Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬೆಂಗಳೂರಿನಲ್ಲಿ ಕೊಲೆಯಾದ ರೇಣುಕಾಸ್ವಾಮಿ ಯಾರು..?

---Advertisement---

ಸುದ್ದಿಒನ್, ಬೆಂಗಳೂರು, ಜೂ. 11 : ಪವಿತ್ರಾ ಗೌಡಗೆ ಕೆಟ್ಟದಾಗಿ‌ ಮೆಸೇಜ್ ಮಾಡಿದ ಆರೋಪದಲ್ಲಿ ಕೊಲೆಯಾಗಿರುವ ರೇಣುಕಾ ಸ್ವಾಮಿ, ಮೂಲತಃ ಚಿತ್ರದುರ್ಗದವರು. ತುರುವನೂರಿನ ಶ್ರೀ ಲಕ್ಷ್ಮೀ ವೆಂಕಟೇಶ್ವರ ಬಡಾವಣೆಯಲ್ಲಿ ವಾಸ ಮಾಡುತ್ತಿದ್ದ. ಕಾಶೀನಾಥ್ ಶಿವನಗೌಡ ಹಾಗೂ ರತ್ನಪ್ರಭಾ ದಂಪತಿಯ ಮಗ ಈ ರೇಣುಕಾ ಸ್ವಾಮಿ. ಅಪೋಲೋ ಮೆಡಿಕಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಇತ್ತಿಚೆಗೆ ಮದುವೆ ಕೂಡ ಆಗಿದ್ದ. ಸಹನಾ ರೇಣುಕಾಪ್ರಸಾದ್ ಎಂಬುವವರನ್ನು ಮದುವೆಯಾಗಿದ್ದರು. ಈಕೆ ಈಗ ಗರ್ಭಿಣಿಯಾಗಿದ್ದಾರೆ. ಈ ಪರಿಸ್ಥಿತಿಯಲ್ಲಿ ದುಃಖವನ್ನ ಅದೇಗೆ ತಡೆದುಕೊಳ್ಳುತ್ತಾರೋ ಏನೋ.

 

ನಿನ್ನೆ ಕಾಮಾಕ್ಷಿಪಾಳ್ಯ ಪೊಲೀಸರಿಂದ ಅವರ ಕುಟುಂಬಸ್ಥರಿಗೆ ವಿಷಯ ತಿಳಿಸಲಾಗಿದೆ. ಕುಟುಂಬಸ್ಥರು ಕೂಡ ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಬಂದಿದ್ದಾರೆ. ಮಗನ ಶವವನ್ನು ಪೋಸ್ಟ್ ಮಾಟಮ್ ಬಳಿಕ ತೆಗೆದುಕೊಂಡು ಹೋಗಲಾಗುತ್ತದೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಇಲ್ಲಿಗೆ ಕರೆಸಿದ್ದು ಯಾರು..? ಏನೆಲ್ಲಾ ಆಯ್ತು ಎಂಬ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ.

ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಾಮಾಕ್ಷಿಪಾಳ್ಯದ ವಿನಯ್ ಅವರ ಶೆಡ್ ಗೆ ಕರೆತಂದು ಎಚ್ಚರಿಕೆ ಕೊಡಲಾಗಿದೆ. ಆ ವೇಳೆ ಆತನ ಡೆತ್ ಆಗಿದೆ. ಆರಂಭದಲ್ಲಿ ಕೊಲೆಯಾದ ವ್ಯಕ್ತಿ ಯಾರೆಂದು ತಿಳಿದಿರಲಿಲ್ಲ. ಆದರೆ ಎರಡು ದಿನಗಳ ಬಳಿಕ ಎಲ್ಲಾ ವಿಚಾರಗಳು ಬೆಳಕಿಗೆ ಬಂದಿವೆ. ಸೆಕ್ಯೂರಿಟಿ ಗಾರ್ಡ್ ಮೃತದೇಹವನ್ನು ನೋಡಿದ್ದರು. ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆ ಮೃತದೇಹವನ್ನು ಪೋಸ್ಟ್ ಮಾಟಮ್ ಗೆ ಕಳುಹಿಸಲಾಗಿದೆ. ನಂತರ ಸತ್ಯ ಗೊತ್ತಾಗಿದೆ. ಸದ್ಯ ಈ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ. ಈಗಾಗಲೇ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯ ಬಳಿಕವಷ್ಟೇ ಎಲ್ಲಾ ಸತ್ಯಾಸತ್ಯತೆ ಹೊರ ಬರಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...