Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಧಾನಿ ಮೋದಿಯೇ ಹೋಗಿ ಆ ವ್ಯಕ್ತಿ ಬಳಿ‌ ಸೆಲ್ಫೀ ಕ್ಲಿಕ್ಕಿಸಿಕೊಂಡಿದ್ದು ಯಾಕೆ..?

---Advertisement---

ಚೆನ್ನೈ: ಪ್ರಧಾನಿ ಮೋದಿ ರಾಜ್ಯಕ್ಕೆ ಬಂದಾಗ ದೂರದಿಂದಾನೇ ನೋಡಿ ಖುಷಿ ಪಡುತ್ತೀವಿ‌. ದೂರದಿಂದಾನೇ ಅವರ ಜೊತೆಗೊಂದು ಸೆಲ್ಫೀ ಕ್ಲಿಕ್ಕಿಸಿಕೊಳ್ಳುತ್ತೀವಿ. ಆದರೆ ಪ್ರಧಾನಿ ಮೋದಿಯವರೇ ಹತ್ತಿರ ಬಂದು ಸೆಲ್ಫಿ ತೆಗೆದುಕೊಳ್ಳೋಣಾ ಅಂದ್ರೆ ಸಂತಸವಾಗದೆಯೇ ಇರುತ್ತದೆಯಾ.‌? ಆ ಸಂತಸ, ಆ ಖುಷಿ ಸಿಕ್ಕಿರುವುದು ತಮಿಳುನಾಡಿನ ಬಿಜೆಪಿ ಕಾರ್ಯಕರ್ತನಿಗೆ.

ಪ್ರಧಾನಿ ಮೋದಿ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಗೆ ಚೆನ್ನೈಗೆ ಆಗಮಿಸಿದ್ದ ಪ್ರಧಾನಿ ಮೋದಿ, ಬಿಜೆಪಿ ಕಾರ್ಯಕರ್ತ ತಿರು ಎಸ್ ಮಣಿಕಂದನ್ ಅವರನ್ನು ಭೇಟಿ ಮಾಡಿ ಸೆಲ್ಫೀ ಕ್ಲಿಕ್ಕಿಸಿಕೊಂಡಿದ್ದಾರೆ. ತಿರು ದಿವ್ಯಾಂಗರಾಗಿದ್ದರು ಕೂಡ ಬಿಜೆಪಿ ಕಾರ್ಯಕರ್ತರಲ್ಲದೆ, ಜೀವನೋಪಾಯಕ್ಕೆ ಅಂಗಡಿ ನಡೆಸುತ್ತಿದ್ದರು.

ಪ್ರಧಾನಿ ಮೋದಿ ತಿರು ಜೊತೆಗಿನ ಫೋಟೋ ಹಂಚಿಕೊಂಡು ಟ್ವೀಟ್ ಮಾಡಿದ್ದು, ಚೆನ್ನೈನಲ್ಲಿ ನಾನು ಮಣಿಕಂದ‌ನ್ ಅವರನ್ನು ಭೇಟಿಯಾದೆ. ಈ ರೋಡಿನ ಬಿಜೆಪಿ ಕಾರ್ಯಕರ್ತ ಹಾಗೂ ಬೂತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ದಿವ್ಯಾಂಗರಾಗಿದ್ದರೂ ಸ್ವಂತ ಅಂಗಡಿ ಹೊಂದಿದ್ದಾರೆ. ಇದು ಎಲ್ಲರಿಗೂ ಪ್ರೇತಣೆಯೇ ಸರಿ. ಅವರು ಪ್ರತಿದಿನ ತಮಗೆ ಬಂದ ಲಾಭದಲ್ಲಿ ಒಂದು ಭಾಗವನ್ನು ಬಿಜೆಪಿಗೆ ನೀಡುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...