Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಭೇಟಿ ಮಾಡಿದ ಚಿತ್ರದುರ್ಗದ ಈ ಸಿದ್ದರೂಢ ಯಾರು..? ಭೇಟಿ‌ ಮಾಡಿದ್ದೇಕೆ..?

Facebook
Twitter
Telegram
WhatsApp

ಬೆಂಗಳೂರು: ನಟ ದರ್ಶನ್ ಕೊಲೆ ಆರೋಪದ ಮೇಲೆ ಜೈಲು ಸೇರಿದ್ದಾರೆ. ಇತ್ತಿಚೆಗೆ ಅವರನ್ನು ನೋಡಲು ಸಾಕಷ್ಟು ಜನ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡುತ್ತಿದ್ದಾರೆ. ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. ಇದೀಗ ಚಿತ್ರದುರ್ಗ ತಾಲ್ಲೂಕಿನ ತುರುವನೂರಿನ ಸಿದ್ದರೂಢ ಎಂಬುವವರು ದರ್ಶನ್ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಿದ್ದರೂಢ ಕೂಡ ಈ ಮೊದಲು ಜೈಲಿನಲ್ಲಿಯೇ ಇದ್ದವರು. ಕೊಲೆ ಪ್ರಕರಣದಲ್ಲಿ ಚಿತ್ರದುರ್ಗ, ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನಲ್ಲಿದ್ದು, ಸನ್ನಡತೆಯ ಆಧಾರದ ಮೇಲೆ ರಿಲೀಸ್ ಆಗಿ ಬಂದಿದ್ದಾರೆ. ಇದೀಗ ದರ್ಶನ್ ಅವರನ್ನು ಭೇಟಿ ಮಾಡಿ ಬಂದ ವಿಚಾರದ ಬಗ್ಗೆ ಸಂದರ್ಶನ ಒಂದರಲ್ಲಿ ಮಾತನಾಡಿದ್ದಾರೆ.

ಸಿದ್ದರೂಢ ಒಬ್ಬ ರೈತ ಕುಟುಂಬದಿಂದ ಬಂದವರು. ಕಾಮಗಾರಿ ಮಾಡುವ ವೇಳೆ ಅವರ ತಂದೆಗೆ ಇಂಜಿನಿಯರ್ ಒಬ್ಬ ಲಂಚಕ್ಕೆ ಬೇಡಿಕೆ ಇಟ್ಟಿದ್ದನಂತೆ. ಈ ಸಂಬಂಧ ತಂದೆ ಹಾಗೂ ಇಂಜಿನಿಯರ್ ನಡುವೆ ಜಗಳವಾಗಿದೆ. ಇಂಜಿನಿಯರ್ ತಂದೆಗೆ ಹೊಡೆದಿದ್ದನ್ನು ಸಹಿಸಲು ಆಗದೆ ಸಿದ್ದರೂಢ ಆತನನ್ನು ಕೊಂದೇ ಬಿಟ್ಟಿದ್ದ. ಇದೇ ಕೇಸಲ್ಲಿ 21 ವರ್ಷಗಳ ಕಾಲ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದಾರೆ. ಸನ್ನಡತೆಯ ಆಧಾರದ ಮೇಲೆ ಸದ್ಯ ರಿಲೀಸ್ ಆಗಿದ್ದಾರೆ.

ಆದರೆ ಈ ವೇಳೆ ಮಾತನಾಡಿರುವ ಸಿದ್ದರೂಢ, ನಾನು ಕೆಟ್ಟ ನಿರ್ಧಾರವನ್ನು ತೆಗೆದುಕೊಳ್ಳಬಾರದಿತ್ತು. ಸಾಯಿಸುವ ಹಕ್ಕು ಯಾರಿಗೂ ಇಲ್ಲ. ಇಂತಹ ಆತುರದ ನಿರ್ಧಾರವನ್ನು ತೆಗೆದುಕೊಳ್ಳಬಾರದು. ಆದರೆ ಯಾವುದೇ ದಾರಿಯಿಲ್ಲದೆ ಅಂದು ಜೈಲಿಗೆ ಹೋಗಿದ್ದೆ. 21 ವರ್ಷಗಳ ಜೈಲು ವಾಸ ಅನುಭವಿಸಿದ್ದೀನಿ . ಸನ್ನಡತೆಯ ಆಧಾರದ ಮೇಲೆ ಹೊರಗೆ ಬಂದಿದ್ದೀನಿ ಎಂದಿದ್ದಾರೆ. ಇದೇ ವೇಳೆ ದರ್ಶನ್ ಬಗ್ಗೆಯೂ ಮಾತನಾಡಿ, ಬಿಡುಗಡೆಗೂ ಮುನ್ನ ದರ್ಶನ್ ಅವರನ್ನು ಭೇಟಿ ಮಾಡಿದ್ದೇನೆ. ಅವರಲ್ಲಿ ಪಶ್ಚಾತ್ತಾಪದ ಭಾವನೆ ಇತ್ತು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!