Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಕೆಯ ಸಾವಿನ ಸುದ್ದಿ ಕೇಳಿ ಏನು ಅನ್ನಿಸಲಿಲ್ಲ ಎಂದಿದ್ದೇಕೆ ಪೂನಂ ಪಾಂಡೆ ಮಾಜಿ ಗಂಡ..?

Facebook
Twitter
Telegram
WhatsApp

ಗರ್ಭಕಂಠದ ಕ್ಯಾನ್ಸರ್‌ ನಿಂದ ಬಳಲುತ್ತಿರುವ ಬಾಲಿವುಡ್ ನಟಿ ಪೂನಂ ಪಾಂಡೆ, ಇತ್ತಿಚೆಗೆ ನಿಧನದ ನಾಟಕವಾಡಿದ್ದರು. ಅವರ ಮ್ಯಾನೇಜರ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೂನಂ ಪಾಂಡೆ ಸಾವಿನ ಸುದ್ದಿಯನ್ನು ಖಚಿತ ಪಡಿಸಿದ್ದರು. ಹೀಗಾಗಿ ಎಲ್ಲೆಊ ಪೂನಂ ಪಾಂಡೆ ಸತ್ತಿದ್ದಾರೆ ಎಂದೇ ನಂಬಿದ್ದರು, ಅವರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದರು.

ಆದರೆ ಮರುದಿನವೇ ನಾನು ಸತ್ತಿಲ್ಲ, ಬದುಕಿದ್ದೀನಿ. ಆ ರೀತಿಯಾದಂತ ನಾಟಕವಾಡಿದ್ದಕ್ಕೆ ಕ್ಷಮೆ ಇರಲಿ. ಅದಕ್ಕೆ ಕಾರಣ ನನ್ನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಲಿ ಎಂದು ಆ ರೀತಿ ಮಾಡಿದೆ ಎಂದು ವಿಡಿಯೋ ಹರಿಬಿಟ್ಟಿದ್ದರು. ಈ ವಿಚಾರವಾಗಿ ಆಕೆಯ ಮಾಜಿ ಪತಿ ಪ್ರತಿಕ್ರಿಯೆ ನೀಡಿದ್ದಾರೆ.

 

ಪೂನಂ ಪಾಂಡೆ ನಾಲ್ಕು ವರ್ಷಗಳ ಹಿಂದೆ ಸ್ಯಾಮ್ ಬಾಂಬೆ ಎಂಬುವವರ ಜೊತೆಗೆ ಮದುವೆಯಾಗಿದ್ದರು. ಸ್ಯಾಮ್ ಅವರಿಗೆ ಮೊದಲೇ ಎರಡು ಮಕ್ಕಳಿದ್ದರು, ಒಪ್ಪಿ ಪ್ರೀತಿಸಿ‌ ಮದುವೆಯಾಗಿದ್ದರು. ಆದರೆ ಆ ಸಂಬಂಧ ಹೆಚ್ಚು ದಿನ ಉಳಿಯಲೇ ಇಲ್ಲ. ಇದೀಗ ಅವರ ಸಾವಿನ ಬಗ್ಗೆ ಸ್ಯಾಮ್ ಮಾತನಾಡಿದ್ದು, ನನಗೆ ಅವಳು ಅಂದರೆ ಇಷ್ಟ. ಅವಳು ಇಲ್ಲ ಎಂಬ ಸುದ್ದಿ ಕೇಳಿ ನನಗೆ ಏನು ಅನಿಸಲಿಲ್ಲ. ಕಾರಣ ಅವಳ ಸಾವಿನ ಸುದ್ದಿ ನಾನು ನಂಬಲೇ ಇಲ್ಲ. ಯಾವಾಗಲೂ ಅವಳ ಬಗ್ಗೆ ಯೋಚಿಸುತ್ತೇನೆ. ತನ್ನ ಇಮೇಜನ್ನು ಪಕ್ಕಕ್ಕಿಟ್ಟು ಕ್ಯಾನ್ಸರ್​​ ಬಗ್ಗೆ ಅರಿವು ಮೂಡಿಸಲು ಪೂನಂ ಹೀಗೆ ಮಾಡಿದ್ದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.

ಪೂನಂ ಪಾಂಡೆ ಕೂಡ ತನ್ನ ಸಾವಿನ ಸುದ್ದಿ ಹಬ್ಬಿಸಿದ್ದು, ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಲಿ ಎಂಬ ಕಾರಣಕ್ಕೆ. ಪೂನಂ ಪಾಂಡೆ ನಿಧನದ ಸುದ್ದಿ ತಿಳಿದ ಬಳಿಕ, ನಿರೀಕ್ಚೆಯಂತೆ ಹೆಚ್ಚಿನ ಜನ ಆ ಕ್ಯಾನ್ಸರ್ ಬಗ್ಗೆ ಮಾತನಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!