Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯುಗಾದಿ ಬಳಿಕ ಸಿಎಂ ಆಗ್ತಾರಾ ಡಿಕೆಶಿ : ಆಪ್ತರ ಬಳಗದಲ್ಲಿ ಓಡಾಡ್ತಿರೋದೇನು..?

---Advertisement---

ರಾಮನಗರ: ಬಜೆಟ್ ಮಂಡನೆಯಾದಾಗ ವಿರೋಧ ಪಕ್ಷದ ನಾಯಕರುಗಳು ಬಜೆಟ್ ಬಗ್ಗೆ ಅಸಮಾಧಾನ ಹೊರ ಹಾಕೋದು ಸರ್ವೇ ಸಾಮಾನ್ಯ. ಆದರೆ ತಮ್ಮದೇ ಸರ್ಕಾರದ ಬಜೆಟ್ ಗೆ ತಮ್ಮದೇ ಶಾಸಕರು ಅಸಮಾಧಾನ ಹೊರ‌ ಹಾಕಿದ್ದಾರೆ. ಡಿಕೆ ಶಿವಕುಮಾರ್ ಅವರ ಆಪ್ತ ಶಾಸಕ ಇಕ್ಬಾಲ್ ಹುಸೇನ್ ಈ ಬಗ್ಗೆ ಮಾತನ್ನಾಡಿದ್ದಾರೆ.

ಬಜೆಟ್ ನನಗೆ ಸಮಾಧಾನ ತಂದಿಲ್ಲ. ನನ್ನ ಕ್ಷೇತ್ರಗಳ ಸಮಸ್ಯೆಗಳ ಬಗ್ಗೆ ಸಿಎಂಗೆ ಮನವಿ ಮಾಡಿದ್ದೆ. ಭಕ್ಷಿಕರೆ ಹೊಡೆದು ಪ್ರವಾಹದಿಂದ ಉಂಟಾದ ಸಮಸ್ಯೆ ಬಗ್ಗೆ ಫೋಟೋ ತೋರಿಸಿ, ಮಾಹಿತಿ ಕೊಟ್ಟಿದ್ದೆ. ಈ ಹಿಂದೆ ಇದ್ದವರು ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ರಸ್ತೆ, ಚರಂಡಿ ಹಾಗೂ ನೀರಾವರಿ ಬಗ್ಗೆ ನಾಲ್ಕೈದು ಬಾರಿ ಮನವಿ ಮಾಡಿದ್ದೆ. ಇದಕ್ಕೆ ವಿಶೇಷ ಅನುದಾನ ನೀಡಬೇಕೆಂದು ಮನವಿ ಮಾಡಿದ್ದೆ. ಆದರೆ ಸಿಎಂ ಏನೂ ಮಾಡಲಿಲ್ಲ‌. ನನಗೆ ನೋವಾಗಿದೆ.

ಪಾರದರ್ಶಕವಾಗಿ ಅನುದಾನ ಕೊಡ್ತಾರೆ ಎನ್ನುವ ನಂಬಿಕೆ ಇತ್ತು. ಈಗ ಆ ನಂಬಿಕೆ ಹುಸಿಯಾಗಿದೆ. ಈಗ ನಾವೂ ಡಿಸಿಎಂ ಹಿಂದೆಯೇ ಹೋಗಬೇಕು. ನಮ್ಮ ಕಷ್ಟ ಸುಖವನ್ನ ಅವರ ಮೇಲೆಯೇ ಹಾಕಬೇಕು. ಈ ಹಿಂದೆ ಕೂಡ ಅವರಿಂದಾನೇ ಅಭಿವೃದ್ಧಿ ಕೆಲಸ ಮಾಡಿಸಿಕೊಂಡಿದ್ದೆ. ಇದು ಅವರ ಜಿಲ್ಲೆ. ಮುಂದೆಯೂ ಅವರ ಮೇಲೆಯೇ ಭಾರ ಹಾಕಬೇಕಾಗುತ್ತದೆ. ಕ್ಷೇತ್ರದ ಜವಬ್ದಾರಿ ಡಿಸಿಎಂ ಅವರ ಮೇಲೂ ಇದೆ ಎಂದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗ್ಬೇಕು ಅಂತ ಪದೇ ಪದೇ ಹೇಳುತ್ತಿದ್ದವರು ಇಕ್ಬಾಲ್. ಆ ಬಗ್ಗೆಯೂ ಮಾತನ್ನಾಡುತ್ತಾ, ನಮ್ಮ ಗುರುಗಳು ಜಪದಿಂದ ಇನ್ನು ಎದ್ದಿಲ್ಲ. ಬಹುಶಃ ಯುಗಾ್ಇ ಹಬ್ಬವಾದ ಮೇಲೆ ಎದ್ದೇಳಬಹುದು ಎಂಬ ಮಾತನ್ನ ಹೇಳಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now