Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಂಡ್ಯ ಗೆಲುವಿಗಾಗಿ ಕುಮಾರಸ್ವಾಮಿ ಅವರೇ ಅಖಾಡಕ್ಕಿಳಿಯುತ್ತಾರಾ..?

---Advertisement---

 

ಮಂಡ್ಯ: ಜೆಡಿಎಸ್ ಭದ್ರಕೋಟೆ ಎಂದೇ ಗಟ್ಟಿಯಾಗಿದ್ದ ಕೋಟೆಯನ್ನ ಭೇದಿಸಿದ್ದು ನಟಿ ಸುಮಲತಾ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ನಿಂತು ಮಂಡ್ಯ ಜನರ ಮನಸ್ಸನ್ನು ಗೆದ್ದಿದ್ದರು. ಜೆಡಿಎಸ್ ಭದ್ರಕೋಟೆಯಲ್ಲಿ ಸುಮಲತಾ ಗೆದ್ದು ಬೀಗಿದ್ದರು. ಅಂಬರೀಶ್ ಅಭಿಮಾನ ಮೆರೆದಿತ್ತು. ಸ್ವತಂತ್ರವಾಗಿ ಗೆದ್ದ ಸುಮಲತಾ ಬಳಿಕ ಬಿಜೆಪಿ ಸೇರಿದ್ದರು. ಇದೀಗ ಆ ಕ್ಷೇತ್ರವೂ ಕೈ ತಪ್ಪುವ ಸಾಧ್ಯತೆ ಇದೆ.

ಮಗನ ರಾಜಕೀಯ ಭವಿಷ್ಯಕ್ಕೋಸ್ಕರ ಮಂಡ್ಯ ಜಿಲ್ಲೆಯಲ್ಲಿ ನಿಲ್ಲಿಸಿದರು. ನಿಖಿಲ್ ಕುಮಾರಸ್ವಾಮಿಗಾಗಿ ಹಲವು ತಂತ್ರಗಳನ್ನು ಮಾಡಿದ್ದರು. ಆದರೆ ಈ ಅವೆಲ್ಲವುಗಳ ನಡುವೆಯೂ ಸುಮಲತಾ ಗೆದ್ದು ಬೀಗಿದ್ದರು. ಈ ಸೇಡು ತೀರಿಸಿಕೊಂಡು, ಮತ್ತೆ ಮಂಡ್ಯವನ್ನು ತಮ್ಮ ವಶ ಮಾಡಿಕೊಳ್ಳಲು ಹೊರಟಿದ್ದಾರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯೇ ಸ್ಪರ್ಧೆ ಮಾಡುವುದು ಕೆಲ ಬೆಳವಣಿಗೆಯಿಂದಾನೇ ಪಕ್ಕಾ ಆಗಿದೆ.

ಈ ಬಾರಿಯೂ ನಿಖಿಲ್ ಅವರನ್ನೇ ನಿಲ್ಲಿಸಿ ಎಂದು ಕೆಲ ಕಾರ್ಯಕರ್ತರು ಅಭಿಪ್ರಾಯ ತಿಳಿಸಿದ್ದಾರೆ. ರಾಜಕೀಯ ಅಂತ ಪ್ರವೇಶ ಮಾಡಿ, ಸ್ಪರ್ಧೆ ಎಂದು ನಿಂತ ಎರಡು ಚುನಾವಣೆಯಲ್ಲೂ ನಿಖಿಲ್ ಸೋಲು ಕಂಡಿದ್ದಾರೆ. ಮೂರನೇ ಬಾರಿಯೂ ಸೋತರೆ ರಾಜಕೀಯ ಭವಿಷ್ಯಕ್ಕೆ ತೊಂದರೆಯಾಗಲಿದೆ ಎಂಬ ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ ಇನ್ನು ಐದು ವರ್ಷ ರಾಜಕೀಯಕ್ಕೆ ಬರಲ್ಲ, ಸಿನಿಮ ಮಾಡುತ್ತೀನಿ ಅಂತ ನಿಖಿಲ್ ನಿಶ್ಚಯ ಮಾಡಿದ್ದಾರೆ. ಹೀಗಾಗಿ ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರೇ ಸ್ಪರ್ಧೆ ಮಾಡುವ ಲಕ್ಷಣಗಳು ಕಾಣಿಸುತ್ತಿವೆ. ಅದರ ಭಾಗವಾಗಿಯೇ ಮಂಡ್ಯ, ಮದ್ದೂರು, ಕೆ ಆರ್ ಪೇಟೆ ಸೇರಿದಂತೆ ಲೋಕಸಭಾ ಕ್ಷೇತ್ರಗಳಲ್ಲಿ ಸಂಚಾರ ನಡೆಸುತ್ತಿದ್ದಾರೆ. ಮದುವೆ, ಸಭೆ, ಸಮಾರಂಭಗಳಲ್ಲಿ ಭಾಗಿಯಾಗಿ, ಜನರಿಗೆ ಹತ್ತಿರವಾಗುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment