Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿ ವಿರುದ್ಧ ಪ್ರತಿಭಟನೆ ಕೈಬಿಟ್ಟಿದ್ದೇಕೆ ? ಮುನಿರತ್ನಗೆ ಯಡಿಯೂರಪ್ಪ ಹೇಳಿದ್ದೇನು ? 

Facebook
Twitter
Telegram
WhatsApp

 

ಬೆಂಗಳೂರು: ಇಂದು ಶಾಸಕ ಮುನಿರತ್ನ ವಿಧಾನಸೌಧದ ಮುಂದೆ ಏಕಾಂಕಿಯಾಗಿ ಪ್ರತಿಭಟನೆ ನಡೆಸಿದ್ದರು. ಗಾಂಧಿ ಪ್ರತಿಮೆ ಮುಂದೆ ಕೂತು ಸಿಂಗಲ್ ಆಗಿ ಪ್ರೊಟೆಸ್ಟ್ ಮಾಡಿದ್ದರು. ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮುನಿರತ್ನ ಅವರು ಆಕ್ರೋಶ ಹೊರ ಹಾಕಿದ್ದರು. ರಾಜರಾಜೇಶ್ವರಿ ನಗರಕ್ಕೆ ಅನುದಾನ ಕಡಿತಗೊಳಿಸಿದ ಹಿನ್ನಲೆ, ಸತ್ಯಾಗ್ರಹ ಮಾಡಲು ಯೋಜನೆ ರೂಪಿಸಿದ್ದರು.

ಗಾಂಧಿ ಪ್ರತಿಮೆ ಮುಂದೆ, ಬೆಳಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯ ತನಕ ಪ್ರತಿಭಟನೆ ನಡೆಸಲು ಪ್ಲ್ಯಾನ್ ಮಾಡಿದ್ದರು. ಈ ವೇಳೆ ಮುನಿರತ್ನ ಅವರನ್ನು ಮಾಜಿ ಸಿಎಂ ಯಡಿಯೂರಪ್ಪ ಅವರೇ ಸಮಾಧಾನ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಬಳಿ ಈ ಸಂಬಂಧ ಮಾತನಾಡುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ ಅವರು ಭರವಸೆ ನೀಡಿದ ಬಳಿಕ ಮುನಿರತ್ನ ಅವರು ತಮ್ಮ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ.

ಬಳಿಕ ಮಾತನಾಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು, ಬಿಜೆಪಿ ಸರ್ಕಾರ ನೀಡಿದ್ದ ಅನುದಾನವನ್ನು ರದ್ದು ಮಾಡಿ, ಸೇಡಿನ ರಾಜಕಾರಣ‌ ಮಾಡುತ್ತಿದ್ದಾರೆ. ಈ ರೀತಿ ಮಾಡುವುದು ಸರಿಯಲ್ಲ. ಈ ರೀತಿ ಮಾಡಬೇಡಿ ಎಂದು ಸರ್ಕಾರಕ್ಕೆ ತಿಳಿಸುತ್ತೇನೆ. ಒಬ್ಬರೇ ಧರಣಿ ಮಾಡುವುದು ಬೇಡ. ಮುನಿರತ್ನ ಜೊತೆಗೆ ನಾವೆಲ್ಲಾ ಇದ್ದೇವೆ‌. ಮೊದಲು ಧರಣಿ ಕೈಬಿಡಿ ಎಂದು ಯಡಿಯೂರಪ್ಪ ಅವರು ಹೇಳಿದರು.

ಯಡಿಯೂರಪ್ಪ ಅವರ ಮಾತಿಗೆ ಒಪ್ಪಿಗೆ ನೀಡಿ, ಧರಣಿ ಕೈಬಿಟ್ಟ ಮುನಿರತ್ನ ಅವರು ಮಾತನಾಡಿ, ಮಧ್ಯಾಹ್ನದ ತನಕ ನಾನು ಸತ್ಯಾಗ್ರಹ ಮಾಡಬೇಕೆಂದುಕೊಂಡಿದ್ದೆ. ಆದರೆ ಯಡಿಯೂರಪ್ಪ ಅವರು ನನ್ನ ಜೊತೆ ನಿಲ್ಲುವ ಭರವಸೆ ನೀಡಿದ್ದಾರೆ. ಹೀಗಾಗಿ ಸತ್ಯಾಗ್ರಹ ಕೈಬಿಟ್ಟಿದ್ದೇನೆ. ನಮ್ಮಲ್ಲಿ ಗಾಂಜಾ ಮಾರಾಟ ಜಾಸ್ತಿಯಾಗ್ತಾ ಇದೆ, ಪೊಲೀಸರ ಬಳಿಯೇ ಸೆಲ್ಫಿ ತೆಗೆಸಿಕೊಳ್ಳುತ್ತಾರೆ, ಹೇಳಿದ ಕೆಲಸವಾಗುತ್ತಿಲ್ಲ ಎಂದು ಬೇಸರ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!