಸುನಾಮಿ ಎಬ್ಬಿಸಿದೆ. ಡಾ ರಾಜನಂದಿನಿ 2023ರ ಚುನಾವಣೆ ಬಗ್ಗೆ ಮಾತನಾಡಿದ್ದಾರೆ. ಮುಂದಿನ ಚುನಾವಣೆಗೆ ನಮ್ಮ‌ತಂದೆಯೇ ಕಾಂಗ್ರೆಸ್ ನ ಅಭ್ಯರ್ಥಿ ಎಂದಿದ್ದಾರೆ. ನಮ್ಮ ತಂದೆಗೆ ಆ ಹುರುಪಿದೆ ಎಂದು ಸಾಗರ ಪಟ್ಟಣದಲ್ಲಿ ಸುದ್ದಿಗೋಷ್ಟಿ ನಡೆಸಿ‌ ಮಾಹಿತಿ ನೀಡಿದ್ದಾರೆ. ರಾಜನಂದಿನಿ ಅವರ ಮಾತಿನಿಂದ ಶಿವಮೊಗ್ಗದ ಕಾಂಗ್ರೆಸ್ ನಲ್ಲಿ ಚರ್ಚೆ ಶುರುವಾಗಿದೆ.‌

ಈ ಮಾತಿನ ನಂತರ ಬೇಳೂರು ಗೋಪಾಲಕೃಷ್ಣ ಅವರ ಮುಂದಿನ ನಡೆ ಏನು ಎಂಬ ಪ್ರಶ್ನೆ ಎದ್ದಿದೆ. ಗೋಪಾಲ ಕೃಷ್ಣ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ಸಿಗುವುದಿಲ್ಲವಾ ಎಂಬ ಪ್ರಶ್ನೆ ಎದ್ದಿದೆ. ಇದು ರಾಜನಂದಿನಿ ಹೇಳಿಕೆಯ ಬಳಿಕ ಎದ್ದಿರುವ ಚರ್ಚೆಯಾಗಿದೆ.

ಆರು ಬಾರಿ ಶಾಸಕರಾಗಿ, ಸಚಿವರಾಗಿ ಅಧಿಕಾರ ಅನುಭವಿಸಿದ್ದಾರೆ. ಆದರೆ ಈಗ ಅವರ ವಯಸ್ಸು 90 ವರ್ಷ. ಈಗಲೂ ಅವರು ಉತ್ಸಾಹವಿದೆ ನಮ್ಮ‌ತಂದೆಗೆ ಟಿಕೆಟ್ ಬೇಕು ಎಂದಿದ್ದಾರೆ. ಗೋಪಾಲಕೃಷ್ಣ ಅವರು ಟಿಕೆಟ್ ಸಿಗದೆ ಇರುವ ಕಾರಣ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಬಂದಿದ್ದಾರೆ. ಈ ಬಾರಿ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆಯೂ ಇದೆ. ಆದ್ರೆ ಈ ಬೆನ್ನಲ್ಲೇ ಕಾಗೋಡು ಅವರ ಮಗಳ ಹೇಳಿಕೆ ಚರ್ಚೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

error: Content is protected !!