ಸುದ್ದಿಒನ್, ಚಿತ್ರದುರ್ಗ, ನವೆಂಬರ್.30 : ನಿನ್ನೆ ರಾತ್ರಿ ಮಲ್ಲಾಡಿಹಳ್ಳಿ ಬಳಿ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಹೊಳಲ್ಕೆರೆ ಪೊಲೀಸರು ವಶಕ್ಕೆ ಪಡೆದಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು (ಗುರುವಾರ) ನಗರದ ಎಸ್.ಪಿ. ಕಚೇರಿಯಲ್ಲಿ ಎಸ್.ಪಿ. ಧರ್ಮೇಂದ್ರಕುಮಾರ್ ಮೀನಾ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಪೊಲೀಸ್ ಕಂಟ್ರೋಲ್ ರೂಂಗೆ ಬಂದ ಖಚಿತವಾಗಿ ಮಾಹಿತಿ ಮೇರೆಗೆ ಜಿಲ್ಲೆಯಾದ್ಯಂತ ಎಲ್ಲ ಪೊಲೀಸ್ ಠಾಣೆಗಳು ಮತ್ತು ಚೆಕ್ ಪೋಸ್ಟ್ ಗಳಿಗೆ ಮಾಹಿತಿ ನೀಡಲಾಗಿತ್ತು. ಯಾವುದೋ ಅಪರಿಚಿತ ಬಿಳಿ ಬಣ್ಣದ ಇನ್ನೋವಾ ಕಾರಿನಲ್ಲಿ ದೊಡ್ಡ ಮೊತ್ತದ ಹಣವನ್ನು ಸಾಗಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ತಿಳಿಸಲಾಗಿತ್ತು.
ಇದರಂತೆಯೇ ಹೊಳಲ್ಕೆರೆ ವ್ಯಾಪ್ತಿಯ ದುಮ್ಮಿ ಬಳಿ ಬೆಳಿಗ್ಗೆ ಸುಮಾರು 11 ಗಂಟೆಗೆ ವಾಹನವನ್ನು ಪರಿಶೀಲಿಸಿದಾಗ ಹಣ ಇರುವುದು ತಿಳಿದು ಬಂದಿದೆ. ಕೂಡಲೇ ಹೊಳಲ್ಕೆರೆ ಪೊಲೀಸ್ ಠಾಣೆಗೆ ಕರೆತಂದು ವಿಡಿಯೋಗ್ರಾಫ್ ಮೂಲಕ ಹಣವನ್ನು ಎಣಿಕೆ ಮಾಡಿದಾಗ ಒಟ್ಟು ರೂ. 7,99,96, 000/- ಹಣ ಪತ್ತೆಯಾಗಿದೆ. ನಂತರ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ವಾಹನದಲ್ಲಿದ್ದ ಹರೀಶ್ ಮತ್ತು ಸಚಿನ್ ಇಬ್ಬರು ಇದ್ದರು. ಅವರನ್ನು ವಿಚಾರಿಸಿದಾಗ ಈ ಹಣವನ್ನು ಶಿವಮೊಗ್ಗದ ಮಲ್ನಾಡ್ ಟ್ರೇಡರ್ಸ್ ನವರು ಅಡಕೆಯನ್ನು ಖರೀದಿಸಲು ಹಣವನ್ನು ನೀಡಿದ್ದರು. ಅಡಕೆಯನ್ನು ಖರೀದಿಸದೇ ಇರುವುದರಿಂದ ಹಣವನ್ನು ವಾಪಾಸು ತೆಗೆದುಕೊಂಡು ಹೋಗುತ್ತಿರುವುದಾಗಿ ಹೇಳಿದ್ದಾರೆ. ಈ ಹಣಕ್ಕೆ ಸಂಬಂಧಿಸಿದಂತೆ ದಾಖಲಾತಿಗಳನ್ನು ಒದಗಿಸುವಂತೆ ಸೂಚಿಸಲಾಗಿದೆ.
ದೊಡ್ಡ ಮೊತ್ತದ ಹಣದ ವಿಚಾರವಾಗಿರುವುದರಿಂದ
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೂ ಈ ಮಾಹಿತಿಯನ್ನು ನೀಡಿದ್ದೇವೆ. ಪ್ರಸ್ತುತ ಈ ಹಣವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್.ಪಿ. ಧರ್ಮೇಂದ್ರಕುಮಾರ್ ಮೀನಾ ಅವರು ತಿಳಿಸಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…