ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್ ಸೇರ್ತಾರಾ..? ಈ ಫೋಟೋ ಹೇಳ್ತಾ ಇರೋದೇನು..?

ಬೆಂಗಳೂರು; ಡಿಸಿಎಂ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕರಿಗಾಗಿ ಔತಣಕೂಟ ಆಯೋಜಿಸಿದ್ದರು. ಈ ಔತಣಕೂಟದಲ್ಲಿ ಬಿಜೆಪಿಯ ನಾಯಕರು ಸಹ ಭಾಗಿಯಾಗಿದ್ದದ್ದು ಆಶ್ಚರ್ಯವಾಗಿತ್ತು. ಅದರಲ್ಲೂ ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಣದಲ್ಲಿ ಗುರುತಿಸಿಕೊಂಡಿರುವ ಮಾಜಿ ಸಚಿವ ರೇಣುಕಾಚಾರ್ಯ ಅವರು ಕಾಂಗ್ರೆಸ್ ಸೇರಿಕೊಳ್ಳುತ್ತಿದ್ದಾರಾ ಎಂಬ ಅನುಮಾನ ಕಾಡುವುದಕ್ಕೆ ಶುರುವಾಗಿದೆ. ಅದಕ್ಕೆ ಕಾರಣ ಇಂದು ವೈರಲ್ ಆಗಿರುವ ರೇಣುಕಾಚಾರ್ಯ ಅವರ ಫೋಟೋ.

ಹೌದು ಎಂ.ಪಿ.ರೇಣುಕಾಚಾರ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ, ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋ ನೋಡಿದ ರಾಜಕೀಯ ಗಣ್ಯರು, ಬಿಜೆಪಿ ನಾಯಕರು ಇವರೇನು ಕಾಂಗ್ರೆಸ್ ಸೇರುವ ಯೋಜನೆಯಲ್ಲಿದ್ದಾರಾ ಎಂಬ ಚರ್ಚೆ ಶುರು ಮಾಡಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅವರು ಐದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕರೆಲ್ಲರೂ ಡಿಕೆ ಶಿವಕುಮಾರ್ ಅವರನ್ನು ಅಭಿನಂದಿಸಿದ್ದರು. ಆದರೆ ಇದೇ ವೇಳೆ ಸದ್ದಿಲ್ಲದೆ ಡಿಸಿಎಂ ಡಿಕೆ ಶಿವಕುಮಾರ್ ಅವರುಗೆ ಹೂಗುಚ್ಛ ನೀಡಿ, ರೇಣುಚಾರ್ಯ ಅವರು ಕೂಡ ಅಭಿನಂದಿಸಿರುವುದು ಅನುಮಾನಕ್ಕೆ ಕಾರಣವಾಗಿದೆ.

ಇತ್ತ ಕಾಂಗ್ರೆಸ್ ಕೂಡ ಅವಕಾಶವನ್ನ ನೀಡಿದೆ. ಯಾರೂ ಬೇಕಾದರೂ ನಮ್ಮ ಪಕ್ಷಕ್ಕೆ ಬರಬಹುದು ಎಂದು. ಬೇರೆ ಪಕ್ಷದಿಂದ ಬರುವ ಎಲ್ಲರಿಗೂ ಸ್ವಾಗತ ಎಂದೇ ಹೇಳಿದ್ದಾರೆ. ಇದರ ನಡುವೆಯೇ ರೇಣುಕಾಚಾರ್ಯ ಅವರ್ಯಾಕೆ ಭೇಟಿ ಮಾಡಿದರು ಎಂಬ ಕುತೂಹಲ ಮೂಡಿದೆ. ತಮ್ಮ ಕ್ಷೇತ್ರದ ಅಭಿವೃದ್ದಿ ಅಂತ ನೆಪ ಹೇಳಿದ್ರು ಕೂಡ, ಅವರೀಗ ಶಾಸಕರಾಗಲಿ ಬೇರೆ ಯಾವುದೇ ಹುದ್ದೆಯಲ್ಲಾಗಲಿ ಇಲ್ಲ. ಹೀಗಾಗಿ ಎಲ್ಲರಿಗೂ ರೇಣುಕಾಚಾರ್ಯ ಮೇಲೆ ಅನುಮಾನ ಮೂಡಿದೆ.

suddionenews

Recent Posts

ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್‍ನಲ್ಲಿ ಮಹಿಳೆಯರಿಗೆ ಯಾವುದೇ ಉಪಯೋಗವಾಗಿಲ್ಲ : ಮಾಳಮ್ಮ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

4 minutes ago

ಇಫ್ತಿಯಾರ್ ಕೂಟದಲ್ಲಿ ಭಾಗವಹಿಸಿ ಶುಭಕೋರಿದ ಎಸ್.ಪಿ. ರಂಜಿತ್‍ಕುಮಾರ್ ಬಂಡಾರು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552   ಸುದ್ದಿಒನ್, ಚಿತ್ರದುರ್ಗ,…

15 minutes ago

ಚಿತ್ರದುರ್ಗ | ಮಾರ್ಚ್ 24ರಂದು ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ. ಮಾರ್ಚ್15: ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇದೇ ಮಾರ್ಚ್ 24ರಂದು ಬೆಳಿಗ್ಗೆ 11ಕ್ಕೆ ಕೆಡಿಪಿ ತ್ರೈಮಾಸಿಕ ಪ್ರಗತಿ…

57 minutes ago

ಕೆಎಂಎಸ್ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 15 : 2024-25ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಬರುವ ಕೆಎಂಎಸ್ ಪ್ರಥಮ ದರ್ಜೆ ಕಾಲೇಜು…

1 hour ago

ರಾಮಲಿಂಗಾರೆಡ್ಡಿ ತಮ್ಮ ಖಾತೆ ಬದಲಾವಣೆಗೆ ಬಯಸಿದ್ದಾರಾ..?

ಕಾಂಗ್ರೆಸ್ ಸರ್ಕಾರದಲ್ಲಿ ಬಜೆಟ್ ಮುಗಿದ ಮೇಲೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದೀಗ ಖಾತೆ ಬದಲಾವಣೆಗೆ…

1 hour ago

ಪ್ರಾಣಿ ಬಲಿ ತಡೆ : ನಾಯಕನಹಟ್ಟಿ ಜಾತ್ರೆಯಲ್ಲಿ ಅಹಿಂಸೆ ಪಾಲಿಸುವ ಸಂದೇಶ ಯಾತ್ರೆಗೆ ಚಾಲನೆ

ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಪ್ರಾಣಿ ಬಲಿ ಕೈಬಿಟ್ಟು, ಅಹಿಂಸಾತ್ಮಕವಾಗಿ ಸಾತ್ವಿಕ ಪೂಜೆ ಸಲ್ಲಿಸಲು ಭಕ್ತರಲ್ಲಿ ಜಾಗೃತಿ ಮೂಡಿಸಲು,…

1 hour ago