Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶೆಟ್ಟರ್ ಬಂದದ್ದು ಯಾಕೆ..? ಹೋದದ್ದು ಯಾಕೆ..? ದಿಗ್ಬ್ರಮೆಯಾಗಿದೆ : ಲಕ್ಷ್ಮೀ ಹೆಬ್ಬಾಳ್ಕರ್

ಹೆಬ್ಬಾಳ್ಕರ್
---Advertisement---

ಉಡುಪಿ: ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಾಸ್ ಆಗುತ್ತಾರೆ ಎಂಬ ಮಾತು ಆಗಾಗ ಕೇಳಿ ಬಂದಾಗಲೂ ಶೆಟ್ಟರ್ ಇದಕ್ಕೆ ಸ್ಪಷ್ಟನೆ ನೀಡಿದ್ದರು. ನನಗೆ ಅಲ್ಲಿ ಗೌರವ ಇಲ್ಲ. ಯಾವುದೇ ಕಾರಣಕ್ಕೂ ನಾನು ವಾಪಾಸ್ ಹೋಗಲ್ಲ ಎಂದಿದ್ದರು. ಆದರೆ ಇದ್ದಕ್ಕಿದ್ದ ಹಾಗೇ ಬಿಜೆಪಿಗೆ ಹಾರಿದ್ದು ಎಲ್ಲರಿಗೂ ಶಾಕ್ ಎನಿಸಿದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ದಿಗ್ಭ್ರಮೆಗೊಂಡಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶೆಟ್ಟರ್ ಕಾಂಗ್ರೆಸ್ ಬಿಟ್ಟಿರುವುದು ನನಗೆ ದಿಗ್ಭ್ರಮೆಯಾಗಿದೆ. ಶೆಟ್ಟರ್ ಕಾಂಗ್ರೆಸ್ ಗೆ ಬಂದಿದ್ದು ಯಾಕೆ..? ಹೋದದ್ದು ಯಾಕೆ..? ರಾಜಕೀಯದಲ್ಲಿ ಈ ರೀತಿ ಆಗಬಾರದು. ಬಿಜೆಪಿಯಲ್ಲಿ ಅವಮಾನ ಆಯ್ತು ಅಮನತ ಕಾಂಗ್ರೆಸ್ ಗೆ ಬಂದ್ರು. ಅವರಾಗಿಯೇ ಬಂದರೂ ನಾವೂ ಅವರನ್ನು ಸ್ವಾಗತ ಮಾಡಿದೆವು. ಟಿಕೆಟ್ ಕೊಟ್ಟೆವು, ಚುನಾವಣೆಯಲ್ಲಿ ಸೋತರು. ನಮ್ಮ ಕಾರ್ಯಕರ್ತರು ಹಗಲು-ರಾತ್ರಿ ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಸೋತ ಮೇಲೂ ಅನುಕೂಲ ಆಗಬೇಕು, ತೊಂದರೆಯಾಗಬಾರದು ಎಂದು ಎಂಎಲ್ಸಿ ಮಾಡಿದೆವು.

ಕಾಂಗ್ರೆಸ್ ನಲ್ಲಿ ಯಾವುದೇ ರೀತಿಯ ತೊಂದರೆಗಳು ಇರಲಿಲ್ಲ. ಆದರೆ ಯಾಕೆ ಕಾಂಗ್ರೆಸ್ ಬಿಟ್ಟರು ಎಂಬುದು ಮಾತ್ರ ತಿಳಿದಿಲ್ಲ. ಸಚಿವ ಸ್ಥಾನ ಕೇಳಿದ್ದರೋ ಏನೋ ಗೊತ್ತಿಲ್ಲ. ಏನು ಬೇಡಿಕೆ ಇಟ್ಟಿದ್ದರು ಎಂಬುದು ನನಗೆ ತಿಳಿದಿಲ್ಲ. ಆ ಬಗ್ಗೆ ಅವರನ್ನೇ ಕೇಳಬೇಕು. ನೀತಿ, ನಿಯಮ, ತತ್ವ ಸಿದ್ದಾಂತದೊಂದಿಗೆ ತೆಗೆದುಕೊಂಡು ಹೋಗಬೇಕು. ಬಂದ ಪುಟ್ಟ ಹೋದಾ ಪುಟ್ಟ ಎಂಬಂತೆ ಆಗಬಾರದು. ಬೆಳಗಾವಿಯಲ್ಲಿ ನಾನು ಮಂತ್ರಿಯಾಗಿದ್ದೇನೆ. ಬೆಳಗಾವಿ ಟಿಕೆಟ್ ಬಗ್ಗೆ ಯಾವ ಮುಖಂಡರ ಬಳಿಯೂ ಮಾತನಾಡಿಲ್ಲ. ಲಕ್ಷ್ಮಣ್ ಸವದಿ ಖಂಡಿತ ಬಿಜೆಪಿಗೆ ಹೋಗಲ್ಲ ಎಂಬ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...