Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜ್ಯೋತಿ ಗಣೇಶ್ ಮತ್ತು ಸೊಗಡು ಶಿವಣ್ಣ ಟಿಕೆಟ್ ಪೈಪೋಟಿಯಿಂದ ಕಾಂಗ್ರೆಸ್ ಗೆ ಗೆಲುವಾಗುತ್ತಾ..?

Facebook
Twitter
Telegram
WhatsApp

ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆ ರಂಗೇರುತ್ತಿದೆ. ಚುನಾವಣೆ ಘೋಷಣೆಯಾಗುವುದಕ್ಕೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಅದಾಗಲೇ ಎಲ್ಲಾ ರೀತಿಯ ಪ್ರಚಾರಗಳು ಶುರುವಾಗಿದೆ. ಇನ್ನು ರಾಜಕೀಯದಾಟದಲ್ಲಿ ಸೋಲು ಗೆಲುವಿನ ಲೆಕ್ಕಾಚಾರವೂ ಗರಿಗೆದರಿದೆ. ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ಜೋರಾಗಿದೆ. ತುಮಕೂರು ಜಿಲ್ಲೆಯಲ್ಲಿ ಬಿಜೆಪಿ ನಾಯಕರ ಟಿಕೆಟ್ ಪೈಪೋಟಿ ಈಗ ಕಾಂಗ್ರೆಸ್ ಗೆ ವರವಾಗುವ ಸಾಧ್ಯತೆ ಇದೆ.

ತುಮಕೂರು ಜಿಲ್ಲೆ ರಾಜ್ಯದಲ್ಲಿ ಎರಡನೇ ದೊಡ್ಡ ಜಿಲ್ಲೆಯಾಗಿದೆ. ಇಲ್ಲಿ ಹನ್ನೊಂದು ವಿಧಾನಸಭಾ ಕ್ಷೇತ್ರಗಳ ಪೈಕಿ, ಬಿಜೆಪಿ ನಾಯಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ತುಮಕೂರು ಜಿಲ್ಲೆಯಲ್ಲಿ 1994ರಿಂದ ಬಿಜೆಪಿ ಅಧಿಪತ್ಯ ಶುರುವಾಗಿತ್ತು. ಸೊಗಡು ಶಿವಣ್ಣ ಶಾಸಕರಾಗಿ ಆಯ್ಕೆಯಾಗುವ ಮೂಲಕ ತುಮಕೂರಲ್ಲಿ ಬಿಜೆಪಿ ಆಡಳಿತ ಶುರು ಮಾಡಿತ್ತು. ಅದು ನಾಲ್ಕು ಬಾರಿ.

ಬಳಿಕ 2013ರಲ್ಲಿ ರಫೀಕ್ ಅಹ್ಮದ್ ಶಾಸಕರಾಗಿ ಆಯ್ಕೆಯಾಗುವ ಮೂಲಕ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಆದ್ರೆ 2019ರಲ್ಲಿ ನಗರದಲ್ಲಿ ಬಿಜೆಪಿಯ ಜ್ಯೋತಿ ಗಣೇಶ್ ಹಾಗೂ ಗ್ರಾಮಾಂತರದಲ್ಲಿ ಜೆಡಿಎಸ್ ನ ಗೌರಿಶಂಕರ್ ಅಧಿಕಾರವಿದೆ. ಈಗ ಬಿಜೆಪಿಯಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ಸೊಗಡು ಶಿವಣ್ಣ ಮತ್ತು ಜ್ಯೋತಿ ಗಣೇಶ್ ನಡುವೆ ಟಿಕೆಟ್ ಫೈಟ್ ಶುರುವಾಗಿದೆ.

2013ರಲ್ಲಿಯೂ ಇಂಥದ್ದೊಂದು ಸ್ಪರ್ಧೆ ಏರ್ಪಟ್ಟಿತ್ತು. ಕೆಜಿಪಿಯಿಂದ ಜಿ ಬಿ ಜ್ಯೋತಿ ಗಣೇಶ್ ಹಾಗೂ ಬಿಜೆಪಿಯಿಂದ ಸೊಗಡು ಶಿವಣ್ಣ ಸ್ಪರ್ಧೆ ಮಾಡಿದ್ದರು. ಆಗ ವೀರಶೈವ ಮತಗಳು ವಿಭಜನೆಗೊಂಡು ಇಬ್ಬರ ಸೋಲಿಗೆ ಕಾರಣವಾಗಿತ್ತು. ಇದೀಗ ಇಬ್ಬರು ಟಿಕೆಟ್ ಆಕಾಂಕ್ಷಿಗಳಾಗಿರುವ ಕಾರಣ ಕಾಂಗ್ರೆಸ್ ಗೆ ಪ್ಲಸ್ ಪಾಯಿಂಟ್ ಆಗುವ ಸಾಧ್ಯತೆಯೇ ಹೆಚ್ಚಾಗಿದೆ. ಈ ಬಾರಿಯೂ ನಗರದಲ್ಲಿ ರಫಿಕ್ ಅಹ್ಮದ್ ಅವರಿಗೆ ಟಿಕೆಟ್ ನೀಡಬೇಕೆಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿವೆ ಎನ್ನುತ್ತಿದೆ ಮೂಲಗಳು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

error: Content is protected !!