Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕಾರಣಕ್ಕೆ ಬರ್ತಾರಾ..? ಸಿಎಂ ರೇಸ್ ನಿಂದ ಡಿಕೆಶಿ ಹಿಂದೆ ಉಳೀದ್ರಾ..?

---Advertisement---

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಎಲ್ಲವೂ ನಾರ್ಮಲ್ ಆಗಿಲ್ಲ ಅನ್ನೋದು ಎಲ್ಲರಿಗೂ ಕಾಣಿಸುತ್ತಿರುವ ಸತ್ಯ. ಅದರಲ್ಲೂ ಸಿಎಂ ಸ್ಥಾನದ ವಿಚಾರವಾಗಿ ಹಗ್ಗಜಗ್ಗಾಟ ನಡೆಯುತ್ತಲೆ ಇದೆ. ಈಗ ಹೊಸದಾಗಿ ಕೇಳಿ ಬರುತ್ತಿರುವ ವಿಷಯ ಏನು ಅಂದ್ರೆ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಾ ರಾಜಕಾರಣಕ್ಕೆ ಬರ್ತಾ ಇದಾರೆ ಅನ್ನೋ ಮಾತು. ಆದರೆ ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದರು, ಎಲ್ಲರನ್ನು ಲೀಡ್ ಮಾಡುವ ಸ್ಥಾನದಲ್ಲಿದ್ದು, ಇಲ್ಲಿಗೆ ಯಾಕೆ ಬರಲಿ. ಸಮುದ್ರದಲ್ಲಿ ಈಜಾಡುವವನನ್ನ ಕಾವೇರಿ ನದಿಯಲ್ಲಿ ಈಜಾಡಿ ಅಂದಂಗೆ ಆಯ್ತು ಅಂತ ಹೇಳುವ ಮೂಲಕ ಇಲ್ಲ ಎಂದಿದ್ದರು. ಆದರೆ ಯಾವುದೇ ವಿಚಾರವಾದರೂ ಬೆಂಕಿ ಇಲ್ಲದೆ ಹೊಗೆಯಾಡುವುದಕ್ಕೆ ಸಾಧ್ಯವೇ ಇಲ್ಲ ಅಲ್ವಾ.

ಸದ್ಯ ರಾಷ್ಟ್ರ ರಾಜಕಾರಣದಲ್ಲಿ ಇಡೀ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುತ್ತಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯ ರಾಜಕಾರಣಕ್ಕೆ ಕರೆತರ್ತಾರೆ ಎಂಬ ವಿಚಾರಕ್ಕೂ ಒಂದು ಸ್ಟ್ರಾಂಗ್ ಕಾರಣವಿದೆ. ಇತ್ತೀಚೆಗಷ್ಟೇ ಕೆ.ಎನ್.ರಾಜಣ್ಣ ರಾಜ್ಯದಲ್ಲಿ ಸೆಪ್ಟೆಂಬರ್ ಕ್ರಾಂತಿ ಆಗುತ್ತೆ ಎಂದಿದ್ದರು. ಈ ಕ್ರಾಂತಿ ಹೇಳಿಕೆಯನ್ನ ಅವರೇ ಅದಾದ ಮೇಲೆ ಉಲ್ಟಾ ಕೂಡ ಹೊಡೆದಿದ್ದರು. ಆದರೂ ಅದಕ್ಕೂ ಮುನ್ನ ಕ್ರಾಂತಿ ಬಗ್ಗೆ ಸಾಕಷ್ಟು ಚರ್ಚೆಗಳಾದವು. ಅದು ಸಿಎಂ ಬದಲಾವಣೆಯ ಕ್ರಾಂತಿಯೇ ಇರಬೇಕು ಎನ್ನಲಾಗಿತ್ತು.

ಇದರ ನಡುವೆ ಸಿದ್ದರಾಮಯ್ಯ ಅವರು ಈ ಐದು ವರ್ಷದ ಅವಧಿಗೆ ನಾನೇ ಸಿಎಂ ಎಂದಿದ್ದರು. ಹಾಗೇ ಡಿಸಿಎಂ ಆಗಿರಯವ ಡಿಕೆ ಶಿವಕುಮಾರ್ ಅವರು ಇನ್ನೇನು ಮಾಡಲು ಆಗುತ್ತೆ ಎಂಬ ಮಾತುಗಳನ್ನ ಆಡಿದ್ದರು. ಈ ಎಲ್ಲಾ ಬೆಳವಣಿಗೆಗಳಿಗೆ ಬ್ರೇಕ್ ಹಾಕೋದು ಅಂದ್ರೆ ಅದು ಮಲ್ಲಿಕಾರ್ಜುನ ಖರ್ಗೆ ಅವರನ್ನ ಸಿಎಂ ಮಾಡೋದು ಎಂಬ ಲೆಕ್ಕಾಚಾರ ಹೈಕಮಾಂಡ್ ದು ಎನ್ನಲಾಗ್ತಾ ಇದೆ. ಮೊದಲಿನಿಂದಾನು ರಾಜ್ಯದಲ್ಲಿ ದಲಿತ ಸಿಎಂ ಕೂಗು ಬೇರೆ ಕೇಳಿಸ್ತಾ ಇದೆ. ಹೀಗಾಗಿ ಈ ಗ್ಯಾಪ್ ನಲ್ಲಿಯೇ ದಲಿತ ಸಿಎಂ ಮಾಡುತ್ತಾರಾ ಎಂಬ ಪ್ರಶ್ನೆಯೂ ಎಲ್ಲರನ್ನ ಕಾಡುತ್ತಾ ಇದೆ. ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಾ ರಾಜಕಾರಣಕ್ಕೆ ಬರ್ತಾರೆ ಅಂದಾಗ ಯಾರೂ ಏನು ಮಾತಾಡಲ್ಲ ಅನ್ನೋದು ಕೂಡ ಕಾರಣವಾಗಿದೆ ಎಂಬ ಮಾತುಗಳು ಕೇಳಿ ಬರ್ತಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment