ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಮಾಡಾಳು ಪ್ರಶಾಂತ್ ಕಚೇರಿಯಲ್ಲಿ ಲೋಕಾಯುಕ್ತ ದಾಳಿಯಿಂದ ಪತ್ತೆಯಾಗಿದ್ದು ಕೋಟಿ ಕೋಟಿ ಹಣ. ಬಗೆದಷ್ಟು ಮಾಡಾಳು ಭ್ರಷ್ಟಾಚಾರದ ಸಾಮ್ರಾಜ್ಯ ತೆರೆದುಕೊಳ್ಳುತ್ತಾ ಇದೆ. ಸದ್ಯ ಮಾಡಾಳು ಪ್ರಶಾಂತ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗ ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಲೋಕಾಯುಕ್ತ ಅಧಿಕಾರಿಗಳಿಂದ ಲುಕ್ ಔಟ್ ನೋಟೀಸ್ ಕೂಡ ಹೊರಡಿಸಲಾಗಿದೆ.
ಮಗನ ಮೋಸದ ಜಾಲ ಪತ್ತೆಯಾದ ಕೂಡಲೇ ಮಾಡಾಳು ವಿರೂಪಾಕ್ಷಪ್ಪ ಎಸ್ಕೇಪ್ ಆಗಿದ್ದರು. ಬಂಧನದ ಭೀತಿಗೆ ಒಳಗಾಗಿದ್ದರು. ಆದ್ರೆ ಇಂದು ಅವರ ಭವಿಷ್ಯ ನಿರ್ಧಾರವಾಗಲಿದೆ. ವಿರೂಪಾಕ್ಷಪ್ಪ ಅವರ ವಕೀಲರು ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಹಾಕಿದ್ದಾರೆ. ತುರ್ತು ವಿಚಾರಣೆ ನಡೆಸುವಂತೆ ಕೋರಿದ್ದಾರೆ.
ಮಾಡಾಳು ಪ್ರಶಾಂತ್ ಹಣ ಪಡೆಯುವಾಗ ವಿರೂಪಾಕ್ಷಪ್ಪ ಆ ಸ್ಥಳದಲ್ಲಿ ಇಲ್ಲದೆ ಇದ್ದ ಕಾರಣವನ್ನೆ ಇಟ್ಟುಕೊಂಡು ವಕೀಲರು ವಾದ ಮಂಡಿಸುವ ಸಾಧ್ಯತೆ ಇದೆ. ಹೈಕೋರ್ಟ್ ನಿಂದ ಇಂದು ಜಾಮೀನು ಸಿಕ್ಕರೆ ವಿರೂಪಾಕ್ಷಪ್ಪ ಅವರಿಗೆ ರಿಲೀಫ್ ಸಿಕ್ಕಂತೆ. ಜಾಮೀನು ತಿರಸ್ಕಾರ ಮಾಡಿದರೆ ಅರೆಸ್ಟ್ ವಾರೆಂಟ್ ಜಾರಿಯಾಗುವ ಸಾಧ್ಯತೆ ಇದೆ. ಯಾಕಂದ್ರೆ ಮಾಡಾಳು ಪ್ರಶಾಂತ್ ಅವ್ಯವಹಾರದಲ್ಲಿ ವಿರೂಪಾಕ್ಷಪ್ಪ ಬೆಂಬಲವೂ ಹೆಚ್ಚಿದೆ ಎಂದು ತಿಳಿದು ಬಂದಿದೆ ಎನ್ನಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್