Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಶೋಷಿತ ಸಮುದಾಯಕ್ಕೆ ಸೇರಿದ ಮಾದಿಗ ಜನಾಂಗದವರಿಗೆ ಏಕೆ ಹೀಗೆ : ಕವಾಡಿಗರಹಟ್ಟಿಗೆ ಭೇಟಿ ನೀಡಿ ಚಿತ್ರನಟ ಚೇತನ್ ಅಹಿಂಸ ಹೇಳಿಕೆ…!

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಆ.06) : ಕಲುಷಿತ ನೀರು ಸೇವಿಸಿ ಮೃತಪಟ್ಟ ಐದು ಕುಟುಂಬಗಳಿಗೆ ಸರ್ಕಾರ ಪರಿಹಾರ ನೀಡಿ ಪ್ರಕರಣವನ್ನು ಮುಚ್ಚಿ ಹಾಕಿದರೆ ದೊಡ್ಡ ಹೋರಾಟ ನಡೆಸಲಾಗುವುದೆಂದು ಸಾಮಾಜಿಕ ಹೋರಾಟಗಾರ ಚಿತ್ರನಟ ಚೇತನ್ ಅಹಿಂಸ ಎಚ್ಚರಿಸಿದರು.

ಕವಾಡಿಗರಹಟ್ಟಿಗೆ ಭಾನುವಾರ ಭೇಟಿ ನೀಡಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಚೇತನ್ ಅಹಿಂಸ ಇದೊಂದು ನೋವು, ದುಃಖದ ಸಂಗತಿ. ಇನ್ನೂರಕ್ಕೂ ಹೆಚ್ಚು ಮಂದಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಇದಕ್ಕೆ ಜಿಲ್ಲಾಡಳಿತ, ನಗರಸಭೆ ವೈಫಲ್ಯವಿದೆ.

ಶೋಷಿತ ಸಮುದಾಯಕ್ಕೆ ಸೇರಿದ ಮಾದಿಗ ಜನಾಂಗದವರಿಗೆ ಏಕೆ ಈ ರೀತಿ ಆಗಿದೆ ಎನ್ನುವುದು ನಾನಾ ರೀತಿಯ ಅನುಮಾನಗಳಿಗೆ ಕಾರಣವಾಗಿದೆ. ದಲಿತರು ಬಡವರೆಂದು ಸರ್ಕಾರ ನಿರ್ಲಕ್ಷಿಸಬಾರದು. ಚುನಾವಣೆಯಲ್ಲಿ ದಲಿತರನ್ನು ಕೇವಲ ಮತ ಬ್ಯಾಂಕ್ ಆಗಿ ಮಾಡಿಕೊಳ್ಳುವುದು ಆಳುವ ಪಕ್ಷಗಳಿಗೆ ಶೋಭೆಯಲ್ಲಿ. ದಲಿತರ ಹಣ ಹನ್ನೆರಡು ಸಾವಿರ ಕೋಟಿ ರೂ.ಗಳನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐದು ಉಚಿತ ಗ್ಯಾರೆಂಟಿಗಳಿಗೆ ಬಳಸಿಕೊಂಡಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಪ್ರತಿಯೊಬ್ಬರಿಗೂ ಶುದ್ದ ಕುಡಿಯುವ ನೀರು ಪೂರೈಕೆಯಾಗಬೇಕು. ಕವಾಡಿಗರಹಟ್ಟಿ ಎ.ಕೆ.ಕಾಲೋನಿಯಲ್ಲಿರುವ ದಲಿತರಿಗೆ ಮಾತ್ರ ಕಾಲರ ರೋಗ ತಗುಲಿದೆಯಾ? ಹಾಗಿದ್ದ ಮೇಲೆ ಮುನ್ನೆಚ್ಚರಿಕೆ ಕೈಗೊಂಡು ನೀರಿನ ಟ್ಯಾಂಕ್‍ಗಳನ್ನು ಏಕೆ ಶುಚಿಗೊಳಿಸಲಿಲ್ಲ. ಈ ಗ್ರಾಮದಲ್ಲಿ ಅಂತರ್‍ಜಾತಿ ವಿವಾಹವಾಗಿರುವುದು ಪ್ರಕರಣಕ್ಕೆ ತಳಕು ಹಾಕಿಕೊಂಡಿದೆಯೇ ಎನ್ನುವುದನ್ನು ಸಂಪೂರ್ಣವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು. ಒಬ್ಬರ ಮೇಲೆ ತಪ್ಪು ಹಾಕುವುದಲ್ಲ. ರಾಜ್ಯ ಸರ್ಕಾರ ಘೋಷಿಸಿರುವ ಐದು ಗ್ಯಾರೆಂಟಿಗಳಿಗೆ ಜನರ ದುಡ್ಡು ಬೇಕ ಎಂದು ಚೇತನ್ ಅಹಿಂಸ ಖಾರವಾಗಿ ಪ್ರಶ್ನಿಸಿದರು.

ಜಿಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಚೇತನ್ ಅಹಿಂಸ ವೀಕ್ಷಿಸಿ ವೈದ್ಯರಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಜಯಣ್ಣ ಕೆಂಗುಂಟೆ, ನವೀನ್ ಮದ್ದೇರು, ಚಂದ್ರಮೂರ್ತಿ, ಮಂಜಣ್ಣ, ಕಸ್ತೂರಪ್ಪ, ಕರಿಯಪ್ಪ, ಶ್ರೀನಿವಾಸ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment