Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಮಕೂರು ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಯಾರು ? ಸಚಿವ ರಾಜಣ್ಣ ಹೇಳಿದ್ದೇನು ?

Facebook
Twitter
Telegram
WhatsApp

 

 

ತುಮಕೂರು: ನಾಳೆ 28 ಸಚಿವರು ದೆಹಲಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಸಹಕಾರಿ ಸಚಿವ ಕೆ ಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, 28 ಕ್ಷೇತ್ರಗಳ ಆಯ್ಕೆಯ ಬಗ್ಗೆ ಅಭಿಪ್ರಾಯವನ್ನು ಕೇಳುವುದಕ್ಕೆ, ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಗೆಲ್ಲುವಂತ ಅಭ್ಯರ್ಥಿಗಳ ಆಯ್ಕೆ ಮಾಡುವುದಕ್ಕೆ ತೀರ್ಮಾನ ಮಾಡಲು ಪೂರ್ವಕವಾಗಿ ಕರೆದಿರುವ ಸಭೆ ಇದು ಎಂದಿದ್ದಾರೆ

ಇದೇ ವೇಳೆ ತುಮಕೂರು ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧೆ ಮಾಡುತ್ತೀರ ಎಂಬ ಪ್ರಶ್ನೆಗೆ, ನಾನು ಮೊದಲು ಸ್ಪರ್ಧೆ ಮಾಡಬೇಕು ಅಂತ ಇದ್ದೆ. ಆದರೆ ನಾನು ಇನ್ಯಾವ ಚುನಾವಣೆಯಲ್ಲೂ ನಿಲ್ಲಬಾರದು ಎಂಬ ನಿರ್ಧಾರಕ್ಕೆ ಬಂದಿದ್ದೇನೆ. ಅವರು ಹೇಳಿದರೆ ಯಾರಾದರೂ ಸಚಿವರು ನಿಲ್ಲಬೇಕಾದ ಅಗತ್ಯತೆ ಬಿದ್ದರೆ ನಿಲ್ಲಬೇಕಾಗುತ್ತದೆ ಎಂದು ಹೇಳಿದ್ದಾರೆ‌. ಅದರಲ್ಲಿ ಯಾರನ್ನು ಕಣಕ್ಕೆ ಇಳಿಸುತ್ತಾರೋ ಗೊತ್ತಿಲ್ಲ ಎಂದಿದ್ದಾರೆ.

ಇನ್ನು ಯಾವ ಕ್ಷೇತ್ರದಲ್ಲೂ ಅಭ್ಯರ್ಥಿಗಳ ಫೈನಲ್ ಆಗಿಲ್ಲ. ನಮ್ಮ ಅಧ್ಯಕ್ಷರು ಒಂದು ಸಭೆಯಲ್ಲಿ ಹೇಳಿದ್ದಾರೆ. ಶಿವಮೊಗ್ಗಕ್ಕೆ ಶಿವಣ್ಣ ಅವರನ್ನು ನಿಲ್ಲಿಸಬೇಕು ಅಂತ. ಅವರ ಕುಟುಂಬದ ಗೀತಮ್ಮ ಅವರನ್ನು ನಿಲ್ಲಿಸುತ್ತೀವಿ ಅಂತ ಹೇಳಿದ್ದಾರೆ. ಅದೊಂದು ಅಭ್ಯರ್ಥಿಯ ಫೈನಲ್ ಮಾಡಿದ್ದಾರೆ ಎಂದು ಅಣ್ಣಾವ್ರ ಕುಟುಂಬಕ್ಕೆ ಟಿಕೆಟ್ ಮೀಸಲಿಟ್ಟಿರುವ ಬಗ್ಗೆಯೂ ತಿಳಿಸಿದ್ದಾರೆ.

ಇದೆ ವೇಳೆ ಮೂರು ಡಿಸಿಎಂ ಬೇಡಿಕೆ ಬಗ್ಗೆ ಮಾತನಾಡಿ, ಅಧ್ಯಕ್ಷರು ಹೇಳಿದ ಮೇಲೆ ಅವರ ನಿರ್ಧಾರವೇ ಅಂತಿಮ. ಚುನಾವಣಾ ಹಿತ ದೃಷ್ಟಿಯಲ್ಲಿ ಆದರೆ ಒಳ್ಳೆಯದು. ಮಾಡಲ್ಲ ಎಂದರೆ ಬೇಡ ಬಿಡಿ. ಪಕ್ಷಕ್ಕಾಗಿ ಹೇಳುತ್ತೀನೇ ಹೊರತು ನನ್ನ ವೈಯಕ್ತಿಕ ಅಲ್ಲ. ಕೆಲವು ರಾಜ್ಯದಲ್ಲೂ ಮೂರು ಡಿಸಿಎಂ ಮಾಡಿದ್ದಾರೆ. ಸುರ್ಜೆವಾಲ್ ಅವರು ಬಂದಾಗಲೂ ಸಚಿವರು ಮನವಿ ಮಾಡಿದ್ದಾರೆಂದು ಮೂರು ಡಿಸಿಎಂ ಹುದ್ದೆಗಳ ವಿಚಾರವಾಗಿ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!