Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮತ್ತೆ ಕಾಂಗ್ರೆಸ್ ಪಕ್ಷ ಸೇರುತ್ತಾರಾ ಮುನಿರತ್ನ..? ಆಪರೇಷನ್ ಹಸ್ತದ ಬಗ್ಗೆ ಹೇಳಿದ್ದೇನು..?

---Advertisement---

 

 

ಬೆಂಗಳೂರು: ಲೋಕಸಭಾ ಚುನಾವಣೆ ಸನಿಹವಾಗುತ್ತಿರುವ ಬೆನ್ನಲ್ಲೇ ಪಕ್ಷಗಳು ಚುನಾವಣಾ ತಯಾರಿಯಲ್ಲಿವೆ. ಅದಷ್ಟೇ ಅಲ್ಲದೆ ಸದ್ಯ ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ಸದ್ದು ಮಾಡುತ್ತಿದೆ. ಚುನಾವಣೆಯ ಹೊಸ್ತಿಲಲ್ಲೇ ಕಾಂಗ್ರೆಸ್ ನಾಯಕರು ಬಿಜೆಪಿಯಲ್ಲಿರುವವರನ್ನು ಸೆಳೆಯುತ್ತಿರುವ ಬಗ್ಗೆ ಚರ್ಚೆ ಶುರುವಾಗಿದೆ.

ಈ ಬಗ್ಗೆ ಬಿಜೆಪಿ ಶಾಸಕ ಮುನಿರತ್ನ ಮಾತನಾಡಿ, ಬಿಜೆಪಿ ಪಕ್ಷ ಬಹಳ ಗೌರವದಿಂದ ನೋಡುತ್ತಿದೆ. ಇಲ್ಲಿಯವರೆಗೂ ಯಾರೂ ಏಕವಚನದಲ್ಲಿ ಕೂಡ ಮಾತನಾಡಿಲ್ಲ. ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರುವ ಯಾವುದೇ ಯೋಚನೆ ನನಗೆ ಇಲ್ಲ. ಅಂಥ ಪರಿಸ್ಥಿತಿ ಬಂದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದಿದ್ದಾರೆ.

 

17 ಜನರಲ್ಲಿ ಯಾರೂ ಹೋಗ್ತಾರೋ ಗೊತ್ತಿಲ್ಲ. 16 ಜನ ಹೋದರೂ ಕೂಡ ನಾನಂತು ಬಿಜೆಪಿ ಬಿಟ್ಟು ಹೋಗಲ್ಲ. ಬೇಕಾದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಮತ್ತೆ ಕಾಂಗ್ರೆಸ್ ಗೆ ಹೋಗುವ ಮಾತೇ ಇಲ್ಲ. ಬೆಂಗಳೂರಿನ ಸಚಿವರಾಗಿದ್ದರಿಂದ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೀನಿ. ಯಾರಾದ್ರೂ ಅವರ ಮನೆಗೆ ಹಿಂಬಾಗಿಲಿನಿಂದ ಹೋಗಿದ್ದಾರಾ.? ಬುರ್ಖಾ ಹಾಕಿಕೊಂಡು ಹೋಗಿದ್ದಾರಾ..? ಮೊದಲು ಅವರ ಶಾಸಕರಿಗೆ ಅನುದಾನ ನೀಡಲಿ, ನಂತರ ನಮಗೆ.

ಡಿಕೆಶಿ ಜೊತೆಗೆ ರಾಜಕೀಯ ಸಂಬಂಧ ಹೊಂದಿಲ್ಲ. ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಯಾರೂ ಬೇಕಾದರೂ ಮಾತನಾಡಬಹುದು. ಅದಕ್ಕೆಲ್ಲಾ ರಾಜಕೀಯ ಬಣ್ಣ ಕಟ್ಟಬಾರದು. ನೀನು ರಾಜೀನಾಮೆ ಕೊಟ್ಟರೆ ನಾವೂ ನಿಮ್ಮ ಕ್ಷೇತ್ರದ ಅಭಿವೃದ್ಧಿ ಮಾಡ್ತೀವಿ ಅನ್ನೋದಾದ್ರೆ ನಾನು ಅದಕ್ಕೂ ಸಿದ್ಧ. ಡಿಕೆ ಶಿವಕುಮಾರ್ ಅವರು ಮೊದಲು ಏನಾಗಿ ಉತ್ತರ ಕೊಡುತ್ತಿದ್ದಾರೆ ಎಂಬುದು ಗಮನವಿರಲಿ. ಅವರು ಕೆಪಿಸಿಸಿ ಅಧ್ಯಕ್ಷರಾಗಿ ಉತ್ತರ ನೀಡಿತ್ತಿದ್ದಾರಾ..? ಅಥವಾ ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಉತ್ತರ ನೀಡುತ್ತಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...