Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಿಢೀರನೇ ಡಿಕೆಶಿ ದೆಹಲಿಗೆ ಹೋಗ್ತಿರೋದ್ಯಾಕೆ..?

ಡಿಕೆ ಶಿವಕುಮಾರ್
---Advertisement---

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಮೊದಲೇ ಏನೇನೋ ಆಗ್ತಿದೆ. ಅದರಲ್ಲೂ ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ನಾನೇ ಸಿಎಂ ಅಂತಿದ್ರೆ ಮನಸೊಳಗೆ ಆಸೆ ಇಟ್ಕೊಂಡಿರೋ ಡಿಕೆ ಶಿವಕುಮಾರ್ ತಮಗೆ ತಾವೇ ಸಮಾಧಾನ ಮಾಡಿಕೊಳ್ತಾ ಇದಾರೆ. ಇದರ ನಡುವೆ ದಿಢೀರನೇ ದೆಹಲಿಗೆ ಭೇಟಿ ನೀಡಿದ್ದಾರೆ. ಆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಡಿಸಿಎಂ ಡಿಕೆ ಶಿವಕುಮಾರ್, ನನ್ನದೇನೋ ಖಾಸಗಿ ಕೆಲಸವಿದೆ. ಅದಕ್ಕೋಸ್ಕರ ಹೋಗ್ತಾ ಇದ್ದೀನಿ ಎಂದಿದ್ದಾರೆ.

ದೆಹಲಿಗೆ ಇವತ್ತು ಹೋಗಿ, ನಾಳೆ ನನ್ನ ಕೆಲಸ ಮುಗಿಸಿಕೊಂಡು ವಾಪಸ್ ಬರ್ತೀನಿ ಎಂದಿದ್ದಾರೆ. ಇದೇ ವೇಳೆ ಸಮೀಕ್ಷೆಯ ವೇಳೆ ಸೋಮಣ್ಣ ಅವರು ಕೂಡ ಆಕ್ಷೇಪ ವ್ಯಕ್ಯಪಡಿಸಿದ್ದರ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ, ಯಾರೂ ಬೇಕಾದರೂ ಆಕ್ಷೇಪ ಪಡಲಿ. ಜಾತಿ ಗಣತಿ ಮಾಡಬೇಕು. ಕೋರ್ಟ್ ಹೇಳಿದೆ, ಅದರಲ್ಲಿ ಯಾವುದಕ್ಕೆ ಉತ್ತರ ಕೊಡಬೇಕೋ ಅದಕ್ಕೆ ಕೊಡಿ. ಬೇಡದೆ ಇರುವುದಕ್ಕೆ ತಲೆ ಕೆಡಿಸಿಕೊಳ್ಳಬೇಡಿ ಅಂತ. ನಾನು ಕೂಡ ಅಧಿಕಾರಿಗಳಿಗೆ ಹೇಳಿ ಕಳುಹಿಸಿದ್ದೇನೆ. ಬೆಂಗಳೂರಿನ ಜನಕ್ಕರ ಕೋಳಿ, ಕುರಿ, ಚಿನ್ನ ಎಲ್ಲಾ ಕೇಳಬೇಡಿ. ಅದು ಅವರ ಪರ್ಸನಲ್ ವಿಚಾರ ಅಂತ.

ಸಮೀಕ್ಷರಯನ್ನ ಯಾರೂ ವಿರೋಧಿಸುವ ಅಗತ್ಯವಿಲ್ಲ. ಮೊದಲ ಸಮೀಕ್ಷೆಯನ್ನ ಸರಿ ಇಲ್ಲ ಅಂತ ಹೇಳಿದ್ದು ಅವರೇ. ಅದಕ್ಕೆ ಹೊಸದಾಗಿ ಸಮೀಕ್ಷೆ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದೀವಿ. ಎಲ್ಲರೂ ಕೂಡ ಸಮೀಕ್ಷೆಯಲ್ಲಿ ಭಾಗವಹಿಸಿ ಅಂತ ಮನವಿ ಮಾಡ್ತೇನೆ ಎಂದಿದ್ದಾರೆ. ಇದೇ ವೇಳೆ ಸಿಎಂ ಸ್ಥಾನದ ವಿಚಾರದ ಪ್ರಶ್ನೆಗೆ ಮೌನವಾಗಿ ಹೋಗಿದ್ದಾರೆ. ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಅಂತ ಇದ್ದಾರಲ್ಲ ಸರ್ ಎಂದಾಗ ಮೌನವಾಗಿ ಮುಂದೆ ಹೋಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now