ಸುದ್ದಿಒನ್,ಬೆಂಗಳೂರು,ಮೇ.30: ರಾಜ್ಯ ರಾಜಕಾರಣದ ಅತ್ಯಂತ ಪ್ರತಿಷ್ಠಿತ ಹುದ್ದೆಗಳಲ್ಲೊಂದಾದ ಕೆಪಿಸಿಸಿ (KPCC) ಅಧ್ಯಕ್ಷ ಸ್ಥಾನದ ರೇಸ್, ಈಗ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು ದಿನಕ್ಕೊಂದು ರೋಚಕ ತಿರುವು ಪಡೆಯುತ್ತಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರು ಈ ರೇಸ್ನಲ್ಲಿ ಮುಂಚೂಣಿಯಲ್ಲಿದ್ದರೂ, ಇದೀಗ ದಿಢೀರನೆ ದೆಹಲಿ ಮಟ್ಟದಲ್ಲಿ ಮತ್ತೊಬ್ಬ ಪ್ರಭಾವಿ ನಾಯಕನ ಹೆಸರು ಹರಿದಾಡಲು ಶುರುವಾಗಿದ್ದು, ಕೈ ನಾಯಕರಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ರೇಸ್ ಗೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಎಂಟ್ರಿ!
ಕಾಂಗ್ರೆಸ್ ವಲಯದಿಂದ ಸಿಗುತ್ತಿರುವ ಲೇಟೆಸ್ಟ್ ಅಪ್ಡೇಟ್ ಪ್ರಕಾರ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ ಗೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಅನಿರೀಕ್ಷಿತವಾಗಿ ಮುನ್ನೆಲೆಗೆ ಬಂದಿದೆ. ಹಿಂದುಳಿದ ವರ್ಗಗಳ (OBC) ಪ್ರಭಾವಿ ಕೋಟಾದಡಿ ಅವರಿಗೆ ಈ ಜವಾಬ್ದಾರಿ ವಹಿಸುವ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಗಂಭೀರ ಚಿಂತನೆ ನಡೆದಿದೆ ಎನ್ನಲಾಗಿದೆ. ವಿಶೇಷವೆಂದರೆ, ಹರಿಪ್ರಸಾದ್ ಅವರ ಬೆನ್ನಿಗೆ ಕಾಂಗ್ರೆಸ್ ಅಧಿಪತ್ಯದ ಪ್ರಭಾವಿ ನಾಯಕ ಕೆ.ಸಿ. ವೇಣುಗೋಪಾಲ್ ಅವರ ಬೆಂಬಲವೂ ಇದೆ ಎಂಬ ಮಾತುಗಳು ರಾಜಕೀಯ ಕಾರಿಡಾರ್ನಲ್ಲಿ ಕೇಳಿಬರುತ್ತಿವೆ.
ಸತೀಶ್ ಜಾರಕಿಹೊಳಿಗೆ ಮುಳುವಾಗುತ್ತಾ ‘ಒಬ್ಬರಿಗೆ ಒಂದೇ ಹುದ್ದೆ’ ನಿಯಮ?
ಕಾಂಗ್ರೆಸ್ ಪಕ್ಷದ ಕಟ್ಟುನಿಟ್ಟಿನ ‘ಒಬ್ಬರಿಗೆ ಒಂದೇ ಹುದ್ದೆ’ (One Man One Post) ಸೂತ್ರವೇ ಸದ್ಯ ಸತೀಶ್ ಜಾರಕಿಹೊಳಿ ಅವರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸತೀಶ್ ಅವರು ಸಚಿವ ಸ್ಥಾನದ ಜೊತೆಗೆ ಪಕ್ಷದ ಸಾರಥ್ಯವನ್ನೂ ವಹಿಸಿಕೊಳ್ಳಲು ಆಸಕ್ತಿ ತೋರಿದ್ದಾರೆ. ಆದರೆ, ಸರ್ಕಾರ ಮತ್ತು ಸಂಘಟನೆ ಎರಡರಲ್ಲೂ ಪ್ರಮುಖ ಹುದ್ದೆಗಳನ್ನು ಒಬ್ಬರಿಗೇ ನೀಡಲು ಹೈಕಮಾಂಡ್ ಸುತಾರಾಂ ಸಿದ್ಧವಿಲ್ಲ. ಒಂದು ವೇಳೆ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನ ಬಿಟ್ಟುಕೊಡಲು ನಿರಾಕರಿಸಿದರೆ, ಹೈಕಮಾಂಡ್ ತನ್ನ ‘ಪ್ಲಾನ್ ಬಿ’ ಮೂಲಕ ಬಿ.ಕೆ. ಹರಿಪ್ರಸಾದ್ ಅವರಿಗೆ ಪಟ್ಟ ಕಟ್ಟುವ ಸಾಧ್ಯತೆ ದಟ್ಟವಾಗಿದೆ.
ಶಾಸಕಾಂಗ ಸಭೆಯಲ್ಲೇ ಸದ್ದು ಮಾಡಲಿದೆಯೇ ಅಧ್ಯಕ್ಷರ ಆಯ್ಕೆ?
ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲೇ ಈ ಕೆಪಿಸಿಸಿ ಅಧ್ಯಕ್ಷರ ಆಯ್ಕೆಯ ವಿಚಾರ ದೊಡ್ಡ ಮಟ್ಟದಲ್ಲಿ ಸದ್ದು ಮಾಡುವ ಲಕ್ಷಣಗಳಿವೆ. ಪಕ್ಷದ ಹಿರಿಯ ಶಾಸಕರು ಈ ವಿಷಯವನ್ನು ಸಭೆಯಲ್ಲಿ ಪ್ರಸ್ತಾಪಿಸಲು ಸಜ್ಜಾಗಿದ್ದಾರೆ ಎನ್ನಲಾಗಿದೆ.
ಒಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬಣಗಳ ನಡುವಿನ ರಾಜಕೀಯ ಚದುರಂಗದಾಟದಲ್ಲಿ, ಈ ಪ್ರತಿಷ್ಠಿತ ಕೆಪಿಸಿಸಿ ಕುರ್ಚಿ ಯಾರ ಪಾಲಾಗಲಿದೆ ಎಂಬುದು ಸದ್ಯಕ್ಕೆ ಇಡೀ ರಾಜ್ಯ ರಾಜಕಾರಣದ ಬಿಗ್ ಸಸ್ಪೆನ್ಸ್!
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















