Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೋನ್ ಪೇ ರಾಯಭಾರಿಯಿಂದ ಕಿಚ್ಚ ಸುದೀಪ್ ಕೂಡ ಹೊರ ನಡೆಯುತ್ತಾರಾ..?

---Advertisement---

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರದಲ್ಲಿ ಫೋನ್ ಪೇ ಸಿಇಓ ಸಮೀರ್ ಅಪಹಾಸ್ಯ ಮಾಡಿದ್ದರು. ರಾಜ್ಯ ಸರ್ಕಾರದ ಅನುಮೋದನೆಯನ್ನು ವ್ಯಂಗ್ಯ ಮಾಡಿದ್ದರು. ರಾಜ್ಯ ಸರ್ಕಾರ ಕೂಡ ಉದ್ಯಮಿಗಳ ವಿರೋಧದ ನಡುವೆ ಸಂಜೆ ವೇಳೆಗೆ ಆದೇಶವನ್ನು ತಡೆಹಿಡಿದಿತ್ತು. ಈ ಬೆಳವಣಿಗೆಯ ಬೆನ್ನಲ್ಲೆ ಸ್ವಾಭಿಮಾನಿ ಕನ್ನಡಿಗರು ಆಕ್ರೋಶಗೊಂಡಿದ್ದಾರೆ. ಒಬ್ಬೊಬ್ಬರಾಗಿಯೇ ಫೋನ್ ಅಪ್ಲಿಕೇಷನ್ ಅನ್ನೇ ಡಿಲೀಟ್ ಮಾಡುತ್ತಿದ್ದಾರೆ.

ಕಿಚ್ಚ ಸುದೀಪ್ ಫೋನ್ ಪೇ ರಾಯಬಾರಿಯಾಗಿದ್ದಾರೆ. ಕನ್ನಡಿಗರು ಫೋನ್ ಪೇ ವಿರೋಧ ಮಾಡಿರುವ ಬೆನ್ನಲ್ಲೇ ನಟ ಕಿಚ್ಚ ಸುದೀಪ್ ಅವರು ರಾಯಭಾರತ್ವದಿಂದ ಹೊರ ಬರುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆಪ್ತ ಮೂಲಗಳ ಪ್ರಕಾರ ಕಿಚ್ಚ ಸುದೀಪ್ ಅವರು ಹಿರ ಬರುತ್ತಾರೆ ಎಂದೇ ಹೇಳಲಾಗುತ್ತಿದೆ.

ಫೋನ್ ಪೇ ಸಿಇಓ ಕನ್ನಡಿಗರ ಕ್ಷಮೆ ಕೇಳಿ, ರಾಜ್ಯ ಸರ್ಕಾರದ ನಿಲುವುಗೆ ಬದ್ಧವಾಗಿರದೆ ಇದ್ದರೆ ಫೋನ್ ಪೇ ರಾಯಭಾರತ್ವದಿಂದ ಹೊರಬರುವುದಾಗಿ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಕಿಚ್ಚ ಸುದೀಪ್ ಅವರು ಈ ಸಂಬಂಧ‌ ನಿರ್ಧಾರ ಪ್ರಕಟಿಸಿಲಿದ್ದಾರೆ ಎನ್ನಲಾಗಿದೆ.

ಫೋನ್ ಪೇ ಸಿಇಓ ಸಮೀರ್ ನಡೆಗೆ ಕನ್ನಡಿಗರು ಆಕ್ರೋಶ ಹೊರ ಹಾಕಿದ್ದಾರೆ. ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಶೇಕಡ 75ರಷ್ಟು ಮೀಸಲಾತಿಯನ್ನು ನೀಡಬೇಕೆಂದು ರಾಜ್ಯ ಸರ್ಕಾರ ಕೂಡ ಒಪ್ಪಿಗೆ ನೀಡಿತ್ತು. ಆದರೆ ಕೆಲ ಉದ್ಯಮಿಗಳಿಂದ ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆ ರಾಜ್ಯ ಸರ್ಕಾರ ಕೂಡ ಆದೇಶವನ್ನು ತಡೆ ಹಿಡಿದಿತ್ತು. ಇದರಿಂದ ಕನ್ನಡಿಗರೆಲ್ಲಾ ಫೋನ್ ಪೇ ಅಪ್ಲಿಕೇಷನ್ ಅನ್ನೇ ಡಿಲೀಟ್ ಮಾಡುವ ಮೂಲಕ ಸಮೀರ್ ಅವರಿಗೆ ಬುದ್ದಿ ಕಲಿಸಲು ಹೊರಟಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...