Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಕಾಂಗ್ರೆಸ್ ಪಕ್ಷ ಸೇರುತ್ತಾರಾ ಮುನಿರತ್ನ..? ಆಪರೇಷನ್ ಹಸ್ತದ ಬಗ್ಗೆ ಹೇಳಿದ್ದೇನು..?

Facebook
Twitter
Telegram
WhatsApp

 

 

ಬೆಂಗಳೂರು: ಲೋಕಸಭಾ ಚುನಾವಣೆ ಸನಿಹವಾಗುತ್ತಿರುವ ಬೆನ್ನಲ್ಲೇ ಪಕ್ಷಗಳು ಚುನಾವಣಾ ತಯಾರಿಯಲ್ಲಿವೆ. ಅದಷ್ಟೇ ಅಲ್ಲದೆ ಸದ್ಯ ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ಸದ್ದು ಮಾಡುತ್ತಿದೆ. ಚುನಾವಣೆಯ ಹೊಸ್ತಿಲಲ್ಲೇ ಕಾಂಗ್ರೆಸ್ ನಾಯಕರು ಬಿಜೆಪಿಯಲ್ಲಿರುವವರನ್ನು ಸೆಳೆಯುತ್ತಿರುವ ಬಗ್ಗೆ ಚರ್ಚೆ ಶುರುವಾಗಿದೆ.

ಈ ಬಗ್ಗೆ ಬಿಜೆಪಿ ಶಾಸಕ ಮುನಿರತ್ನ ಮಾತನಾಡಿ, ಬಿಜೆಪಿ ಪಕ್ಷ ಬಹಳ ಗೌರವದಿಂದ ನೋಡುತ್ತಿದೆ. ಇಲ್ಲಿಯವರೆಗೂ ಯಾರೂ ಏಕವಚನದಲ್ಲಿ ಕೂಡ ಮಾತನಾಡಿಲ್ಲ. ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರುವ ಯಾವುದೇ ಯೋಚನೆ ನನಗೆ ಇಲ್ಲ. ಅಂಥ ಪರಿಸ್ಥಿತಿ ಬಂದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದಿದ್ದಾರೆ.

 

17 ಜನರಲ್ಲಿ ಯಾರೂ ಹೋಗ್ತಾರೋ ಗೊತ್ತಿಲ್ಲ. 16 ಜನ ಹೋದರೂ ಕೂಡ ನಾನಂತು ಬಿಜೆಪಿ ಬಿಟ್ಟು ಹೋಗಲ್ಲ. ಬೇಕಾದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಮತ್ತೆ ಕಾಂಗ್ರೆಸ್ ಗೆ ಹೋಗುವ ಮಾತೇ ಇಲ್ಲ. ಬೆಂಗಳೂರಿನ ಸಚಿವರಾಗಿದ್ದರಿಂದ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೀನಿ. ಯಾರಾದ್ರೂ ಅವರ ಮನೆಗೆ ಹಿಂಬಾಗಿಲಿನಿಂದ ಹೋಗಿದ್ದಾರಾ.? ಬುರ್ಖಾ ಹಾಕಿಕೊಂಡು ಹೋಗಿದ್ದಾರಾ..? ಮೊದಲು ಅವರ ಶಾಸಕರಿಗೆ ಅನುದಾನ ನೀಡಲಿ, ನಂತರ ನಮಗೆ.

ಡಿಕೆಶಿ ಜೊತೆಗೆ ರಾಜಕೀಯ ಸಂಬಂಧ ಹೊಂದಿಲ್ಲ. ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಯಾರೂ ಬೇಕಾದರೂ ಮಾತನಾಡಬಹುದು. ಅದಕ್ಕೆಲ್ಲಾ ರಾಜಕೀಯ ಬಣ್ಣ ಕಟ್ಟಬಾರದು. ನೀನು ರಾಜೀನಾಮೆ ಕೊಟ್ಟರೆ ನಾವೂ ನಿಮ್ಮ ಕ್ಷೇತ್ರದ ಅಭಿವೃದ್ಧಿ ಮಾಡ್ತೀವಿ ಅನ್ನೋದಾದ್ರೆ ನಾನು ಅದಕ್ಕೂ ಸಿದ್ಧ. ಡಿಕೆ ಶಿವಕುಮಾರ್ ಅವರು ಮೊದಲು ಏನಾಗಿ ಉತ್ತರ ಕೊಡುತ್ತಿದ್ದಾರೆ ಎಂಬುದು ಗಮನವಿರಲಿ. ಅವರು ಕೆಪಿಸಿಸಿ ಅಧ್ಯಕ್ಷರಾಗಿ ಉತ್ತರ ನೀಡಿತ್ತಿದ್ದಾರಾ..? ಅಥವಾ ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಉತ್ತರ ನೀಡುತ್ತಿದ್ದಾರಾ ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!