Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಿಸಿಎಂ ಡಿಕೆ ಶಿವಕುಮಾರ್ ದಿಢೀರನೇ ಹಿಮಾಚಲ ಪ್ರದೇಶಕ್ಕೆ ಹೋಗಿದ್ದೇಕೆ..?

ಡಿಕೆ ಶಿವಕುಮಾರ್
---Advertisement---

 

ಬೆಂಗಳೂರು: ನಿನ್ನೆಯಷ್ಟೇ ಕರ್ನಾಟಕ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಭರ್ಜರಿ ಗೆಲುವಾಗಿದೆ. ಆದರೆ ಹಿಮಾಚಲ ಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸೋಲಾಗಿದೆ. ಈ ಬೆಳವಣಿಗೆಯ ಹಿನ್ನೆಲೆ ಎಐಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಡಿಸಿಎಂ ಡಿಕೆ ಶಿವಕುಮಾರ್ ಹಿಮಾಚಲ ಪ್ರದೇಶಕ್ಕೆ ದೌಡಾಯಿಸಿದ್ದಾರೆ. ಅಲ್ಲಿನ ಪರಿಸ್ಥಿತಿಯನ್ನು ಡಿಕೆ ಶಿವಕುಮಾರ್ ಅವರಿಗೆ ಸರಿ ಮಾಡುವ ಜವಾಬ್ದಾರಿ ನೀಡಲಾಗಿದೆ.

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಅಪಾಯ ಎದುರಾಗಿರುವ ಕಾರಣ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಕಳುಹಿಸಲಾಗಿದೆ. ರಾಜಕೀಯದ ಮಹತ್ವ ಬೆಳವಣಿಗೆಯಲ್ಲಿ ಸಿಎಂ ರಾಜೀನಾಮೆಗೆ ಕಾಂಗ್ರೆಸ್ ಶಾಸಕರು ಮತ್ತು ಬಿಜೆಪಿ ನಾಯಕರು ಪಟ್ಟು ಹಿಡಿದು ಕುಳಿತಿದ್ದಾರೆ. ಹೀಗಾಗಿ ಸಮಸ್ಯೆಯನ್ನು ಬಗೆಹರಿಸುವಂತೆ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿ, ಹಿಮಾಚಲ ಪ್ರದೇಶಕ್ಕೆ ಕಳುಹಿಸಿದೆ.

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಅಭಷೇಕ್ ಮನು ಸಿಂಘ್ವಿ ಸ್ಪರ್ಧೆ ಮಾಡಿದ್ದರು‌. ಸಂಖ್ಯಾಬಲದ ಪ್ರಕಾರ ಅವರೇ ಗೆಲ್ಲಬೇಕಿತ್ತು ಕೂಡ. ಆದರೆ ಅವರು ಸೋತಿದ್ದಾರೆ. ಕಾಂಗ್ರೆಸ್ ನ ಆರು ಶಾಸಕರು ಅಡ್ಡಮತದಾನ ಮಾಡಿದ್ದಾರೆ. ಬಿಜೆಪಿಗೆ ವೋಟ್ ಹಾಕಿದ್ದಾರೆ. ಇದು ಕಾಂಗ್ರೆಸ್ ಗೆ ಅಪಾಯವಾದಂತೆ ಆಗಿದೆ. ಕಾಂಗ್ರೆಸ್ ಶಾಸಕರು ಸಿಎಂ ವಿರುದ್ಧ ತಿರುಗಿ ಬಿದ್ದ ಬಳಿಕ ಬಿಜೆಪಿ ನಾಯಕರು ಹಿಮಾಚಲ ಪ್ರದೇಶ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಸಿಎಂ ಸುಖವಿಂದರ್ ಸಿಂಗ್ ಸುಳು ಅವರಿಗೆ ವಿಶ್ವಾಸ ಮತಯಾಚನೆ ಮಾಡಲು ಬಿಜೆಪಿ ಒತ್ತಾಯ ಮಾಡಿದೆ. ಈ ರಾಜಕೀಯದಾಟದಲ್ಲಿ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇರುವುದರಿಂದ ಪರಿಸ್ಥಿತಿ ತಿಳಿಗೊಳಿಸಲು ಡಿಕೆ ಶಿವಕುಮಾರ್ ಅವರನ್ನು ಕಳುಹಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...