Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜಣ್ಣನನ್ನ ಡಿಕೆಶಿ ಭೇಟಿ ಆಗಿದ್ದೇಕೆ..? ಪುತ್ರ ರಾಜೇಂದ್ರ ಬಿಚ್ವಿಟ್ರು ಸೀಕ್ರೆಟ್

---Advertisement---

ದೆಹಲಿ: ಸಿಎಂ ಆಗಬೇಕೆಂಬ ಆಕಾಂಕ್ಷೆ ಹೊತ್ತು ದೇವರ ಮೊರೆ ಹೋಗಿದ್ದಾಗಿದೆ. ಕಳೆದ ಕೆಲ ದಿನಗಳಿಂದ ಸಿಎಂ ಸಿದ್ದರಾಮಯ್ಯ ಆಪ್ತರನ್ನು ಡಿಕೆಶಿ ಭೇಟಿ ಆಗ್ತಾ ಇದ್ದಾರೆ. ಅದರಲ್ಲೂ ಸಿದ್ದರಾಮಯ್ಯ ಅವರ ಪರಮಾಪ್ತ ರಾಜಣ್ಣ ಅವರನ್ನು ಭೇಟಿಯಾಗಿದ್ದರು. ಅದರಲ್ಲೂ ಎರಡು ಬಾರಿ. ಈ ಭೇಟಿಯ ಹಿನ್ನಲೆ ಏನು ಎಂಬುದನ್ನ ಅವರ ಪುತ್ರ ರಾಜೇಂದ್ರ ಅವರು ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ರಾಜೇಂದ್ರ ಅವರು, ದೆಹಲಿಯಲ್ಲಿ ಬೋರ್ಡ್ ಮೀಟಿಂಗ್ ಇತ್ತು ಅದಕ್ಕೆ ಬಂದಿದೆ. ಡಿಕೆ ಶಿವಕುಮಾರ್ ಅವರನ್ನ ರಾಜಣ್ಣ ಅವರು ಭೇಟಿ ಆಗಿರುವುದು, ಅವರು ಪಕ್ಷದ ಅಧ್ಯಕ್ಷರಿದ್ದಾರೆ. ಮತ್ತೆ ನಮ್ಮ ಸರ್ಕಾರದಲ್ಲಿ ಉಪಮುಖ್ಯಮಂತ್ರಿಗಳಿದ್ದಾರೆ. ಏನಾದರೂ ವಿಚಾರಗಳು ಇದ್ದಂತರ ಸಂದರ್ಭದಲ್ಲಿ ಮಾತನಾಡುವುದಕ್ಕೆ ಹೋಗಿದ್ದಾರೆ ಎಂದು ನಾನು ಅಂದುಕೊಂಡಿದ್ದೀನಿ. ಯಾಕಂದ್ರೆ ಅಲ್ಲಿ ಅವರಿಬ್ಬರೇ ಭೇಟಿಯಾಗಿರುವಂತದ್ದು. ನಾನು ಅಲ್ಲಿರಲಿಲ್ಲ.

ಆ ಭೇಟಿಯಲ್ಲಿ ಏನೆಲ್ಲಾ ಚರ್ಚೆಯಾಗಿದೆ ಎಂಬುದು ನಮ್ಮ ಬಳಿ ಚರ್ಚೆ ಮಾಡಿಲ್ಲ. ರಾಜಣ್ಣ ಅವರು ಯಾವಾಗಲೂ ಹೇಳುತ್ತಾರೆ. ನಾನು ಸಿದ್ದರಾಮಯ್ಯ ಅವರ ಪರ ಇದ್ದೀನಿ. ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಎಂದು ರಾಜಣ್ಣ ಅವರು ಮಾತನ್ನ ಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಿದ್ದಾರೆ. ಅವರನ್ನ ಭೇಟಿಯಾಗಿರುವುದರಲ್ಲಿ ತಪ್ಪಿಲ್ಲ. ವಿಶ್ವಾಸ ಗಳಿಸುವುದು ಎನ್ನುವುದಕ್ಕಿಂತ ರಾಜಣ್ಣ ಅವರು ಡಿಕೆ ಶಿವಕುಮಾರ್ ಅವರು ಯೂತ್ ಕಾಂಗ್ರೆಸ್ ನಿಂದ ಜೊತೆಗೆ ಬೆಳೆದವರು. ಏನಾದರೂ ಮಾತನಾಡುವ ವಿಚಾರವಿದ್ದಂತ ಸಂದರ್ಭದಲ್ಲಿ ಭೇಟಿಯಾಗಿರಬಹುದು. ನೀವೆಲ್ಲಾ ಹೇಳಿದ್ದಂತೆ ಡಿನ್ನರ್ ಬಗ್ಗೆ ಊಟಕ್ಕೆ ಸೇರುವುದರಲ್ಲಿ ತಪ್ಪೇನಿಲ್ಲ. ನನ್ನ ಭವಿಷ್ಯ ರೂಪಿಸುವಂತದ್ದು, ನಾನೆಲ್ಲಿ ಸ್ಪರ್ಧೆ ಮಾಡ್ತೀನಿ ಅಲ್ಲಿ ಜನ ನನ್ನ ಗೆಲ್ಲಿಸಿ, ಮುಂದಕ್ಕೆ ಕಳುಹಿಸಿದರೆ ಅದಕ್ಕೆ ಪಕ್ಷ ನನಗೆ ಮುಂದೆ ರಾಜಕೀಯ ಸ್ಥಾನಮಾನ ಕೊಡಬೇಕು ಅದನ್ನ ಪಕ್ಷ ಕೊಡುತ್ತದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now