Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿಗೆ ಈ ಮಹಾ ಪಾಪದ ಕೆಲಸ ಯಾಕೆ ಬೇಕು..? ಮುನಿರತ್ನ ಗರಂ

---Advertisement---

ಬೆಂಗಳೂರು; ರಾಜ್ಯ ರಾಜಕಾರಣದಲ್ಲಿ ಈಗ ಹನಿಟ್ರ್ಯಾಪ್ ಸುದ್ದಿ ಜೋರಾಗಿದೆ. ಅದರಲ್ಲೂ ತುಮಕೂರಿನ ಸಚಿವರ ಹೆಸರು ಇದರಲ್ಲಿ ಓಡಾಡ್ತಾ ಇದೆ. ವಿಧಾನಸಭೆಯಲ್ಲೂ ಬಿಸಿಬಿಸಿ ಚರ್ಚೆಯಾಗುತ್ತಾ ಇದೆ. ಇದರ ನಡುವೆ ಶಾಸಕ ಮುನಿರತ್ನ ಕೂಡ ಮಾತನಾಡಿದ್ದು, ಆಕ್ರೋಶ ಹೊರ ಹಾಕಿದ್ದಾರೆ. ಅದರಲ್ಲೂ ಡಿಕೆ ಶಿವಕುಮಾರ್ ಮೇಲೆ ಹರಿಹಾಯ್ದಿದ್ದಾರೆ.

ನನಗೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಂದ ಅನ್ಯಾಯವಾಗಿದೆ. ನನ್ನ ವಿರುದ್ಧ ಅ*ಚಾರದ ಕೇಸ್ ಹಾಕಿಸಿದ್ದಾರೆ. ನೀನು ರಾಜೀನಾಮೆ ಕೊಟ್ಟರೆ ಜಾತಿ ನಿಂದನೆ ಕೇಸ್ ವಾಪಾಸ್ ಪಡೆಯುತ್ತೇನೆ ಎಂದು ಹೇಳಿದ್ದರು. ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಹೆಚ್.ಡಿ.ರೇವಣ್ಣ ವಿರುದ್ಧವೂ ಇದೇ ಕುತಂತ್ರ ಮಾಡಿದರು. ಈಗ ಸಚಿವ ರಾಜಣ್ಣ ಅವರ ಮೇಲೆ ಮಾಡಿದ್ದಾರೆ.

ಡಿಕೆ ಶಿವಕುಮಾರ್ ಅವರಿಗೆ ಒಂದು ಕಿವಿ ಮಾತು ಹೇಳುತ್ತೇನೆ. ನಿಮ್ಮ ಹನಿಟ್ರ್ಯಾಪ್ ಟೀಂ ನನಗೆ ಗೊತ್ತಿದೆ. ನೀವೂ ರಾತ್ರಿ ಮೀಟಿಂಗ್ ಮಾಡಿದ್ದು ನನಗೆ ಗೊತ್ತಿದೆ. ಡಿಕೆ ಶಿವಕುಮಾರ್ ಅವರಿಗೆ ಈ ಮಹಾಪಾಪದ ಕೆಲಸ ಯಾಕೆ ಬೇಕು..? ನನಗೆ ಆಗಿರುವ ನೋವನ್ನು ನಾನು ಹೇಳಿದ್ದೇನೆ. ಸಿಸಿಟಿವಿ, ಆಡಿಯೋ ಎಲ್ಲಾ ಸಾಕ್ಷಿಗಳು ಇದಾವೆ. ರಮೇಶ್ ಜಾರಕಿಹೊಳಿ, ನಾನು ಕಾಂಗ್ರೆಸ್ ನಲ್ಲಿಯೇ ಇದ್ದದ್ದು. ರಾಜಣ್ಣ ಸಹ ಕಾಂಗ್ರೆಸ್ ನಲ್ಲಿಯೇ ಇರೋದು. ಇದು ಒಳ್ಳೆಯದಲ್ಲ ಎಂದು ಶಾಸಕ ಮುನಿರತ್ನ ಎಚ್ಚರಿಕೆ ನೀಡಿದ್ದಾರೆ. ಇನ್ನು ಇದೇ ವಿಚಾರವಾಗಿ ಸಚಿವ ಕೆ.ಎನ್.ರಾಜಣ್ಣ ಸದನದಲ್ಲಿ ಮಾತನಾಡುತ್ತಾ, ಇಬ್ಬರಲ್ಲ 48 ನಾಯಕರ ಹನಿಟ್ರ್ಯಾಪ್ ಆಗಿದೆ ಎಂದು ಆರೋಪಿಸಿದ್ದಾರೆ. ಸದ್ಯ ರಾಜ್ಯ ರಾಜಕೀಯದಲ್ಲಿ ಗದ್ದಲ ಎಬ್ಬಿಸಿರೋ ಹನಿಟ್ರ್ಯಾಪ್ ವಿಚಾರ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...