ಬೆಂಗಳೂರು; ರಾಜ್ಯ ರಾಜಕಾರಣದಲ್ಲಿ ಈಗ ಹನಿಟ್ರ್ಯಾಪ್ ಸುದ್ದಿ ಜೋರಾಗಿದೆ. ಅದರಲ್ಲೂ ತುಮಕೂರಿನ ಸಚಿವರ ಹೆಸರು ಇದರಲ್ಲಿ ಓಡಾಡ್ತಾ ಇದೆ. ವಿಧಾನಸಭೆಯಲ್ಲೂ ಬಿಸಿಬಿಸಿ ಚರ್ಚೆಯಾಗುತ್ತಾ ಇದೆ. ಇದರ ನಡುವೆ ಶಾಸಕ ಮುನಿರತ್ನ ಕೂಡ ಮಾತನಾಡಿದ್ದು, ಆಕ್ರೋಶ ಹೊರ ಹಾಕಿದ್ದಾರೆ. ಅದರಲ್ಲೂ ಡಿಕೆ ಶಿವಕುಮಾರ್ ಮೇಲೆ ಹರಿಹಾಯ್ದಿದ್ದಾರೆ.
ನನಗೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಂದ ಅನ್ಯಾಯವಾಗಿದೆ. ನನ್ನ ವಿರುದ್ಧ ಅ*ಚಾರದ ಕೇಸ್ ಹಾಕಿಸಿದ್ದಾರೆ. ನೀನು ರಾಜೀನಾಮೆ ಕೊಟ್ಟರೆ ಜಾತಿ ನಿಂದನೆ ಕೇಸ್ ವಾಪಾಸ್ ಪಡೆಯುತ್ತೇನೆ ಎಂದು ಹೇಳಿದ್ದರು. ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಹೆಚ್.ಡಿ.ರೇವಣ್ಣ ವಿರುದ್ಧವೂ ಇದೇ ಕುತಂತ್ರ ಮಾಡಿದರು. ಈಗ ಸಚಿವ ರಾಜಣ್ಣ ಅವರ ಮೇಲೆ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಅವರಿಗೆ ಒಂದು ಕಿವಿ ಮಾತು ಹೇಳುತ್ತೇನೆ. ನಿಮ್ಮ ಹನಿಟ್ರ್ಯಾಪ್ ಟೀಂ ನನಗೆ ಗೊತ್ತಿದೆ. ನೀವೂ ರಾತ್ರಿ ಮೀಟಿಂಗ್ ಮಾಡಿದ್ದು ನನಗೆ ಗೊತ್ತಿದೆ. ಡಿಕೆ ಶಿವಕುಮಾರ್ ಅವರಿಗೆ ಈ ಮಹಾಪಾಪದ ಕೆಲಸ ಯಾಕೆ ಬೇಕು..? ನನಗೆ ಆಗಿರುವ ನೋವನ್ನು ನಾನು ಹೇಳಿದ್ದೇನೆ. ಸಿಸಿಟಿವಿ, ಆಡಿಯೋ ಎಲ್ಲಾ ಸಾಕ್ಷಿಗಳು ಇದಾವೆ. ರಮೇಶ್ ಜಾರಕಿಹೊಳಿ, ನಾನು ಕಾಂಗ್ರೆಸ್ ನಲ್ಲಿಯೇ ಇದ್ದದ್ದು. ರಾಜಣ್ಣ ಸಹ ಕಾಂಗ್ರೆಸ್ ನಲ್ಲಿಯೇ ಇರೋದು. ಇದು ಒಳ್ಳೆಯದಲ್ಲ ಎಂದು ಶಾಸಕ ಮುನಿರತ್ನ ಎಚ್ಚರಿಕೆ ನೀಡಿದ್ದಾರೆ. ಇನ್ನು ಇದೇ ವಿಚಾರವಾಗಿ ಸಚಿವ ಕೆ.ಎನ್.ರಾಜಣ್ಣ ಸದನದಲ್ಲಿ ಮಾತನಾಡುತ್ತಾ, ಇಬ್ಬರಲ್ಲ 48 ನಾಯಕರ ಹನಿಟ್ರ್ಯಾಪ್ ಆಗಿದೆ ಎಂದು ಆರೋಪಿಸಿದ್ದಾರೆ. ಸದ್ಯ ರಾಜ್ಯ ರಾಜಕೀಯದಲ್ಲಿ ಗದ್ದಲ ಎಬ್ಬಿಸಿರೋ ಹನಿಟ್ರ್ಯಾಪ್ ವಿಚಾರ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು; ಸ್ಪೀಕರ್ ಎಂಬುದನ್ನು ಮರೆತ ಬಿಜೆಪಿ ನಾಯಕರು ಅವರ ಪೀಠದ ಮೇಲೆಯೇ ಹತ್ತಿ, ಬಜೆಟ್ ಪ್ರತಿಯನ್ನು ಹರಿದು ಹಾಕಿ, ಅಗೌರವ…
ಬೆಂಗಳೂರು ನಗರದ ಜನತೆಗೆ ಸಂತಸದ ಸುದ್ದಿ! ಟಿವಿ9 ಕನ್ನಡವು ಅದ್ಭುತವಾದ ಲೈಫ್ಸ್ಟೈಲ್ ಆಟೋಮೊಬೈಲ್ ಮತ್ತು ಫರ್ನಿಚರ್ ಎಕ್ಸ್ಪೋವನ್ನು ಆಯೋಜಿಸುತ್ತಿದೆ. ಈ…
ಬೆಂಗಳೂರು: ಕಳೆದ ಎರಡ್ಮೂರು ದಿನದಿಂದ ಏರಿಕೆಯಾಗುತ್ತಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. 22 ಕ್ಯಾರಟ್ ನ ಒಂದು ಗ್ರಾಂಗೆ 40…
ವಿಧಾನಸಭೆ ಅಧಿವೇಶನದ ಅಂತಿಮ ದಿನವಾದ ಇಂದು ಸದನದಲ್ಲಿ ಬಿಜೆಪಿ ಸದಸ್ಯರು ಹೈಡ್ರಾಮಾವನ್ನೇ ಮಾಡಿದ್ದಾರೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಶೇಕಡಾ 4ರಷ್ಟು…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 21 : ನಿವೃತ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಹೆಚ್.ನಾಯ್ಕ (88 ವರ್ಷ) ಗುರುವಾರ…
ಸುದ್ದಿಒನ್, ಚಿತ್ರದುರ್ಗ : ಏಪ್ರಿಲ್ 1 ರಿಂದ 13 ರವರೆಗೆ ನಡೆಯುವ ಏಕನಾಥೇಶ್ವರಿ ಅಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ಕೋಟೆ…