Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರನ್ನು ರಕ್ಷಣೆ ಮಾಡುವವರ್ಯಾರು? ಟಿ.ನುಲೇನೂರು ಶಂಕರಪ್ಪ

Facebook
Twitter
Telegram
WhatsApp

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ, (ಡಿ.13): ದೇಶಕ್ಕೆ ಆಹಾರ ಕೊಡಲು ಹೋಗಿ ಸಾಲಗಾರರಾಗಿರುವ ರೈತರನ್ನು ರಕ್ಷಣೆ ಮಾಡುವವರ್ಯಾರು? ಯಾವುದನ್ನು ಸುಮ್ಮನೆ ಒಪ್ಪಿಕೊಳ್ಳಬೇಡಿ. ಪ್ರಶ್ನೆ ಮಾಡುವುದನ್ನು ಕಲಿಯಿರಿ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು ಶಂಕರಪ್ಪ ರೈತರನ್ನು ಎಚ್ಚರಿಸಿದರು.

ಕ್ಯಾದಿಗೆರೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಶಾಖೆಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಒಕ್ಕಲುತನ ದುಬಾರಿಯಾಗಿದ್ದು, ರೈತ ಕೃಷಿಯಿಂದ ಹಿಂದೆ ಸರಿಯುವಂತಾಗಿದೆ. ಒಗ್ಗಟ್ಟಿನಲ್ಲಿ ಬಲವಿದೆ ಎನ್ನುವುದನ್ನು ರೈತರು ಇನ್ನು ಏಕೆ ಅರ್ಥಮಾಡಿಕೊಳ್ಳುತ್ತಿಲ್ಲ ಎನ್ನುವುದೇ ಬೇಸರದ ಸಂಗತಿ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ನೆರವಿಗೆ ನಿಲ್ಲುತ್ತಿಲ್ಲ. ಪ್ರಧಾನಿ ಮೋದಿ ರೈತರ ಭೂಮಿಯನ್ನು ಕಾರ್ಪೊರೇಟ್‍ಗಳಿಗೆ ಮಾರುವ ಕುತಂತ್ರ ನಡೆಸುತ್ತಿರುವುದರ ವಿರುದ್ದ ರೈತರು ಎಚ್ಚೆತ್ತುಕೊಳ್ಳಬೇಕು. ಬೆಳೆ ಬೆಳೆಯಲಿ, ಬಿಡಲಿ ಭೂಮಿ ರೈತರ ಕೈಯಲ್ಲಿರಬೇಕು ಎನ್ನುವುದು ನಮ್ಮ ಉದ್ದೇಶ.

ಎ.ಪಿ.ಎಂ.ಸಿ.ನಾಶವಾದರೆ ರೈತ ಬೆಳೆದ ಬೆಳೆಗಳಿಗೆ ಟೆಂಡರ್ ಹಾಕುವವರ್ಯಾರು ಎಂದು ಪ್ರಶ್ನಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು ಮಾತನಾಡಿ ವಿಧಾನಸಭೆಯಲ್ಲಿ ಯಾವ ಪಕ್ಷದವರು ರೈತರ ಪರವಾಗಿ ಏಕೆ ಧ್ವನಿಎತ್ತುತ್ತಿಲ್ಲ. ಮೌನವಹಿಸಿರುವುದರ ಹಿನ್ನೆಲೆ ಏನು?

ಆಳುವ ಸರ್ಕಾರಗಳು ರೈತರ ಮೇಲೆ ಗಧಾ ಪ್ರಹಾರ ನಡೆಸುತ್ತಿದ್ದಾರೆ. ಒಗ್ಗಟ್ಟಿನಿಂದ ಏನು ಬೇಕಾದರೂ ಸಾಧನೆ ಮಾಡಬಹುದು ಎನ್ನುವುದಕ್ಕೆ ದೆಹಲಿ ಗಡಿಯಲ್ಲಿ ಕಳೆದ ಹದಿನೈದು ತಿಂಗಳಿನಿಂದಲೂ ರೈತರು ಕೇಂದ್ರ ಸರ್ಕಾರದ ವಿರುದ್ದ ಚಳುವಳಿ ನಡೆಸಿದ್ದರ ಫಲವಾಗಿ ಮೂರು ಕೃಷಿ ವಿರೋಧಿ ಕಾಯಿದೆಗಳನ್ನು ಹಿಂದಕ್ಕೆ ಪಡೆದಿರುವುದೇ ಸಾಕ್ಷಿ ಎಂದು ಸಂಘಟನೆಗಿರುವ ಶಕ್ತಿಯ ಮಹತ್ವ ತಿಳಿಸಿದರು.

ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ರಾಜಕಾರಣಿಗಳು ರೈತರಿಗೆ ನಿರಂತರವಾಗಿ ಮೋಸ ಮಾಡಿಕೊಂಡು ಬರುತ್ತಿದ್ದಾರೆ. ಮುಂದೆ ದೊಡ್ಡ ಹೋರಾಟ ಕಟ್ಟಿ ಬದುಕಿನ ಬಗ್ಗೆ ಚಿಂತನೆ ಮಾಡಬೇಕಿದೆ. ನೀರು, ವಿದ್ಯುತ್, ಬೆಂಬಲ ಬೆಲೆಯನ್ನು ಸರ್ಕಾರದಿಂದ ಕೇಳಿ ಪಡೆಯುವುದಕ್ಕೆ ಮೊದಲು ಕ್ಯಾದಿಗೆರೆ ರೈತರು ಸಂಘಟಿತರಾಗಿ ಎಂದು ತಾಕೀತು ಮಾಡಿದರು.

ರೈತ ಮುಖಂಡ ಮಲ್ಲಾಪುರದ ತಿಪ್ಪೇಸ್ವಾಮಿ ಮಾತನಾಡುತ್ತ ಯುವಕರು ಕೃಷಿಯಿಂದ ದೂರ ಸರಿಯುತ್ತಿರುವುದು ಒಕ್ಕಲುತನಕ್ಕೆ ಮಾರಕವಾಗಿ ಪರಿಣಮಿಸಿದೆ. ಯುವ ಜನಾಂಗ ಎಚ್ಚೆತ್ತುಕೊಳ್ಳಬೇಕಿದೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಹಸಿರುಶಾಲು ಇರಬೇಕು. ಆಗ ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಗೌರವಾಧ್ಯಕ್ಷ ಮುದ್ದಾಪುರದ ನಾಗರಾಜ್ ಮಾತನಾಡಿ ರೈತರು ಹಕ್ಕುಗಳನ್ನು ಪಡೆದುಕೊಳ್ಳಬೇಕಾದರೆ ಸಂಘಟನೆ ಮುಖ್ಯ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರನ್ನು ಕಡೆಗಣಿಸುತ್ತಲೆ ಬರುತ್ತಿವೆ. ರೈತ ಚಳುವಳಿಗೆ ತಲೆಬಾಗಿದ ಕೇಂದ್ರ ಸರ್ಕಾರ ಮೂರು ಕೃಷಿ ವಿರೋಧಿ ಕಾಯಿದೆಗಳನ್ನು ವಾಪಸ್ ಪಡೆದುಕೊಂಡಿತು. ಹಸಿರುಶಾಲಿಗೆ ಶಕ್ತಿಯಿದೆ.

