ಇನ್ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ : ಗೀತಾ ಶಿವರಾಜ್ಕುಮಾರ್ ಮಹತ್ವದ ಘೋಷಣೆ

1 Min Read

ಶಿವಮೊಗ್ಗ: ದೊಡ್ಮನೆಯ ದೊಡ್ಡ ಸೊಸೆ ಗೀತಾ ಶಿವರಾಜ್‍ಕುಮಾರ್, ತಮ್ಮ ತಂದೆಯ ಹಾದಿಯಲ್ಲಿಯೇ ಅಂದ್ರೆ ಬಂಗಾರಪ್ಪ ಅವರಂತೆಯೇ ರಾಜಕೀಯದಲ್ಲಿ ಸಾಧಿಸುವ ಛಲ ಹೊಂದಿದ್ದರು. ಶಿವಣ್ಣ ಕೂಡ ಪತ್ನಿಯ ರಾಜಕೀಯ ಗೆಲುವಿಗಾಗಿ ಸಾಕಷ್ಟು ಓಡಾಡಿದರು. ಶಿವಮೊಗ್ಗದಲ್ಲೆಲ್ಲಾ ಓಡಾಡಿ, ಪ್ರಚಾರವನ್ನು ಮಾಡಿದರು. ಆದರೆ ಅದ್ಯಾಕೋ ಏನೋ ಜನ ಎರಡು ಬಾರಿಯೂ ಕೈಹಿಡಿಯಲಿಲ್ಲ. ಇದೀಗ ಗೀತಕ್ಕನೇ ರಾಜಕೀಯದಿಂದ ದೂರಾಗುವ ಮಾತುಗಳನ್ನ ಆಡಿದ್ದಾರೆ.

 

ಶಿವಮೊಗ್ಗ ಜಿಲ್ಲಾ ಕಾಂಗ್ರೆಸಗ ಮಹಿಳಾಪ ಘಟಕದ ಅಧ್ಯಕ್ಷೆಯಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ ಮಾಡಿದರು. ಹೀಗಾಗಿ ಅದರ ಅದ್ದೂರಿ ಕಾರ್ಯಕ್ರಮವೂ ನೆರವೇರಿತ್ತು. ಗೀತಕ್ಕ ಕೂಡ ಆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ತಮ್ಮ ರಾಜಕೀಯದ ಭವಿಷ್ಯದ ಬಗ್ಗೆ ಮಾತನ್ನಾಡಿದ್ದಾರೆ. ಇನ್ನು ಮುಂದೆ ನಾನು ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಗೀತಾ ಶಿವರಾಜ್ ಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ.

ಚುನಾವಣೆಗೆ ಸ್ಪರ್ಧಿಸಲ್ಲ, ಆದರೆ ನಿಮ್ಮೆಲ್ಲರ ಜೊತೆಗೆ ನಿಂತಿರುತ್ತೇನೆ. ಮುಂದಿನ ಚುನಾವಣೆಗೆ ಬಂದು ಕ್ಯಾಂಪೇನ್ ಮಾಡುತ್ತೇನೆ. ಚುನಾವಣೆಯಲ್ಲಿ ಸ್ಪರ್ಧಿಸಿ ಮಂಜುನಾಥ ಭಂಡಾರಿಗೂ ನಾನು ತೊಂದರೆ ಕೊಡುವುದಿಲ್ಲ ಎಂದರು. ಮಹಿಳೆಯರು ಎಂದಿಗೂ ಅಬಲೆಯರಲ್ಲ, ಎಲ್ಲರೂ ಸಬಲೆಯರೇ. ಮಹಿಳೆಯರಿಗೆ ಶಕ್ತಿ ನೀಡಿದರೆ ಎಂತಹ ಕೆಲಸವನ್ನಾದರೂ ಮಾಡುತ್ತಾರೆ. ಕಳೆದ ಹತ್ತು ವರ್ಷಗಳಿಂದ ಶ್ವೇತಾ ಬಂಡಿಯನ್ನು ನಾನು ಬಲ್ಲೆ. ನಿಮ್ಮ ಕಷ್ಟಗಳಿಗೆ ನಾನು ಸ್ಪಂದಿಸುತ್ತೇನೆ. ಏನೇ ಕಷ್ಟವಿದ್ದರೂ ಮಧು ಬಂಗಾರಪ್ಪ ಹಿಡಿದುಕೊಂಡು ಕೆಲಸ ಮಾಡಿಸಿಕೊಳ್ಳಿ ಎಂದು ಗೀತಾ ಶಿವರಾಜ್​ ಕುಮಾರ್ ಹೇಳಿದರು. ಇದು ಕೇಳುಗರಿಗೆ ಅಕ್ಷರಶಃ ಶಾಕ್ ಆಗಿದೆ. ಇನ್ನು ಕೆಲವರು ಅವರ ನಿರ್ಧಾರವನ್ನ ಗೌರವಿಸಿದ್ದಾರೆ. ಶಿವಣ್ಣ ಈಗಷ್ಟೇ ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡಿದ್ದಾರೆ. ಹೀಗಾಗಿ ಆ ಕಡೆಗೆ ಸಮಯ ಕೊಡಬೇಕಾಗಿದೆ.

Share This Article
Enable Notifications OK No thanks