Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿಯವರು ಬರ ಅಧ್ಯಯನ ಮಾಡುತ್ತಿರುವುದೇಕೆ..? : ಸಿದ್ದರಾಮಯ್ಯ ಹೇಳಿದ್ದೇನು..?

---Advertisement---

ಬೆಂಗಳೂರು: ರಾಜ್ಯದಲ್ಲಿ ಮಳೆಯಿಲ್ಲದೆ ಬರ ತಾಂಡವವಾಡುತ್ತಿದೆ. ಈಗಾಗಲೇ ಕೇಂದ್ರದಿಂದ ತಂಡವೊಂದು ಬಂದು, ಬರ ಅಧ್ಯಯನ ಕೂಡ ನಡೆಸಿದ್ದಾರೆ. ರಾಜ್ಯದಿಂದ ಕೂಡ ಬರ ಅಧ್ಯಯನ ವರದಿ ನೀಡಲಾಗಿದೆ. ಆದರೆ ಇಲ್ಲಿಯ ತನಕ ಬರ ಪರಿಹಾರ ಮಾತ್ರ ಒಂದು ರೂಪಾಯಿ ಬಂದಿಲ್ಲ. ಇದರ ನಡುವೆ ರಾಜ್ಯ ಬಿಜೆಪಿ ನಾಯಕರು ಕೂಡ ಬರ ಅಧ್ಯಯನ ನಡೆಸುತ್ತಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈಗಾಗಲೇ ಬರ ಅಧ್ಯಯನ ನಡೆಸಿದೆ. ರಾಜಗಯ ಬಿಜೆಪಿಯವರು ಏನು ಅಧ್ಯಯನ ಮಾಡುತ್ತಾರೆ..? ಬಿಜೆಪಿಯವರು ಕೇವಲ ರಾಜಕೀಯ ಅಧ್ಯಯನಕ್ಕೆ ಹೋಗುತ್ತಾರೆ. ಬಿಜೆಪಿಯವರು ಮೊದಲು ಕೇಂದ್ರ ಸರ್ಕಾರದ ಬಳಿ ಚರ್ಚಿಸಿ, ಅನುದಾನ ಕೊಡಿಸಲಿ. ಬರ ಅಧ್ಯಯನ ಮಾಡಬೇಡಿ ಎಂದು ನಾವೂ ಹೇಳಲು ಹೋಗಲ್ಲ. ಬಿಜೆಪಿಯಿಂದ 25 ಸಂಸದರಿದ್ದಾರಲ್ಲ, ಚರ್ಚಿಸಿ ಕೊಡಿಸಲಿ ನೋಡೋಣಾ ಎಂದಿದ್ದಾರೆ.

ಕೇಂದ್ರ ಸರ್ಕಾರದ ಬಳಿ ಬರ ಪರಿಹಾರಕ್ಕಾಗಿ 17 ಸಾವಿರ ಕೋಟಿ ಕೇಳಿದ್ದೇವೆ. 33,700 ಕೋಟಿ ನಷ್ಟವಾಗಿದೆ. ಮೊದಲು ಅದನ್ನು ಕೊಡಿಸಲಿ. ಸಂಸದರು, ಕೇಂದ್ರ ಸರ್ಕಾರದ ಬಳಿ ಚರ್ಚಿಸಿ ಕೊಡಿಸಲಿ. ನಮ್ಮ ಸಚಿವರ ಭೇಟಿಗೆ ಕೇಂದ್ರ ಸರ್ಕಾರ ಸಮಯವನ್ನೇ ಕೊಟ್ಟಿಲ್ಲ. ಕೇಳಿರುವ ಬರ ಪರಿಹಾರವನ್ನು ಸಂಸದರೆಲ್ಲಾ ಸೇರಿ, ಚರ್ಚಿಸಿ ಕೊಡಿಸಿ ಎಂದಿದ್ದಾರೆ.

ರಾಜ್ಯದ ಹಕವೆಡೆ ಭೂಮಿಗೆ ಬಿತ್ತಿದ ಬೀಜವೆಲ್ಲ ನಶಿಸಿ ಹೋಗಿದೆ. ಇನ್ನು ಎಷ್ಟೋ ಕಡೆ ಬೆಳೆದ ಪೈರು ಒಣಗಿ ಹೋಗುತ್ತೆ. ಸದ್ಯ ಎರಡು ದಿನದಿಂದ ರಾಜ್ಯದಲ್ಲಿ ಮಳೆ ಉತ್ತಮವಾಗಿ ಬರುತ್ತಿದೆ. ಬೇಸೆಇಗೆ ಕಾಲಕ್ಕೆ ಜಾನುವಾರುಗಳಿಗೆ ಏನು ಮಾಡೋದು ಎಂಬ ರೈತರ ಚಿಂತೆ ಈ ಮಳೆಯಿಂದ ನೀಗ ಬಹುದು. ಆದರೆ ಬರಗಾಲದ ಚಿಂತೆ ಕಡಿಮೆಯಾಗಲು ಸಾಧ್ಯವಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...