Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜೂನ್ ನಲ್ಲಿಯೇ ಭರ್ತಿಯಾಗಲಿದೆಯಾ KRS : ಹೀಗಾದ್ರೆ ಇತಿಹಾಸದಲ್ಲಿಯೇ ಮೊದಲು..!

---Advertisement---

ಮಂಡ್ಯ ; ಈ ಬಾರಿ ಮುಂಗಾರು ಮಳೆ ಅದ್ಭುತವಾಗಿ ಆರಂಭವಾಗಿದೆ. ಈಗಾಗಲೇ ರಾಜ್ಯದ ಕೆಲವು ಜಲಾಶಯಗಳಲ್ಲಿ ಒಳ ಹರಿವು ಹೆಚ್ಚಳವಾಗಿದೆ. ಈ ವರ್ಷ ಉತ್ತಮ ಮಳೆಯಾಗಲಿದೆ ಎಂಬುದನ್ನು ತಜ್ಞರು ಕೂಡ ತಿಳಿಸಿದ್ದಾರೆ. ಈ ಬೆನ್ನಲ್ಲೇ ಕೆಆರ್ಎಸ್ ಜಲಾಶಯ ಬಲುಬೇಗನೆ ತುಂಬಲಿದೆ ಎನ್ನಲಾಗುತ್ತಿದೆ. ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯದ ಒಳ ಹರಿವು ಹೆಚ್ಚಳವಾಗಿರುವುದು ರೈತರಿಗೆ ಸಂತಸ ತಂದುಕೊಟ್ಟಿದೆ.

ಕೆಆರ್ಎಸ್ ಅಣೆಕಟ್ಟೆಯ ನೀರಿನ ಮಟ್ಟ ಏರಿಜೆಯಾಗಿದೆ. ಜಲಾಯಶ ಭರ್ತಿಗೆ ಇನ್ನು ಕೇವಲ ನಾಲ್ಕೇ 4 ಅಡಿ ನೀರು ಮಾತ್ರ ಬಾಕಿ ಇದೆ. 13 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಜಲಾಶಯದತ್ತ ಹರಿದು ಬರುತ್ತಿರುವುದು ಒಳ್ಳೆಯ ವಿಷಯವಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಜೋರಾದ ಹಿನ್ನೆಲೆ ಕೆಆರ್ಎಸ್ ನಲ್ಲಿ ನೀರು ಜಾಸ್ತಿಯಾಗಿದೆ. ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, 124 ಅಡಿ ಒರುವ ಕೆಆರ್ಎಸ್ ಜಲಾಶಯ ಈಗಾಗಲೇ 120 ಅಡಿಯಷ್ಟು ಭರ್ತಿಯಾಗಿದೆ.

ಭರ್ತಿಯಾಗುವುದಕ್ಕೆ ಇನ್ನು ನಾಲ್ಕು ಅಡಿ ಮಾತ್ರ ಬಾಕಿ ಇದೆ. ಈ ವಾರದಲ್ಲಿಯೇ ಅದು ಕೂಡ ಭರ್ತಿಯಾಗುವ ಸಾಧ್ಯತೆ ಇದೆ. ಒಂದು ವೇಳೆ ಜೂನ್ ವೇಳೆಗೆ ನೀರೇನಾದ್ರೂ ತುಂಬಿದರೆ ಒಂದು ಇತಿಹಾಸವನ್ನೇ ಸೃಷ್ಟಿ ಮಾಡುತ್ತದೆ. ಇದೇ ಮೊದಲ ಬಾರಿಗೆ ಕೆಆರ್ಎಸ್ ಜಲಾಶಯ ಜೂನ್ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾದಂತೆ ಆಗುತ್ತದೆ. ಜೂನ್ ನಲ್ಲಿ ಭರ್ತಿಯಾದರೆ ಹೊಸ ದಾಖಲೆ ಕೆಆರ್ಎಸ್ ಬರೆಯಲಿದೆ. 124.80 ಅಡಿಯ ಕೆಆರ್ಎಸ್ ಡ್ಯಾಂ ಈಗ 120.20 ಅಡಿಯಷ್ಟು ನೀರು ತುಂಬಿದೆ. ಇದು ಆ ಭಾಗದ ರೈತರಿಗೆ ಖುಷಿ ತಂದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...