Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೆಟ್ಟರ್ ಬಂದದ್ದು ಯಾಕೆ..? ಹೋದದ್ದು ಯಾಕೆ..? ದಿಗ್ಬ್ರಮೆಯಾಗಿದೆ : ಲಕ್ಷ್ಮೀ ಹೆಬ್ಬಾಳ್ಕರ್

Facebook
Twitter
Telegram
WhatsApp

ಉಡುಪಿ: ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಾಸ್ ಆಗುತ್ತಾರೆ ಎಂಬ ಮಾತು ಆಗಾಗ ಕೇಳಿ ಬಂದಾಗಲೂ ಶೆಟ್ಟರ್ ಇದಕ್ಕೆ ಸ್ಪಷ್ಟನೆ ನೀಡಿದ್ದರು. ನನಗೆ ಅಲ್ಲಿ ಗೌರವ ಇಲ್ಲ. ಯಾವುದೇ ಕಾರಣಕ್ಕೂ ನಾನು ವಾಪಾಸ್ ಹೋಗಲ್ಲ ಎಂದಿದ್ದರು. ಆದರೆ ಇದ್ದಕ್ಕಿದ್ದ ಹಾಗೇ ಬಿಜೆಪಿಗೆ ಹಾರಿದ್ದು ಎಲ್ಲರಿಗೂ ಶಾಕ್ ಎನಿಸಿದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ದಿಗ್ಭ್ರಮೆಗೊಂಡಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶೆಟ್ಟರ್ ಕಾಂಗ್ರೆಸ್ ಬಿಟ್ಟಿರುವುದು ನನಗೆ ದಿಗ್ಭ್ರಮೆಯಾಗಿದೆ. ಶೆಟ್ಟರ್ ಕಾಂಗ್ರೆಸ್ ಗೆ ಬಂದಿದ್ದು ಯಾಕೆ..? ಹೋದದ್ದು ಯಾಕೆ..? ರಾಜಕೀಯದಲ್ಲಿ ಈ ರೀತಿ ಆಗಬಾರದು. ಬಿಜೆಪಿಯಲ್ಲಿ ಅವಮಾನ ಆಯ್ತು ಅಮನತ ಕಾಂಗ್ರೆಸ್ ಗೆ ಬಂದ್ರು. ಅವರಾಗಿಯೇ ಬಂದರೂ ನಾವೂ ಅವರನ್ನು ಸ್ವಾಗತ ಮಾಡಿದೆವು. ಟಿಕೆಟ್ ಕೊಟ್ಟೆವು, ಚುನಾವಣೆಯಲ್ಲಿ ಸೋತರು. ನಮ್ಮ ಕಾರ್ಯಕರ್ತರು ಹಗಲು-ರಾತ್ರಿ ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಸೋತ ಮೇಲೂ ಅನುಕೂಲ ಆಗಬೇಕು, ತೊಂದರೆಯಾಗಬಾರದು ಎಂದು ಎಂಎಲ್ಸಿ ಮಾಡಿದೆವು.

ಕಾಂಗ್ರೆಸ್ ನಲ್ಲಿ ಯಾವುದೇ ರೀತಿಯ ತೊಂದರೆಗಳು ಇರಲಿಲ್ಲ. ಆದರೆ ಯಾಕೆ ಕಾಂಗ್ರೆಸ್ ಬಿಟ್ಟರು ಎಂಬುದು ಮಾತ್ರ ತಿಳಿದಿಲ್ಲ. ಸಚಿವ ಸ್ಥಾನ ಕೇಳಿದ್ದರೋ ಏನೋ ಗೊತ್ತಿಲ್ಲ. ಏನು ಬೇಡಿಕೆ ಇಟ್ಟಿದ್ದರು ಎಂಬುದು ನನಗೆ ತಿಳಿದಿಲ್ಲ. ಆ ಬಗ್ಗೆ ಅವರನ್ನೇ ಕೇಳಬೇಕು. ನೀತಿ, ನಿಯಮ, ತತ್ವ ಸಿದ್ದಾಂತದೊಂದಿಗೆ ತೆಗೆದುಕೊಂಡು ಹೋಗಬೇಕು. ಬಂದ ಪುಟ್ಟ ಹೋದಾ ಪುಟ್ಟ ಎಂಬಂತೆ ಆಗಬಾರದು. ಬೆಳಗಾವಿಯಲ್ಲಿ ನಾನು ಮಂತ್ರಿಯಾಗಿದ್ದೇನೆ. ಬೆಳಗಾವಿ ಟಿಕೆಟ್ ಬಗ್ಗೆ ಯಾವ ಮುಖಂಡರ ಬಳಿಯೂ ಮಾತನಾಡಿಲ್ಲ. ಲಕ್ಷ್ಮಣ್ ಸವದಿ ಖಂಡಿತ ಬಿಜೆಪಿಗೆ ಹೋಗಲ್ಲ ಎಂಬ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು

ಈ ರಾಶಿಯ ಹೈನುಗಾರಿಕೆ, ಹೋಟೆಲ್ ಮತ್ತು ಎಲ್ಲಾ ನಮೂನೆಯ ವ್ಯಾಪಾರಸ್ಥರು ಪೈಪೋಟಿ ಎದುರಿಸುವರು, ಭಾನುವಾರ ರಾಶಿ ಭವಿಷ್ಯ -ಏಪ್ರಿಲ್-28,2024 ಸೂರ್ಯೋದಯ: 05:55, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

error: Content is protected !!