Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಡ್ಯ ಗೆಲುವಿಗಾಗಿ ಕುಮಾರಸ್ವಾಮಿ ಅವರೇ ಅಖಾಡಕ್ಕಿಳಿಯುತ್ತಾರಾ..?

Facebook
Twitter
Telegram
WhatsApp

 

ಮಂಡ್ಯ: ಜೆಡಿಎಸ್ ಭದ್ರಕೋಟೆ ಎಂದೇ ಗಟ್ಟಿಯಾಗಿದ್ದ ಕೋಟೆಯನ್ನ ಭೇದಿಸಿದ್ದು ನಟಿ ಸುಮಲತಾ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ನಿಂತು ಮಂಡ್ಯ ಜನರ ಮನಸ್ಸನ್ನು ಗೆದ್ದಿದ್ದರು. ಜೆಡಿಎಸ್ ಭದ್ರಕೋಟೆಯಲ್ಲಿ ಸುಮಲತಾ ಗೆದ್ದು ಬೀಗಿದ್ದರು. ಅಂಬರೀಶ್ ಅಭಿಮಾನ ಮೆರೆದಿತ್ತು. ಸ್ವತಂತ್ರವಾಗಿ ಗೆದ್ದ ಸುಮಲತಾ ಬಳಿಕ ಬಿಜೆಪಿ ಸೇರಿದ್ದರು. ಇದೀಗ ಆ ಕ್ಷೇತ್ರವೂ ಕೈ ತಪ್ಪುವ ಸಾಧ್ಯತೆ ಇದೆ.

ಮಗನ ರಾಜಕೀಯ ಭವಿಷ್ಯಕ್ಕೋಸ್ಕರ ಮಂಡ್ಯ ಜಿಲ್ಲೆಯಲ್ಲಿ ನಿಲ್ಲಿಸಿದರು. ನಿಖಿಲ್ ಕುಮಾರಸ್ವಾಮಿಗಾಗಿ ಹಲವು ತಂತ್ರಗಳನ್ನು ಮಾಡಿದ್ದರು. ಆದರೆ ಈ ಅವೆಲ್ಲವುಗಳ ನಡುವೆಯೂ ಸುಮಲತಾ ಗೆದ್ದು ಬೀಗಿದ್ದರು. ಈ ಸೇಡು ತೀರಿಸಿಕೊಂಡು, ಮತ್ತೆ ಮಂಡ್ಯವನ್ನು ತಮ್ಮ ವಶ ಮಾಡಿಕೊಳ್ಳಲು ಹೊರಟಿದ್ದಾರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯೇ ಸ್ಪರ್ಧೆ ಮಾಡುವುದು ಕೆಲ ಬೆಳವಣಿಗೆಯಿಂದಾನೇ ಪಕ್ಕಾ ಆಗಿದೆ.

ಈ ಬಾರಿಯೂ ನಿಖಿಲ್ ಅವರನ್ನೇ ನಿಲ್ಲಿಸಿ ಎಂದು ಕೆಲ ಕಾರ್ಯಕರ್ತರು ಅಭಿಪ್ರಾಯ ತಿಳಿಸಿದ್ದಾರೆ. ರಾಜಕೀಯ ಅಂತ ಪ್ರವೇಶ ಮಾಡಿ, ಸ್ಪರ್ಧೆ ಎಂದು ನಿಂತ ಎರಡು ಚುನಾವಣೆಯಲ್ಲೂ ನಿಖಿಲ್ ಸೋಲು ಕಂಡಿದ್ದಾರೆ. ಮೂರನೇ ಬಾರಿಯೂ ಸೋತರೆ ರಾಜಕೀಯ ಭವಿಷ್ಯಕ್ಕೆ ತೊಂದರೆಯಾಗಲಿದೆ ಎಂಬ ಅಭಿಪ್ರಾಯಪಟ್ಟಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ ಇನ್ನು ಐದು ವರ್ಷ ರಾಜಕೀಯಕ್ಕೆ ಬರಲ್ಲ, ಸಿನಿಮ ಮಾಡುತ್ತೀನಿ ಅಂತ ನಿಖಿಲ್ ನಿಶ್ಚಯ ಮಾಡಿದ್ದಾರೆ. ಹೀಗಾಗಿ ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿ ಅವರೇ ಸ್ಪರ್ಧೆ ಮಾಡುವ ಲಕ್ಷಣಗಳು ಕಾಣಿಸುತ್ತಿವೆ. ಅದರ ಭಾಗವಾಗಿಯೇ ಮಂಡ್ಯ, ಮದ್ದೂರು, ಕೆ ಆರ್ ಪೇಟೆ ಸೇರಿದಂತೆ ಲೋಕಸಭಾ ಕ್ಷೇತ್ರಗಳಲ್ಲಿ ಸಂಚಾರ ನಡೆಸುತ್ತಿದ್ದಾರೆ. ಮದುವೆ, ಸಭೆ, ಸಮಾರಂಭಗಳಲ್ಲಿ ಭಾಗಿಯಾಗಿ, ಜನರಿಗೆ ಹತ್ತಿರವಾಗುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್ : ತುರ್ತು ಸುದ್ದಿಗೋಷ್ಠಿ ನಡೆಸಿ 15 ಪ್ರಶ್ನೆ ಕೇಳಿದ ಕುಮಾರಸ್ವಾಮಿ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಂಧಿಸಿದಂತೆ ಇದೀಗ ಮಾಜಿ ಸಿಎಂ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ,

ತಂದೆ-ತಾಯಿಯ ಆರೋಗ್ಯದಲ್ಲಿ ಏನಾದರೂ ಏರುಪೇರಾದರೆ : ಕುಮಾರಸ್ವಾಮಿ ಆಕ್ರೋಶ

  ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ ನವರೇ ದೇವೇಗೌಡರಿಂದ ನೀವೂ ಬೆಳೆದಿದ್ದೀರಿ. ಅವರು ಏನಂತಾ ನನಗಿಂತ

ಸಂಸತ್ ಪ್ರವೇಶಿಸಿ, ಮೋದಿ ಪರ ಕೈ ಎತ್ತುತ್ತೇನೆ : ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಇಂದು ಲೋಕಸಭೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಈ ಬಾರಿ ಹೆಚ್ಚು ಸದ್ದು ಮಾಡಿದ್ದು ಮಾತ್ರ ಶಿವಮೊಗ್ಗ ಕ್ಷೇತ್ರ. ಚುನಾವಣೆಯಲ್ಲಿ ಮಗನಿಗೆ ಟಿಕೆಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಎಷ್ಟೋ ವರ್ಷಗಳಿಂದ ಬಿಜೆಪಿಯಲ್ಲಿದ್ದ ಈಶ್ವರಪ್ಪ,

error: Content is protected !!