ಪರಿಹಾರ ಕೊಟ್ಟ ಮೇಲೆ ಭೇಟಿ ಯಾಕೆ ಮಾಡಬೇಕು : ಸಚಿವ ಎಸ್ ಟಿ ಸೋಮಶೇಖರ್

1 Min Read

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಕೊಡಗಿಗೆ ನೆರೆ ಹಾನಿ ಪ್ರದೇಶ ವೀಕ್ಷಿಸಲು ಭೇಟಿ ನೀಡಿದ್ದಾರೆ. ಇದೆ ವೇಳೆ ಅಲ್ಲಿನ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಿದೆ. ನೆರೆಹಾನಿ ಪ್ರದೇಶಕ್ಕೆ ಭೇಟಿ ನೀಡಿದರ ಬಗ್ಗೆ ಮಾತನಾಡಿರುವ ಸಚಿವ ಸೋಮಶೇಖರ್, ಸಿದ್ದರಾಮಯ್ಯ ಅವರು ಈಗ ಪುರುಸೊತ್ತಾಗಿದ್ದಾರೆ ಎಂದಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಕಳೆದ 15 ದಿನದಿಂದ ನೆರೆಹಾನಿ ವೀಕ್ಷಣೆಗೆ ಹೋಗಿರಲಿಲ್ಲ. ಸರ್ಕಾರಿ ಕಾರು ಸೇರಿದಂತೆ ಎಲ್ಲಾ ರೀತಿಯ ಸವಲತ್ತು ಇರುತ್ತದೆ. ನೆರೆ ವೀಕ್ಷಣೆಗೆ ಮೊದಲೇ ಹೋಗಿ‌ಗಮನ ಸೆಳೆಯಬೇಕಿತ್ತು. ರಾಜ್ಯ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಬೇಕಿತ್ತು. ಆದರೆ ಪರಿಹಾರವನ್ಬೆಲ್ಲಾ ಕೊಟ್ಟ ಮೇಲೆ ಯಾಕೆ ಹೋಗುತ್ತಿದ್ದಾರೆ ಗೊತ್ತಿಲ್ಲ ಎಂದಿದ್ದಾರೆ.

ಇದೆ ವೇಳೆ ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಯಾಕೆ ಹಾಕಬೇಕಿತ್ತು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದು, ಇತ್ತೀಚೆಗೆ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆಯನ್ನೇ ನೀಡುತ್ತಿದ್ದಾರೆ. ಮುಂದೆ ವಿವಾದಾತ್ಮಕ ಹೇಳಿಕೆ ನೀಡದಿರಲಿ ಎಂದು ತಾಯಿಯಲ್ಲಿ ಪ್ರಾರ್ಥಿಸುತ್ತೇನೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರ ಮಾತಿನಲ್ಲಿ ತೂಕವಿತ್ತು. ಇತ್ತೀಚೆಗೆ ಏನು ಮಾತನಾಡುತ್ತಾರೆಂದು ಅವರಿಗೆ ಅರ್ಥವಾಗುತ್ತಿಲ್ಲ. ಸಿದ್ದರಾಮಯ್ಯ ಬರೀ ವಿವಾದಾತ್ಮಕ ಹೇಳಿಕೆಯನ್ನೇ ನೀಡುತ್ತಿದ್ದಾರೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *