Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಡಿಯೂರಪ್ಪ ಪುತ್ರ ರಾಘವೇಂದ್ರ ಅವರು ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದ್ದೇಕೆ..?

---Advertisement---

ಬೆಂಗಳೂರು; ಶಿವಮೊಗ್ಗದ ಬಿಜೆಪಿ ಸಂಸದ ಬಿವೈ ರಾಘವೇಂದ್ರ ಅವರು ಇಂದು ರಾಜ್ಯದ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿದ್ದಾರೆ. ಇದು ಹಲವು ಚರ್ಚೆಗಳಿಗೆ ಕಾರಣವಾಗಿದೆ. ಈ ಬಗ್ಗೆ ಬಿವೈ ರಾಘವೇಂದ್ರ ಅವರು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ರಾಜ್ಯದ ಗೌರವಾನ್ವಿತ ಉಪಮುಖ್ಯಮಂತ್ರಿಗಳನ್ನ ಭೇಟಿ ಮಾಡುವುದಕ್ಕೆ ಬಂದಿದೆ. ವಿಶೇಷ ಅಂದ್ರೆ ನಮ್ಮ ಕುಟುಂಬದ ಕಾರ್ಯಕ್ರಮ ಇದು. ನನ್ನ ಮಗನ ಮದುವೆ ಕಾರ್ಯಕ್ರಮ. ಹೀಗಾಗಿ ಆಮಂತ್ರಣ ಪತ್ರಿಕೆ ನೀಡಲು ಬಂದಿದ್ದೆ. ಸಮಯ ನೀಡಿದ್ದರು. ಹೀಗಾಗಿ ಬಂದಿದ್ದೆ. ಇದೇ ಸಮಯದಲ್ಲಿ ನಮ್ಮ ಕ್ಷೇತ್ರದ ಬೇರೆ ಬೇರೆ ಅಭಿವೃದ್ಧಿ ವಿಚಾರವಾಗಿಯೂ ಮಾತನಾಡಿದ್ದೇವೆ. ಬರ್ತೀನಿ ಅಂತ ಹೇಳಿದ್ದಾರೆ. ವೈಯಕ್ತಿಕ ಕಾರ್ಯಕ್ರಮದ ಚರ್ಚೆ ಬಿಟ್ಟರೆ ಬೇರೆ ಇನ್ಯಾವುದು ಇಲ್ಲ. ಆಮಂತ್ರಣ ಕೊಟ್ಟು ಬಂದಿದ್ದೇನೆ ಅಷ್ಟೇ.

ಸಹಜ.. ಅಧಿಕಾರದಲ್ಲಿದ್ದಾಗ, ಸರ್ಕಾರವಿದ್ದಾಗ, ಕ್ಷೇತ್ರದ ಅಭಿವೃದ್ಧಿಗಾಗಿ ಎಲ್ಲರೂ ಬರ್ತಾರೆ. ಕರ್ನಾಟಕ ರಾಜ್ಯ ಸರ್ಕಾರ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ. ಚುನಾಯಿತ ಪ್ರತಿನಿಧಿಗಳು ಬರುವುದು ಹೋಗುವುದು ಸಹಜ. ಅದಕ್ಕೇನು ಬೇರೆ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ. ನಾನು ಕೂಡ ನನ್ನ ಮಗನ ಮದುವೆ ವಿಚಾರಕ್ಕೆ ಭೇಟಿ ಮಾಡಿದ್ದೇನೆ. ಆಮಂತ್ರಣ ಪತ್ರಿಕೆ ನೀಡಿದ್ದೇನೆ. ಅವರು ಕೂಡ ಬರ್ತೀನಿ ಅಂತ ಹೇಳಿದ್ದಾರೆ ಎಂದಿದ್ದಾರೆ.

ರಾಜಕೀಯದಲ್ಲಿ ಇದೆಲ್ಲವೂ ಸಹಜವೇ ಸರಿ. ರಾಜಕಾರಣದ ವಿಚಾರಕ್ಕೆ ಏನೇ ಮಾತನಾಡಿದರು ಸಂಬಂಧ, ಕಾರ್ಯಕ್ರಮಗಳು ಅಂತ ಬಂದಾಗ ಎಲ್ಲರು ಒಂದೇ ಟೇಬಲ್‌ನಲ್ಲಿಯೇ ಕುಳಿತುಕೊಳ್ಳುತ್ತಾರೆ. ಇದು ಸರ್ವೇ ಸಾಮಾನ್ಯ. ರಾಜಕೀಯ ದ್ವೇಷ ಬಿಟ್ಟು ಇದೀಗ ಮಗನ ಮದುವೆಗೆ ಯಡಿಯೂರಪ್ಪ ಅವರ ಪುತ್ರ ಕೂಡ ಡಿಕೆ ಶಿವಕುಮಾರ್ ಅವರನ್ನ ಆಹ್ವಾನ ಮಾಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment