Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಆಟೋ ಚಾಲಕರ ಅನಿರ್ಧಿಷ್ಟಾವಧಿ ಕಾಲ ಆಹೋರಾತ್ರಿ ಧರಣಿ ಯಾಕೆ‌ ?

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,                         
ಮೊ : 98862 95817

ಸುದ್ದಿಒನ್, ಚಿತ್ರದುರ್ಗ(ಆ. 28) : ಆಟೋ ಚಾಲಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಕಾಲ ಇಂದು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಆಹೋರಾತ್ರಿ ಧರಣಿ ನಡೆಸಲಾಯಿತು.

ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ 20 ವರ್ಷಗಳಿಂದ ವಿವಿಧ ಆಟೋ ಸಂಘಟನೆಗಳು ಹೋರಾಟ ಮಾಡುತ್ತಾ ಮನವಿ ಸಲ್ಲಿಸಿದ್ದರೂ ಸಹ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಆದ ಕಾರಣ ಈ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ, ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಅನಿರ್ಧಿಷ್ಟಕಾಲ ಆಹೋರಾತ್ರಿ ಧರಣಿ ನಡೆಸಲಾಗುತ್ತಿದೆ.

ಹೊಸದಾಗಿ ಬರುವಂತಹ ಆಟೋಗಳಿಗೆ ಆರ್.ಟಿ.ಓ. ಇಲಾಖೆ ಪರ್ಮಿಟ್ ನೀಡಬಾರದು ಚಿತ್ರದುರ್ಗ ಪರ್ಮಿಟ್ ಇಲ್ಲದೆ ಇರುವ ಔಟ್ ಪರ್ಮಿಟ್ ಆಟೋಗಳನ್ನು ಹಿಡಿದು ಹಾಕಬೇಕು.  ಆಟೋ, ಚಾಲಕರ ಸಂಘಟನೆಗಳು ನಿಗದಿ ಪಡಿಸಿರುವ ಸ್ಥಳಗಳಿಗೆ ಆಟೋ ನಿಲ್ದಾಣಗಳನ್ನು ಜಿಲ್ಲಾ ಆಡಳಿತ ಈ ಕೂಡಲೇ ನಿರ್ಮಿಸಿ ಕೊಡಬೇಕು.

ಆಟೋ ಚಾಲಕರಿಗಾಗಿಯೇ ಆಟೋ ಚಾಲಕರ ನಿಗಮ ಮಂಡಳಿ ರಚನೆಯಾಗಬೇಕು. ಹಳ್ಳಿಗಳಿಗೆ ಸೀಟು ಹೊಡೆಯುವ ಅಪ್ಪೆ ಆಟೋಗಳನ್ನು ಈ ಕೂಡಲೇ ನಗರದಿಂದ ಬಹಿಷ್ಕರಿಸಬೇಕು. ರಾಜ್ಯ ಸರ್ಕಾರದಿಂದ ಬರುವ ಆಶ್ರಯ ಮನೆ ಯೋಜನೆಯಡಿಯಲ್ಲಿ ನಿರ್ಗತಿಕ ಆಟೋ ಚಾಲಕರಿಗೆ ಆಶ್ರಯ ಮನೆ ನೀಡಬೇಕು.

ನಗರ ಸಾರಿಗೆ ಬಸ್ಸುಗಳಿಗೆ ನಿಗಧಿತ ಸಮಯ ಸ್ಥಳ ಈ ಕೂಡಲೇ ನಿಗಧಿಪಡಿಸಬೇಕು.  ಆಟೋ ಚಾಲಕರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಸರ್ಕಾರದಿಂದ ಸೌಲತ್ತುಗಳನ್ನು ನೀಡಬೇಕು ಎಂದು ಚಿತ್ರದುರ್ಗ ನಗರ ಆಟೋ ಸಂಘಟನೆಗಳ ಒಕ್ಕೂಟದವತಿಯಿಂದ ಆಗ್ರಹಿಸಲಾಯಿತು.

ಈ ಪ್ರತಿಭಟನೆಯ ನೇತೃತ್ವವನ್ನು ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ ವಹಿಸಿದ್ದರು. ಇದರಲ್ಲಿ ಕುಮಾರಸ್ವಾಮಿ, ವೆಂಕಟೇಶ್, ಸಿದ್ದು, ಅಮರೇಶ್, ಇಕ್ಬಾಲ್, ಆಸಿಫ್ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!