ಶಿಕ್ಷಣ ಇಲಾಖೆಯಲ್ಲೂ ರಾಜಕೀಯ, ಸಿಎಂ ಮನೆ ಬಳಿ ಹೋಗಿ ಧರಣಿ ಕೂರ್ತೇನೆ : ಎಚ್ ಡಿ ರೇವಣ್ಣ

suddionenews
1 Min Read

ಹಾಸನ: ರಾಜ್ಯ ಸರ್ಕಾರ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಮಾಜಿ ಸಚಿವ ಎಚ್ ಡಿ ರೇವಣ್ಣ ಆಕ್ರೋಶಗೊಂಡಿದ್ದಾರೆ. ಶಿಕ್ಷಣ ಇಲಾಖೆಯಲ್ಲೂ ರಾಜಕೀಯ ಮಾಡ್ತಿದ್ದಾರೆಂದು ಕಿಡಿಕಾರಿದ್ದಾರೆ.

ಹೊಳೇನರಸೀಪುರ ಮಹಿಳಾ ಕಾಲೇಜಿಗೆ ಎಂಎಸ್ಸಿ ಪದವಿ ಮಂಜೂರು ಆಗ್ಬೇಕಿತ್ತು. ಶಿಕ್ಷಣ ಇಲಾಖೆ ಕಾರ್ದರ್ಶಿಯೂ ಒಪ್ಪಿಗೆ ನೀಡಿದ್ದಾರೆ. ಮೈಸೂರು ವಿವಿ ಅವರು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದ್ರೆ ಯಾವುದೇ ಕಾರಣವೇ ನೀಡದೆ ಕಾಲೇಜಿಗೆ ಕೋರ್ಸ್ ಮಂಜೂರು ಮಾಡಲು ಶಿಕ್ಷಣ ಸಚಿವರು ನಿರಾಕರಿಸಿದ್ದಾರೆ.

ಇದನ್ನ ಖಂಡಿಸಿ ಮಂಗಳವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರನೆ ಮುಂದೆ ಹೋಗಿ ಧರಣಿ ಕೂರ್ತೇನೆ. ಅರೆಸ್ಟ್ ಮಾಡ್ತಾರಾ ಮಾಡಲಿ, ನಾನು ಅಲ್ಲೇ ಕೂರುತ್ತೇನೆ, ನನ್ನ ಪ್ರಾಣ ಹೋದರಿ ಹೋಗಲಿ. ಕೀಳುಮಟ್ಟದ ರಾಜಕಾರಣ ಮಾಡಬೇಡಿ ಎಂದು ಸಚಿವ ಅಶ್ವಥ್ ನಾರಾಯಣ್ ಮೇಲೆ ವಾಗ್ದಾಳಿ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *