Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಾತಿಗಣತಿಗೆ ಒಕ್ಕಲಿಗರು ವಿರೋಧ ಮಾಡ್ತಾ ಇರೋದೇಕೆ..? ಶಾಸಕ ಶ್ರೀನಿವಾಸ್ ಹೇಳಿದ್ದು ಹೀಗೆ..!

Facebook
Twitter
Telegram
WhatsApp

ತುಮಕೂರು: ಜಾತಿಗಣತಿ ವರದಿ ವಿಚಾರ ಈಗ ಮತ್ತೆ ಸದ್ದು ಚರ್ಚೆಗೆ ಬಂದಿದೆ. ಸಚಿವ ಸಂಪುಟದಲ್ಲಿ ಚರ್ಚಿಸಿ ಈ ಸಂಬಂಧ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಈಗಾಗಲೇ ಸಿದ್ದರಾಮಯ್ಯ ಅವರು ಕೂ ಹೇಳಿದ್ದಾರೆ‌. ಆದರೆ ಜಾತಿಗಣತಿ ವರದಿ ಜಾರಿಗೆ ಒಕ್ಕಲಿಗ ಸಮುದಾಯ ವಿರೋಧ ಮಾಡುತ್ತಿದ್ದು, ಆ ಬಗ್ಗೆ ಶಾಸಕ ಶ್ರೀನಿವಾಸ್ ಪ್ರತಿಕ್ರಿಯೆ ನೀಡಿದ್ದಾರೆ‌.

ಈ ಹಿಂದೆ ಕೂಡ ಈ ಬಗ್ಗೆ ಒಂದು ಸಲ ಹೇಳಿದ್ದೆ. ಈಗ ಒಕ್ಕಲಿಗ ಸಮುದಾಯ ಅಂತಾನೇ ಅಂದುಕೊಳ್ಳಿ ಅದರಲ್ಲೂ ಒಳ ಪಂಗಡಗಳಿವೆ. ಲಿಂಗಾಯತರಲ್ಲೂ ಒಳಪಂಗಡಗಳಿವೆ. ವರದಿ ತಯಾರು ಮಾಡಿದಂತ ಸಂದರ್ಭದಲ್ಲಿ ಕುಂಚಿಟಿಗ ಅಂತ ಹೇಳಿದ್ರೆ ಕುಂಚಿಟಿಗ ಅಂತಾನೇ ಬರೆದುಕೊಂಡು ಹೋಗಿರುತ್ತಾರೆ. ದಾಸ ಭಾಗದವರು ಅಂತ ಹೇಳಿದ್ರೆ ಹಾಗೆಯೇ ಬರೆದುಕೊಂಡು ಹೋಗಿರುತ್ತಾರೆ. ನಮ್ಮಲ್ಲಿ ವಿರೋಧ ಯಾಕೆ ಅಂದ್ರೆ ಈ ರೀತಿ ಪಂಗಡ ಮಾಡುವ ಬದಲು ಟೋಟಲಿ ಒಕ್ಕಲಿಗ ಅಂತಾನೇ ಮಾಡಬೇಕು ಎಂಬುದು ನಮ್ಮ ಬೇಡಿಕೆ.

ವೀರಶೈವ ಸಮುದಾಯದಲ್ಲೂ ಅದೇ ಆಗಿರಬಹುದು. ಅವರಲ್ಲೂ ಕೂಡ ಅನೇಕ ಒಳಪಂಗಡಗಳಿದಾವೆ. ಅದರಿಂದ ವರದಿಯನ್ನು ಸರಿಯಾದ ರೀತಿಯಲ್ಲಿ ಮಾಡಿದ್ದಾರೋ ಇಲ್ಲವೋ ಎಂಬ ಅನುಮಾನ ಬಿಟ್ಟರೆ ಬೇರೆನು ಅಲ್ಲ. ಸರಿಯಾಗಿ ಮಾಡದೆ ಇದ್ದರೆ ನಮ್ಮ ಜನಾಂಗಕ್ಕೂ ಅನ್ಯಾಯವಾಗುತ್ತದೆ ಎಂಬುದು ಎಲ್ಲರ ಕಾಳಜಿ ಅಷ್ಟೇ. ನ್ಯಾಯ ಸಿಗಲ್ಲ ಎಂಬ ಕಾರಣಕ್ಕೆ ಈ ವರದಿಗೆ ಒಕ್ಕಲಿಗ ಸಮುದಾಯದವರು ವಿರೋಧ ವ್ಯಕ್ಯಪಡಿಸುತ್ತಾ ಇರಬಹುದು. ವರದಿ ಯಾವ ರೀತಿ ತಯಾರು ಮಾಡಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಅದರ ಬಗ್ಗೆ ಗೊತ್ತಾದ್ರೆ ಯೋಚನೆ ಮಾಡುತ್ತಾರೆ ಎಂದು ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!