Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮಂಡ್ಯದಿಂದ ಸ್ಪರ್ಧೆ ಮಾಡ್ತಿರುವುದು ರಮ್ಯಾ ಅಲ್ಲ.. ಕಾಂಗ್ರೆಸ್ ಫೈನಲ್ ಮಾಡಿದ ವ್ಯಕ್ತಿ ಇವರೇ ನೋಡಿ

---Advertisement---

 

 

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯ ಕಣ ಬಿಸಿಯಾಗಿ ಹಲವು ತಿಂಗಳುಗಳೇ ಕಳೆದು ಹೋಗಿದೆ. ಅದರಲ್ಲೂ ಕಾಂಗ್ರೆಸ್ ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್ ಒಂದಾಗಿದೆ. ಇದರ ನಡುವೆ ಸ್ವತಂತ್ರವಾಗಿ ಸ್ಪರ್ಧಿಸಿ, ಗೆದ್ದಿದ್ದ ಸುಮಲತಾ ಅಧಿಕೃತವಾಗಿ ಬಿಜೆಪಿಗೆ ಬೇರೆ ಸೇರಿದ್ದಾರೆ. ಮಂಡ್ಯದಿಂದಾನೇ ಸ್ಪರ್ಧೆ ಎಂದು ಹೇಳುತ್ತಿರುವ ಸುಮಲತಾಗೆ ಈ ಬಾರಿ ಬಿಜೆಪಿಯ ಟಿಕೆಟ್ ಕೈ ತಪ್ಪುವ ಎಲ್ಲಾ ಸಾಧ್ಯತೆಗಳು ಗೋಚರವಾಗುತ್ತಿವೆ. ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರೇ ಮಂಡ್ಯದ ಲೋಕಸಮರದಲ್ಲಿ ಯುದ್ದಕ್ಕೆ ನಿಲ್ಲಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

 

ಬಿಜೆಪಿಯಿಂದ ಟಿಕೆಟ್ ಕೈತಪ್ಪಿದರೆ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡೋಣಾ ಎಂದು ಸುಮಲತಾ ಯೋಚಿಸಿದ್ದಾರೆ ಎಂಬ ಮಾತು ಕೂಡ ಕೇಳಿ ಬರುತ್ತಿದೆ. ಆದರೆ ಇದರ ನಡುವೆ ರಮ್ಯಾ ಅವರ ಹೆಸರು ಕೂಡ ಪ್ರಸ್ತಾಪವಾಗಿದೆ. ಕ್ರೇಜ್ ಹಾಗೇ ಇರುವ ಕಾರಣ ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ರಮ್ಯಾ ನಿಲ್ಲಲಿದ್ದಾರೆ ಎನ್ನಲಾಗಿತ್ತು. ಈ ಎಲ್ಲಾ ಊಹಾಪೋಹಗಳ ನಡುವೆ ಕಾಂಗ್ರೆಸ್ ನಾಯಕರು ಈಗಾಗಲೇ ಮಂಡ್ಯ ಅಭ್ಯರ್ಥಿಯ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

 

ಮೂಲಗಳ ಪ್ರಕಾರ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, ಮಂಡ್ಯದಲ್ಲಿ ಸ್ಟಾರ್ ಚಂದ್ರು ಎಂದೇ ಫೇಮಸ್ ಆಗಿರುವ ಗುತ್ತಿಗೆದಾರ ವೆಂಕಟರಮಣೇಗೌಡ ಅವರ ಹೆಸರನ್ನು ಫೈನಲ್ ಮಾಡಿದೆಯಂತೆ. ಇವರು ಮಂಡ್ಯ ಭಾಗದಲ್ಲಿ ಸ್ಟಾರ್ ಚಂದ್ರು ಎಂದೇ ಖ್ಯಾತಿ ಪಡೆದಿದ್ದಾರೆ. ಇವರ ಮೂಲ ಹೆಸರು ವೆಂಕಟರಮಣೇಗೌಡ. ಎಲ್ಲಾ ಪಕ್ಷದ ನಾಯಕರಿಗೂ ಇವರು ಚಿರಪರಿಚಿತರಾಗಿದ್ದಾರೆ. ಈಗಾಗಲೇ ಸಚಿವ ಚೆಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಶಾಸಕರು ಸ್ಟಾರ್ ಚಂದ್ರುಗೆ ಟಿಕೆಟ್ ನೀಡಲು ಗ್ರೀನ್ ಸಿಗ್ನಲ್ ಕೂಡ ನೀಡಿದ್ದಾರಂತೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...