Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಡ್ಯದಿಂದ ಸ್ಪರ್ಧೆ ಮಾಡ್ತಿರುವುದು ರಮ್ಯಾ ಅಲ್ಲ.. ಕಾಂಗ್ರೆಸ್ ಫೈನಲ್ ಮಾಡಿದ ವ್ಯಕ್ತಿ ಇವರೇ ನೋಡಿ

Facebook
Twitter
Telegram
WhatsApp

 

 

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯ ಕಣ ಬಿಸಿಯಾಗಿ ಹಲವು ತಿಂಗಳುಗಳೇ ಕಳೆದು ಹೋಗಿದೆ. ಅದರಲ್ಲೂ ಕಾಂಗ್ರೆಸ್ ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್ ಒಂದಾಗಿದೆ. ಇದರ ನಡುವೆ ಸ್ವತಂತ್ರವಾಗಿ ಸ್ಪರ್ಧಿಸಿ, ಗೆದ್ದಿದ್ದ ಸುಮಲತಾ ಅಧಿಕೃತವಾಗಿ ಬಿಜೆಪಿಗೆ ಬೇರೆ ಸೇರಿದ್ದಾರೆ. ಮಂಡ್ಯದಿಂದಾನೇ ಸ್ಪರ್ಧೆ ಎಂದು ಹೇಳುತ್ತಿರುವ ಸುಮಲತಾಗೆ ಈ ಬಾರಿ ಬಿಜೆಪಿಯ ಟಿಕೆಟ್ ಕೈ ತಪ್ಪುವ ಎಲ್ಲಾ ಸಾಧ್ಯತೆಗಳು ಗೋಚರವಾಗುತ್ತಿವೆ. ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಅವರೇ ಮಂಡ್ಯದ ಲೋಕಸಮರದಲ್ಲಿ ಯುದ್ದಕ್ಕೆ ನಿಲ್ಲಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

 

ಬಿಜೆಪಿಯಿಂದ ಟಿಕೆಟ್ ಕೈತಪ್ಪಿದರೆ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡೋಣಾ ಎಂದು ಸುಮಲತಾ ಯೋಚಿಸಿದ್ದಾರೆ ಎಂಬ ಮಾತು ಕೂಡ ಕೇಳಿ ಬರುತ್ತಿದೆ. ಆದರೆ ಇದರ ನಡುವೆ ರಮ್ಯಾ ಅವರ ಹೆಸರು ಕೂಡ ಪ್ರಸ್ತಾಪವಾಗಿದೆ. ಕ್ರೇಜ್ ಹಾಗೇ ಇರುವ ಕಾರಣ ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ರಮ್ಯಾ ನಿಲ್ಲಲಿದ್ದಾರೆ ಎನ್ನಲಾಗಿತ್ತು. ಈ ಎಲ್ಲಾ ಊಹಾಪೋಹಗಳ ನಡುವೆ ಕಾಂಗ್ರೆಸ್ ನಾಯಕರು ಈಗಾಗಲೇ ಮಂಡ್ಯ ಅಭ್ಯರ್ಥಿಯ ಹೆಸರನ್ನು ಹೈಕಮಾಂಡ್ ಗೆ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

 

ಮೂಲಗಳ ಪ್ರಕಾರ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ, ಮಂಡ್ಯದಲ್ಲಿ ಸ್ಟಾರ್ ಚಂದ್ರು ಎಂದೇ ಫೇಮಸ್ ಆಗಿರುವ ಗುತ್ತಿಗೆದಾರ ವೆಂಕಟರಮಣೇಗೌಡ ಅವರ ಹೆಸರನ್ನು ಫೈನಲ್ ಮಾಡಿದೆಯಂತೆ. ಇವರು ಮಂಡ್ಯ ಭಾಗದಲ್ಲಿ ಸ್ಟಾರ್ ಚಂದ್ರು ಎಂದೇ ಖ್ಯಾತಿ ಪಡೆದಿದ್ದಾರೆ. ಇವರ ಮೂಲ ಹೆಸರು ವೆಂಕಟರಮಣೇಗೌಡ. ಎಲ್ಲಾ ಪಕ್ಷದ ನಾಯಕರಿಗೂ ಇವರು ಚಿರಪರಿಚಿತರಾಗಿದ್ದಾರೆ. ಈಗಾಗಲೇ ಸಚಿವ ಚೆಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಶಾಸಕರು ಸ್ಟಾರ್ ಚಂದ್ರುಗೆ ಟಿಕೆಟ್ ನೀಡಲು ಗ್ರೀನ್ ಸಿಗ್ನಲ್ ಕೂಡ ನೀಡಿದ್ದಾರಂತೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

error: Content is protected !!