Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮೈಸೂರು – ಕೊಡಗು ನಮ್ಮಪ್ಪನ ಆಸ್ತಿ ಅಲ್ಲ : ತಮ್ಮ ಕ್ಷೇತ್ರವನ್ನು ಬಿಟ್ಟು ಕೊಡುತ್ತಾರಾ ಪ್ರತಾಪ್ ಸಿಂಹ..?

---Advertisement---

 

 

ಕೊಡಗು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಹಲವರಿಗೆ ಕ್ಷೇತ್ರ ಬಿಟ್ಟು ಕೊಡುವ ಆತಂಕ ಎದುರಾಗಿದೆ. ಅದರಲ್ಲೂ ಹಳೇ ಮೈಸೂರು ಭಾಗವನ್ನು ಜೆಡಿಎಸ್ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಹೀಗಾಗಿ ಪ್ರತಾಪ್ ಸಿಂಹ ತಮ್ಮ ಲೋಕಸಭಾ ಕ್ಷೇತ್ರವನ್ನು ಬಿಟ್ಟು ಕೊಡುತ್ತಾರಾ ಎಂಬ ಪ್ರಶ್ನೆ ಎದುರಾಗಿದೆ. ಇದಕ್ಕೆ ಸಂಸದ ಪ್ರತಾಪ್ ಸಿಂಹ ಉತ್ತರ ನೀಡಿದ್ದಾರೆ.

 

ಮಡಿಕೇರಿಯಲ್ಲಿ ಮಾತನಾಡಿದ ಅವರು, 2024ರ ಲೋಕಸಭಾ ಚುನಾವಣೆಯಲ್ಲಿ ನನ್ನ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾರೇ ನಿಂತರೂ ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ. ಮೈಸೂರು – ಕೊಡಗು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ಮಾಹಿತಿ ಇಲ್ಲ. ಹಾಗಂತ ಮೈಸೂರು – ಕೊಡಗು ಕ್ಷೇತ್ರ ನಮ್ಮಪ್ಪನ ಆಸ್ತಿಯೂ ಅಲ್ಲ. ಆದರೆ ಬಿಜೆಪಿಯಲ್ಲಿ ಯಾರನ್ನೇ ನಿಲ್ಲಿಸಿದರೂ ಈ ಕ್ಷೇತ್ರದಲ್ಲಿ ಎರಡು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲುತ್ತಾರೆ ಎಂದಿದ್ದಾರೆ.

ಇದೇ ವೇಳೆ ಕೊಡಗು ಪೊಲೀಸ್ ಇಲಾಖೆಯ ವಿರುದ್ಧವೂ ಗರಂ ಆಗಿದ್ದಾರೆ. ತೆಲಂಗಾಣಕ್ಕೆ 42 ಕೋಟಿ ಲೂಟಿ ಹಣ ಕಳುಹಿಸಿದ್ದಾರೆಂದು ಬಿಜೆಪಿ ಆರೋಪ ಮಾಡಿತ್ತು. ಆದರೆ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಕಿರುಕುಳ ನೀಡಿದ್ದಾರೆ. ಠಾಣೆಗೆ ಮುಚ್ಚಳಿಕೆ ಬರೆದುಕೊಡಬೇಕಾಗಿರುವುದು ಡಿಕೆ ಶಿವಕುಮಾರ್. ಮೊದಲು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಳಿ ಮುಚ್ಚಳಿಕೆ ಬರೆಸಿಕೊಳ್ಳಿ. ಬಿಜೆಪಿ ವಿರುದ್ಧ ಕಮೀಷನ್ ಆರೋಪ ಮಾಡಿ, ಪತ್ರಿಕೆಯಲ್ಲಿ ಜಾಹೀರಾತು ನೀಡಿದ್ದರು. ಪೇಸಿಎಂ ಎಂದು ಪೋಸ್ಟರ್ ಹಾಕಿದರು. 40% ಎಂದು ಊರಿಗೆಲ್ಲಾ ತಮಟೆ ಹೊಡೆದರು. ಹೀಗಾಗಿ ಮೊದಲು ಅವರಿಂದ ಮುಚ್ಚಳಿಕೆ ಬರೆಸಿಕೊಳ್ಳಿ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...