Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿನ್ನ-ಬೆಳ್ಳಿ ದರ ಅತಿ ವೇಗದಲ್ಲಿ ಏರಿಕೆಯಾಗುತ್ತಿರುವುದೇಕೆ..?

---Advertisement---

ಸುದ್ದಿಒನ್, ಬೆಂಗಳೂರು : ಚಿನ್ನ ಎಂದರೆ ಸಾಕು ಮಧ್ಯಮ ವರ್ಗ, ಬಡವರು ಬೆಚ್ಚಿ ಬೀಳುವಂತೆ ಆಗುತ್ತಿದೆ. ದಿನೇ ದಿನೇ ಏರಿಕೆಯಾಗುತ್ತಿರುವ ಚಿನ್ನ ಈಗ 7 ಸಾವಿರಕ್ಕೂ ಅಧಿಕವಾಗಿದೆ. ಚಿನ್ನ ತೆಗೆದುಕೊಂಡರೆ ಕಷ್ಟಕಾಲಕ್ಕೆ ಆಗುತ್ತದೆ ಎಂಬ ಮಾತು ಕೂಡ ಇದೆ. ಆದರೆ ಈಗ ಚಿನ್ನ ಕೊಳ್ಳುವುದೇ ಕಷ್ಟವಾಗಿದೆ. ಹಾಗಾದ್ರೆ ಇದ್ದಕ್ಕಿದ್ದ ಹಾಗೇ ಇಷ್ಟೊಂದು ಏರಿಕೆ ಕಾಣುವುದಕ್ಕೆ ಕಾರಣವಾದರೂ ಏನು ಗೊತ್ತಾ..?

22 ಕ್ಯಾರೆಟ್ ಚಿನ್ನದ ಬೆಲೆ ಈಗ 7 ಸಾವಿರ ಗಡಿ ದಾಟಿದೆ. ಹಾಗೇ 24 ಕ್ಯಾರೆಟ್ ಚಿನ್ನದ ದರ 7,700 ರೂಪಾಯಿ ಆಗಿದೆ. ಅತ್ಯಮೂಲ್ಯ ಸಂಪತ್ತಾದ್ದರಿಂದ ಎಲ್ಲರೂ ಶೇಖರಿಸಿಟ್ಟುಕೊಳ್ಳುವ ಪ್ರಯತ್ನ ಮಾಡ್ತಾರೆ‌. ಹೀಗಾಗಿ ಡಿಮ್ಯಾಂಡ್ ಜಾಸ್ತಿ ಇರುವ ಕಾರಣ, ಬೆಲೆಯೂ ಜಾಸ್ತಿಯೇ ಸರಿ. ಇಸ್ರೇಲ್ ಮತ್ತು ಹಿಜ್ಬೊಲ್ಲಾ ಮಧ್ಯೆ ಪೂರ್ಣಪ್ರಮಾಣದಲ್ಲಿ ಯುದ್ಧ ಶುರುವಾದರೆ ಪಶ್ಚಿಮ ಏಷ್ಯಾ ಮತ್ತು ಮಧ್ಯಪ್ರಾಚ್ಯ ಭಾಗದಲ್ಲಿ ಸೂಕ್ಷ್ಮ ವಾತಾವರಣ ನೆಲಸುತ್ತದೆ. ಈ ಜಾಗತಿಕ ರಾಜಕೀಯ ಬಿಕ್ಕಟ್ಟಿನ ಸ್ಥಿತಿಯಲ್ಲಿ ಆರ್ಥಿಕತೆ ಮಂದಗೊಳ್ಳುತ್ತದೆ. ಇದು ಹೂಡಿಕೆದಾರರನ್ನು ಚಿನ್ನದತ್ತ ಆಕರ್ಷಿಸುತ್ತಿರಬಹುದು. ಇದರಿಂದ ಚಿನ್ನದ ಬೆಲೆ ಹೆಚ್ಚುತ್ತಿರಬಹುದನ್ನು ಕೆಲವರು ಹೇಳುತ್ತಾರೆ‌.

ಇನ್ನು ಅಮೆರಿಕಾದ ಫೆಡರಲ್ ರಿಸರ್ವ್ ಸಂಸ್ಥೆ ಬಡ್ಡಿದರ ಕಡಿಮೆಗೊಳಿಸಿದೆ. ಚೀನಾದ ಸೆಂಟ್ರಲ್ ಬ್ಯಾಂಕ್ ಕೂಡ ಬಡ್ಡಿದರವನ್ನು ಕಡಿಮೆ ಮಾಡಿದೆ. ಈ ರೀತಿ ಕೆಲವು ಸೆಂಟ್ರಲ್ ಬ್ಯಾಂಕ್ ಗಳು ಬಡ್ಡಿದರವನ್ನು ಕಡಿಮೆ ಮಾಡಿದೆ. ಜನರ ಬಳಿ ಹೆಚ್ಚು ಹಣ ಸಿಗುತ್ತಿರುವ ಕಾರಣ ಚಿನ್ನ ಬೆಳ್ಳಿಯತ್ತ ಹೂಡಿಕೆ ಮಾಡುತ್ತಿದ್ದಾರೆ. ಹೀಗಾಗಿ ಚಿನ್ನದ ಬೆಲೆ ಏರುತ್ತಿದೆ ಎಂದು ಹಲವರು ಅಭಿಪ್ರಾಯ ಪಡುತ್ತಿದ್ದಾರೆ. ಆದರೆ ಇದು ಬಡವರ ಚಿನ್ನದ ಕನಸಿಗೆ ಕನ್ನ ಹಾಕುತ್ತಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...