Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪ್ರವಾದಿ ವಿರುದ್ಧ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಇದ್ದಕ್ಕಿದ್ದ ಹಾಗೆ ಗನ್ ಪಡೆದಿದ್ಯಾಕೆ..?

---Advertisement---

ನವದೆಹಲಿ: ಜೀವ ಬೆದರಿಕೆ ಇದೆ ಎಂದು ಮಾಜಿ ಬಿಜೆಪಿ ನಾಯಕಿ ನೂಪುರ್ ಶರ್ಮಾ ಗನ್ ಲೈಸೆನ್ಸ್ ಪಡೆದಿದ್ದಾರೆ. ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿಯಾದ ಹೇಳಿಕೆ ನೀಡಿ, ಬಿಜೆಪಿಯಿಂದ ಅಮಾನತುಗೊಂಡಿದ್ದರು. ಇದೀಗ ಜೀವ ಬೆದರಿಕೆ ಇದೆ ಎನ್ನುತ್ತಿದ್ದಾರೆ.

ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ನೂಪರ್ ಶರ್ಮಾ ನೀಡಿದ್ದ ಹೇಳಿಕೆ ವೈರಲ್ ಆಗಿತ್ತು. ಮುಸ್ಲಿಂ ಸಮುದಾಯದವರನ್ನು ಕೆರಳಿಸಿತ್ತು. ಮುಸ್ಲಿಂ ಸಮುದಾಯದ ಕೋಪಕ್ಕೆ ನೂಪುರ್ ಶರ್ಮಾ ಗುರಿಯಾಗಿದ್ದರು. ಮುಸ್ಲಿಂ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದವು. ಹೀಗಾಗಿ ಬಿಜೆಪಿ ಪಕ್ಷ ನೂಪುರ್ ಶರ್ಮಾ ಅವರನ್ನು ತಮ್ಮ ಪಕ್ಷದಿಂದ ಅಮಾನತು ಮಾಡಿತ್ತು.

ಇದಾದ ಬಳಿಕ ನೂಪುರ್ ಶರ್ಮಾ, ತನಗೆ ಜೀವ ಬೆದರಿಕೆ ಇದೆ, ಗನ್ ಲೈಸೆನ್ಸ್ ಬೇಕೆಂದು ದೆಹಲಿ ಪೊಲೀಸರಿಗೆ ಮನವಿ ಮಾಡಿದ್ದರು. ಜೀವ ರಕ್ಷಣೆಗಾಗಿ ನೂಪುರ್ ಶರ್ಮಾ ಮಾಡಿದ್ದ ಮನವಿಯನ್ನು ಪೊಲೀಸರು ಪುರಸ್ಕರಿಸಿದ್ದು, ಗನ್ ಲೈಸೆನ್ಸ್ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...