ಒಗ್ಗಟ್ಟಿನಿಂದ ಬೇಡಿಕೆಗಳನ್ನು ಈಡೇರಿಸಿಕೊಂಡು ಹಕ್ಕುಗಳನ್ನು ಪಡೆದುಕೊಳ್ಳಬಹುದೆಂದು ತಿಳಿಸಿದರು.
ರೈತ ಮುಖಂಡ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡುತ್ತ ದೇಶದಲ್ಲಿ ಎಲ್ಲಿಯೇ ರೈತರಿಗೆ ಅನ್ಯಾಯವಾದರೆ ಇಡೀ ರೈತ ಕುಲವೇ ಒಂದಾಗಬೇಕು. ಸಂಘಟನೆ, ಹೋರಾಟವಿದ್ದರೆ ಮಾತ್ರ ಎಲ್ಲಾ ಸರ್ಕಾರಗಳು ರೈತರ ಬಗ್ಗೆ ಹುಷಾರಾಗಿರುತ್ತವೆ. ಚುನಾವಣೆ ಬಂದಾಗ ರಾಜಕೀಯ ಮಾಡುವುದನ್ನು ಈಗಲಾದರೂ ಬಿಡಿ. ಮತ ಯಾರಿಗಾದರೂ ಹಾಕಿ. ಆದರೆ ಸಂಘಟನೆಯನ್ನು ಮಾತ್ರ ಬಲಹೀನಗೊಳಿಸಬೇಡಿ. ಕೃಷಿ ಪಂಪ್‍ಸೆಟ್‍ಗಳಿಗೆ ಮೀಟರ್ ಹಾಕಲು ಹೊರಟಿದ್ದಾರೆ. ಸಮಸ್ಯೆಗಳು ಬಂದಾಗ ಒಗ್ಗಟ್ಟಾಗದಿದ್ದರೆ ರೈತರಿಗೆ ಉಳಿಗಾಲವಿಲ್ಲ. ಒಕ್ಕಲುತನ ಉಳಿಸಿಕೊಳ್ಳುವತ್ತ ಗಮನ ಕೊಡಿ ಎಂದು ಕ್ಯಾದಿಗೆರೆ ರೈತರಿಗೆ ಕಿವಿಮಾತು ಹೇಳಿದರು.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಮಾತನಾಡಿ ಸಂಘಟನೆಯಲ್ಲಿ ಒಗ್ಗಟ್ಟಿದೆ. ಏನು ಬೇಕಾದರೂ ಸಾಧಿಸಬಹುದು. ರೈತರಿಗೆ ಜಾತಿಯಿಲ್ಲ. ಜಾತಿಯಿಂದ ಏನು ಸಾಧಿಸಿಕೊಳ್ಳಲು ಆಗುವುದಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮನಬಂದಂತೆ ಕಾನೂನು ಜಾರಿಗೆ ತರಲು ಹೊರಟಿರುವುದರ ವಿರುದ್ದ ಮೊದಲು ರೈತರು ಸೆಟೆದು ನಿಲ್ಲಬೇಕು. ಇಲ್ಲದಿದ್ದರೆ ಭೂಮಿಯನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಸಜ್ಜನಕೆರೆ ರೇವಣ್ಣ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮಂಜು, ಸತ್ಯಪ್ಪ, ರೇಣುಕರಾಜು ಇವರುಗಳು ಮಾತನಾಡಿದರು.
ಸಿದ್ದಪ್ಪ ಅಧ್ಯಕ್ಷತೆ ವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೃತ ನೇಹಾ ಮನೆಗೆ ಮುಸ್ಲಿಂ ಮುಖಂಡರ ಭೇಟಿ : ನಿರಂಜನ ದೇಶಪಾಂಡೆಗೆ ಸಾಂತ್ವನ

ಹುಬ್ಬಳ್ಳಿ: ನೇಹಾ ಎಂಬ ಎಂಸಿಎ ವಿದ್ಯಾರ್ಥಿನಿಯನ್ನು ಫಯಾಜ್ ನಿನ್ನೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈಗಾಗಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯನ್ನು ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಹೋರಾಟಗಳು ಕೂಡ ನಡೆದಿವೆ. ಇದೀಗ ಮುಸ್ಲಿಂ ಮುಖಂಡರು

ಚಿತ್ರದುರ್ಗ-ಹೊಳಲ್ಕೆರೆ ಹೆದ್ದಾರಿಯಲ್ಲಿ ಅಪಘಾತ | ಓರ್ವ ಮೃತ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ಮಂಜುನಾಥ (36) ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಹೊಳಲ್ಕೆರೆ ಹೆದ್ದಾರಿಯ ಕಣಿವೆ ಬಳಿ ಶನಿವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ

ಈ ವರ್ಷ ಒಳ್ಳೆಯದ್ದಕ್ಕಿಂತ ಕೆಟ್ಟದೇ ಹೆಚ್ಚು : ಭವಿಷ್ಯ ನುಡಿದ ವಿಜಯಪುರ ಬಸವೇಶ್ವರ ಕಾರ್ಣಿಕಾ

ವಿಜಯಪುರ: ಕಾರ್ಣಿಕಾ ನುಡಿಯನ್ನು ರಾಜ್ಯದ ಜನತೆ ಹೆಚ್ಚಾಗಿ ನಂಬುತ್ತಾರೆ. ಇದೀಗ ವಿಜಯಪುರದ ಕೊಡೆಕಲ್ ಬಸವೇಶ್ವರ ದೇವಸ್ಥಾನದ ಶೂನ್ಯ ಶಂಕರಲಿಂಗ ದಿಂಡವಾರ ಶರಣರು ಮಳೆ ಬೆಳೆ ಬಗ್ಗೆ ಕಾರ್ಣಿಕಾ ನುಡಿದಿದ್ದಾರೆ‌. ಜಾತ್ರೆಯಿದ್ದ ಹಿನ್ನೆಲೆ ಪುರಾಣ ಮುಕ್ತಾಯ,

error: Content is protected !!